Get Updates
Get notified of breaking news, exclusive insights, and must-see stories!

ತಲವಾರ್ ಪ್ರದರ್ಶನ: ಸಂಘಪರಿವಾರದ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಬೆಂಗಳೂರು, ಅಕ್ಟೋಬರ್ 20: ನವರಾತ್ರಿ ದಿನದಂದು ಸಂಘಪರಿವಾರದವರು ತಲವಾರ್ ಪ್ರದರ್ಶನದ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯದರ್ಶಿ ಆಶ್ರಫ್ ಆಗ್ರಹಿಸಿದ್ದಾರೆ.

ವಿಜಯ ದಶಮಿಯ ದಿನದಂದು ಸಂಘ ಪರಿವಾರದವರು ರಾಜ್ಯದ ವಿವಿಧ ಕಡೆಗಳಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ ನಡೆಸಿದ್ದು, ಜನರಲ್ಲಿ ಭೀತಿ ಹುಟ್ಟಿಸುವ ಈ ಕೃತ್ಯಗಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಏ.ಕೆ.ಅಶ್ರಫ್, "ವಿಜಯ ದಶಮಿ ಮತ್ತು ಆಯುಧ ಪೂಜೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಸಹಿತ ಸಂಘಪರಿವಾರದ ಸಂಘಟನೆಗಳು ತ್ರಿಶೂಲ ದೀಕ್ಷೆ ಕಾರ್ಯಕ್ರಮ, ದುರ್ಗಾ ದೌಡ್, ಹಿಂದು ಶಕ್ತಿ ಸಂಚಲನ ಹೆಸರಿನಲ್ಲಿ ಶೋಭಯಾತ್ರೆ, ಸಭಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದವು. ಈ ಸಂದರ್ಭದಲ್ಲಿ ಉಡುಪಿಯ ರಾಜಬೀದಿಯಲ್ಲಿ, ಬೆಳಗಾವಿಯ ಬ್ರಹ್ಮ ನಗರದ ಹನುಮಾನ್ ಮಂದಿರ, ಬಿಜಾಪುರ, ದಾವಣಗೆರೆ, ಗದಗದ ನರಗುಂದ ಮೊದಲಾದೆಡೆ ಸಾರ್ವಜನಿಕ ಸ್ಥಳಗಳಲ್ಲಿ ತಲವಾರು, ಬಂದೂಕು, ಕೋವಿಯಂತಹ ಮಾರಕಾಸ್ತ್ರಗಳನ್ನು ಪ್ರದರ್ಶಿಸಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ತ್ರಿಶೂಲವನ್ನೂ ವಿತರಿಸಲಾಗಿದೆ. ಚೂರಿ ಇರಿತ ಪ್ರಕರಣದಲ್ಲಿ ಭಾಗಿಯಾಗಿ ಹತ್ಯಾ ಪ್ರಕರಣ ದಾಖಲಾಗಿರುವ ಆರೋಪಿಗೂ ಈ ವೇಳೆ ತ್ರಿಶೂಲ ವಿತರಿಸಿರುವುದು ಆತಂಕಕಾರಿಯಾಗಿದೆ" ಎಂದರು.

Talwar Exhibition: PFI Demand Police book a case against the Sangh Parivar

"ಮಾತ್ರವಲ್ಲ ಕಾರ್ಯಕ್ರಮಗಳಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ದ್ವೇಷ ಹರಡುವ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಲಾಗಿದೆ ಮತ್ತು ಅವರ ಧಾರ್ಮಿಕ ಕಟ್ಟಡಗಳನ್ನು ಕೆಡಹುವ ಬಹಿರಂಗ ಬೆದರಿಕೆಯನ್ನು ಒಡ್ಡಲಾಗಿದೆ. ಇದರ ಹಿಂದೆ ಧರ್ಮ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಂಚು ಅಡಗಿರುವುದು ಬಹಿರಂಗ ವಾಸ್ತವವಾಗಿದೆ. ಈ ಮಧ್ಯೆ, ಬೆಳಗಾವಿಯಲ್ಲಿ ಸಾರ್ವಜನಿಕ ರಾಲಿ ನಡೆಸಿ ಮಾರಕಾಸ್ತ್ರ ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ ಜನಾಕ್ರೋಶವನ್ನು ತಣಿಸುವ ನಿಟ್ಟಿನಲ್ಲಿ ಪೊಲೀಸರು ದುರ್ಬಲ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿದ್ದಾರೆ. ಮಾತ್ರವಲ್ಲದೇ, ವಿಡಿಯೋ ಸಾಕ್ಷಿ ಇದ್ದರೂ ಪ್ರಾಥಮಿಕ ವರದಿಯಲ್ಲಿ ವ್ಯತಿರಿಕ್ತ ಮಾಹಿತಿಯನ್ನು ದಾಖಲಿಸಿದ್ದಾರೆ. ಇಲ್ಲಿ ಸಂಘಪರಿವಾರದ ಕುರಿತಂತೆ ಪೊಲೀಸರು ಮೃಧು ಧೋರಣೆ ತಾಳಿರುವುದು ಮತ್ತಷ್ಟು ಆತಂಕಗಳಿಗೆ ಕಾರಣವಾಗಿದೆ. ಸಂಘಪರಿವಾರದ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿದ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುವ ಮೂಲಕ ಆರೋಪಿಗಳ ರಕ್ಷಣೆಗೆ ಇಳಿದಿರುವುದು ಸ್ಪಷ್ಟವಾಗುತ್ತಿದೆ," ಎಂದಿದ್ದಾರೆ.

