ಹೆಚ್ಚಿದ ಅಸಮಾಧಾನ: ಹೈಕಮಾಂಡ್ನಿಂದ ಬಂತು ಖಡಕ್ ಆದೇಶ
Recommended Video
ಬೆಂಗಳೂರು, ಆಗಸ್ಟ್ 28: ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಎದ್ದಿದ್ದ ಅತೃಪ್ತಿ ಖಾತೆ ಹಂಚಿಕೆ ಬಳಿಕ ಇನ್ನಷ್ಟು ಹೆಚ್ಚಾಗಿದೆ. ಅತೃಪ್ತಿಯನ್ನು ಶಮನ ಮಾಡಲು 'ದಂಡ'ದ ಪ್ರಯೋಗ ಮಾಡಲು ಹೈಕಮಾಂಡ್ ಮುಂದಾಗಿದೆ.
ಯಡಿಯೂರಪ್ಪ ಅವರಿಗೆ ಖಡಕ್ ಆದೇಶವನ್ನು ಬಿಜೆಪಿ ಹೈಕಮಾಂಡ್ ರವಾನಿಸಿದ್ದು, ಅತೃಪ್ತಿ ಹೆಚ್ಚಾದರೆ ಶಿಸ್ತು ಉಲ್ಲಂಘಿಸುವ ಶಾಸಕರಿಗೆ ಅನಾಮತ್ತು ರಾಜೀನಾಮೆ ಪಡೆಯಿರಿ ಎಂದು ಹೇಳಲಾಗಿದೆ..
ಅತೃಪ್ತಿಯನ್ನು ಹೊರಹಾಕುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಶಾಸಕರು, ಹೈಕಮಾಂಡ್ ನಿರ್ಧಾರವನ್ನು ಪ್ರಶ್ನೆ ಮಾಡುವ ಶಾಸಕರು, ಖಾತೆ ಹಂಚಿಕೆ ಬಗ್ಗೆ ಅಸಮಾಧಾನಿತ ಶಾಸಕರಿಗೆ ಎಚ್ಚರಿಕೆ ನೀಡಿ ಅತೃಪ್ತಿ ಮತ್ತು ಅಶಿಸ್ತು ಮುಂದುವರೆಸಿದರೆ ರಾಜೀನಾಮೆ ಪಡೆಯಿರೆಂದು ಹೈಕಮಾಂಡ್ ಸೂಚನೆ ರವಾನಿಸಿದೆ.

ಕೆಲವು ದಿನಗಳ ಹಿಂದೆ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾಗ ಯಡಿಯೂರಪ್ಪ ಅವರಿಗೆ . 'ಅತೃಪ್ತರನ್ನು ನಿಭಾಯಿಸುವ ಜವಾಬ್ದಾರಿ ನಿಮ್ಮದೆ, ಅದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ, ಅನರ್ಹ ಶಾಸಕರ ಜವಾಬ್ದಾರಿಯೂ ನಿಮ್ಮದೇ' ಎಂದು ಯಡಿಯೂರಪ್ಪ ಮೇಲೆ ಎಲ್ಲ ಜವಾಬ್ದಾರಿಯನ್ನು ಹೊರಿಸಿತ್ತು.
ಸಂಪುಟ ವಿಸ್ತರಣೆ ಬಳಿಕ ಸಣ್ಣದಾಗಿ ಪ್ರಾರಂಭವಾಗಿದ್ದ ಅಸಮಾಧಾನ, ಖಾತೆ ಹಂಚಿಕೆ ನಂತರ ದೊಡ್ಡದಾಗಿದ್ದು, ಹಿರಿಯ ಶಾಸಕರು, ಸಚಿವರುಗಳೇ ಅತೃಪ್ತಿ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ರಾಜ್ಯದ ಜನ ನೋಡಿದ್ದ ಕಚ್ಚಾಟ ನಿಧಾನಕ್ಕೆ ಬಿಜೆಪಿ ಸರ್ಕಾರದಲ್ಲೂ ಪ್ರಾರಂಭವಾಗುವ ಲಕ್ಷಣಗಳು ಕಾಣುತ್ತಿವೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications