ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆ
ಬೆಂಗಳೂರು, ಏಪ್ರಿಲ್ 19; "ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಚಿಂತನೆ ಇದೆ. ಕೋವಿಡ್ ಪ್ರಕರಣಗಳ ಹೆಚ್ಚಳದ ಕಾರಣದಿಂದಾಗಿ ಚುನಾವಣೆ ಬೇಡವೆಂಬ ಸಲಹೆ ಇವೆ" ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
Recommended Video
ಸೋಮವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, "ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಬರುತ್ತಿದೆ. ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ಇದೆ" ಎಂದರು.
"ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಈ ಕುರಿತು ಚರ್ಚಿಸುತ್ತೇವೆ. ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ. ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ" ಎಂದು ತಿಳಿಸಿದರು.

"ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಚುನಾವಣೆಯಲ್ಲಿ ಮೂರುವರೆ ಕೋಟಿ ಜನರು ಭಾಗಿಯಾಗಬೇಕು ಹಾಗಾಗಿ ಚುನಾವಣೆ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಚರ್ಚೆ ಬಳಿಕ ಈ ಕುರಿತು ಚುನಾವಣಾ ಆಯೋಗಕ್ಕೆ ಶಿಫಾರಸು ಕಳಿಸುತ್ತೇವೆ" ಎಂದರು.
"ಚುನಾವಣೆ ಮುಂದೂಡುವ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಹಾಗಾಗಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ. ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ" ಎಂದು ಈಶ್ವರಪ್ಪ ಹೇಳಿದರು.
ಜಿ.ಪಂ., ತಾ ಪಂ. ಚುನಾವಣೆ ಬೇಡವೆಂಬ ಸಲಹೆ ಇವೆ ಕೋವಿಡ್ 19 ಹೆಚ್ಚಳದಿಂದ ಸದ್ಯಕ್ಕೆ ಚುನಾವಣೆಗಳನ್ನು ಮುಂದಕ್ಕೆ ಹಾಕಲು ಚಿಂತನೆಯನ್ನು ಸಂಪುಟದಲ್ಲಿ ಮಾಡಿ ನಿರ್ಧರಿಸಲಾಗುವುದು, ಅವಧಿ ಮುಗಿದ ಜಿಲ್ಲೆಗಳಲ್ಲಿ ಆಡಳಿತಾಧಿಕಾರಿ ನೇಮಿಸಲು ಕೂಡ ಚಿಂತನೆ ನಡೆಸಲಾಗಿದೆ.
— K S Eshwarappa (@ikseshwarappa) April 19, 2021
ಕೋವಿಡ್ ಪರಿಸ್ಥಿತಿಯಲ್ಲಿಯೂ ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಯನ್ನು ನಡೆಸಲಾಗಿದೆ. ಜೂನ್ ತಿಂಗಳಿನಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು.
ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹಬ್ಬುತ್ತಿದೆ. ಭಾನುವಾರ ರಾಜ್ಯದಲ್ಲಿ 19067 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 133543ಕ್ಕೆ ಏರಿಕೆಯಾಗಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್












Click it and Unblock the Notifications