ಉಡುಪಿಯಲ್ಲಿ ಜಿಲ್ಲಾ ಹಿಂದೂ ಜಾಗರಣ ವೇದಿಕೆಯಿಂದ ವಿಜಯದಶಮಿಯಂದು (ಅಕ್ಟೋಬರ್ 15) 'ದುರ್ಗಾ ದೌಡ' ನಡೆಯಿತು. ಇದರಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಉಡುಪಿ ನಗರದ ಪ್ರಮುಖ ರಸ್ತೆಗಳಲ್ಲಿ ತಲವಾರು ಪ್ರದರ್ಶನದ ಮೆರವಣಿಗೆ ನಡೆಸಿದ್ದರು. ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ನಗರದ ಅಂಬಲಪಾಡಿಯ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದವರೆಗೆ ನಡೆಯಿತು. ಇಂಧನ ಸಚಿವ ಸುನಿಲ್ ಕುಮಾರ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಸಚಿವರ ಜೊತೆಗೆ ಶಾಸಕ ರಘುಪತಿ ಭಟ್ ಸೇದಂತೆ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯನ್ನು ಗುರಿಪಡಿಸಿಕೊಂಡು ನಡೆಯುತ್ತಿರುವ ದುಷ್ಕೃತ್ಯಗಳು ಆಘಾತಕಾರಿಯಾಗಿದೆ. ಬೆಳಗಾವಿಯಲ್ಲಿ ಅರ್ಬಾಝ್ ಎಂಬ ಯುವಕನ ಬರ್ಬರ ಹತ್ಯೆ, ಬಾಗಲಕೋಟೆಯ ಇಳ್ಕಲ್ ನಲ್ಲಿ ನಡೆದ ಮುಸ್ಲಿಮ್ ವಿದ್ಯಾರ್ಥಿಯ ಮೇಲಿನ ಮಾರಣಾಂತಿಕ ಹಲ್ಲೆ, ಗದಗದಲ್ಲಿ ಐತಿಹಾಸಿಕ ಮಸ್ಜಿದ್ ಕೆಡಹುವ ಬೆದರಿಕೆಗಳು, ಸಂಘಪರಿವಾರದ ನಾಯಕರು ವಿವಿಧೆಡೆ ಮಾಡುತ್ತಿರುವ ದ್ವೇಷಪೂರಿತ ಪ್ರಚೋದನಾಕಾರಿ ಭಾಷಣಗಳು, ದಕ್ಷಿಣ ಕನ್ನಡದಲ್ಲಿ ಮಿತಿಮೀರಿರುವ ಅನೈತಿಕ ಪೊಲೀಸ್ ಗಿರಿ ಮತ್ತು ಅವರಿಗೆ ಬೆಂಬಲವಾಗಿ ನಿಲ್ಲುತ್ತಿರುವ ಶಾಸಕರುಗಳ ನಡೆಗಳು, ಪ್ರವಾದಿ ವಿರುದ್ಧ ಅವಹೇಳನ... ಈ ರೀತಿಯ ಮೊದಲಾದ ಘಟನೆಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿವೆ. ಇದೀಗ ರಾಜ್ಯದ ವಿವಿಧೆಡೆ ಸಂಘಪರಿವಾರವು ಶೋಭಯಾತ್ರೆ ನಡೆಸಿ ಮಾರಕಾಸ್ತ್ರ ಝಳಪಿಸಿ ಭೀತಿ ಸೃಷ್ಟಿಸಿರುವುದು ಅದರ ಮುಂದುವರಿದ ಭಾಗವಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾರಕಾಸ್ತ್ರ ಪ್ರದರ್ಶನ ನಡೆಸಿರುವುದು ಕಾನೂನು ಬಾಹಿರವಾಗಿದೆ. ಅಲ್ಪಸಂಖ್ಯಾತರಲ್ಲಿ ನಿರ್ದಿಷ್ಟವಾಗಿ ಮುಸ್ಲಿಮ್ ಸಮುದಾಯದಲ್ಲಿ ಭೀತಿ ಸೃಷ್ಟಿಸುವ ಇಂತಹ ದುರುದ್ದೇಶಪೂರಿತ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ದುರ್ಬಲ ಸೆಕ್ಷನ್ ಗಳನ್ನು ದಾಖಲಿಸಿ ಘಟನೆಗಳನ್ನು ಮುಚ್ಚಿಹಾಕಬಾರದು. ಈ ಕಾರ್ಯಕ್ರಮದ ಸಂಘಟಕರು ಮತ್ತು ಖಡ್ಗ ಝಳಪಿಸಿದ ಕಾರ್ಯಕರ್ತರ ವಿರುದ್ಧ ನಿಷ್ಪಕ್ಷಪಾತವಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕು. ರಾಜ್ಯದ ಮುಖ್ಯಮಂತ್ರಿಯವರು ಮಧ್ಯಪ್ರವೇಶಿಸಿ ಈ ರೀತಿಯ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ವಿರುದ್ಧ ರಾಜ್ಯಾದ್ಯಂತ ಉಗ್ರ‌ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಝೋನಲ್ ಅಧ್ಯಕ್ಷ ಇಲ್ಯಾಸ್ಸ ಮುಹಮ್ಮದ್, ನಾಯಕ ಅಬ್ದುಲ್ ರಝುಕ್ ಕೆಮ್ಮಾರ್ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+