ಗೋಹಂತಕರೊಂದಿಗೆ ನಾವು ಹೊಂದಾಣಿಕೆ ಮಾಡಿಕೊಳ್ಳುವ ಮಾತೇ ಇಲ್ಲ: ಪ್ರಮೋದ್ ಮುತಾಲಿಕ್
ನಮ್ಮ ಗೋವು ತಾಯಿಯನ್ನು ಉಳಿಸಿಕೊಳ್ಳಲು ನಮಗೆ ಹೊಂದಾಣಿಕೆ ಬೇಕಿಲ್ಲ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರೂ ಮತಾಂತರ ಸ್ಥಗಿತಗೊಂಡಿಲ್ಲ ಎಂದು ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.
ಬಾಗಲಕೋಟೆ,ಫೆಬ್ರವರಿ20: ಗೋಹಂತಕರೊದಿಗೆ ನಾವು ಹೊಂದಾಣಿಕೆ ಮಾಡಿಕೊಳ್ಳುವ ಮಾತೇ ಇಲ್ಲ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.
ಬಾಗಲಕೋಟೆ ಜಿಲ್ಲೆಯಲ್ಲಿ ಭಾನುವಾರ ಆಯೋಜಿಸಿದ್ದ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರ ಮಟ್ಟದ ವ್ಯಕ್ತಿಯೊಬ್ಬರು ಹಿಂದುಗಳು ಮುಸ್ಲಿ ಸಮುದಾಯದೊಂದಿಗೆ ಹೊಂದಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದು ತಪ್ಪು ಹೇಳಿಕೆ ಎಂದು ಹೇಳಿದರು.
ನಮ್ಮ ಉತ್ಸವಗಳಲ್ಲಿ ಡಿಜೆ ಬಳಸಬೇಡಿ ಎನ್ನುವ ಪೊಲೀಸರು ಅವರ ಮಸೀದಿಗಳ ಮೇಲಿನ ಮೈಕ್ ಕಿತ್ತಿಸುವುದಿಲ್ಲ. ಮೊದಲು ಹಲಾಲ್, ಹಿಜಾಬ್ ನಿಲ್ಲಬೇಕು. ನಮ್ಮ ಗೋವು ತಾಯಿಯನ್ನು ಉಳಿಸಿಕೊಳ್ಳಲು ನಮಗೆ ಹೊಂದಾಣಿಕೆ ಬೇಕಿಲ್ಲ. ಗೋಹತ್ಯೆಯಿಂದ ಗೋವಿನ ಮಾಂಸ, ರಕ್ತ ರಫ್ತಾಗುತ್ತಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದ್ದರೂ ಮತಾಂತರ ಸ್ಥಗಿತಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದು ಯುವತಿಯರನ್ನು ಮೋಸದ ಬಲೆಗೆ ಬೀಳಿಸಿ ಲವ್ ಜಿಹಾದ್ ನಡೆಸಲಾಗುತ್ತಿದೆ. ಅವರು ನಮ್ಮ ಒಬ್ಬ ಯುವತಿಯನ್ನು ಮದುವೆ ಮಾಡಿಕೊಂಡರೆ ಹಿಂದು ಯುವಕರು ಅವರ ಸಮುದಾಯದ ಹತ್ತು ಯುವತಿಯರನ್ನು ಬಲೆಗೆ ಬೀಳಿಸಿ ಮದುವೆ ಆಗಬೇಕು. ಯುವಕರನ್ನು ರಕ್ಷಿಸುವ ಜವಾಬ್ದಾರಿ ಶ್ರೀರಾಮ ಸೇನೆ ಮೇಲೆ ಇರಲಿದೆ. ನಮ್ಮ ಸಂಪ್ರದಾಯದಂತೆ ಆತ್ಮ ರಕ್ಷಣೆಗಾಗಿ ಎಲ್ಲರ ಮನೆಗಳಲ್ಲಿ ತಲವಾರ್ ಇರಬೇಕು. ಪೊಲೀಸರು ನಿಮ್ಮನ್ನು ಕೇಳಿದರೆ ದುರ್ಗಾದೇವಿ ಕೈಯಲ್ಲಿ ಖಡ್ಗವಿದೆ ಎಂದು ಹೇಳಬೇಕು ಎಂದರು.
ಹಿಂದು ಬಾಂಧವರು ಹಿಂದುಗಳ ಬಳಿ ವ್ಯಾಪಾರ, ವಹಿವಾಟು ನಡೆಸಿ. ಹಿಂದುಗಳ ಮೇಲಿನ ದಬ್ಬಾಳಿಕೆ ವಿರುದ್ಧ ಹಿಂದು ಸಂಘಟನೆಗಳು ಶ್ರಮಿಸುತ್ತಿವೆ. ಎಲ್ಲರೂ ಸಂಘಟನೆಗಳಿಗೆ ಕೈಜೋಡಿಸಿ. ಅಂದು ಶಿವಾಜಿ ಮಹಾರಾಜರು ಇರದಿದ್ದರೆ ಇಂದು ನಾವೆಲ್ಲ ಹಿಂದುಗಳಾಗಿ ಇರುತ್ತಿರಲಿಲ್ಲ. ಮೊಘಲರು, ಸುಲ್ತಾನರನ್ನು ಮೆಟ್ಟಿ ಶಿವಾಜಿ ಮಹಾರಾಜರು ಹಿಂದು ಸಾಮ್ರಾಜ್ಯದ ಪ್ರತಿಜ್ಞೆ ಮಾಡಿದರು. ಇಂದು ನಾವೆಲ್ಲ ಶಿವಾಜಿಯವರ ಹಾದಿಯಲ್ಲಿ ಸಾಗಬೇಕಿದೆ ಎಂದು ತಿಳಿಸಿದರು.

ಇನ್ನೂ ಈ ವೇಳೆ ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ ಅವರು ಮಾತನಾಡಿ, ನಮ್ಮ ಸಂಸ್ಕೃತಿ, ಸಂಪ್ರದಾಯದ ಪುನರುತ್ಥಾನಕ್ಕಾಗಿ ಶಿವಾಜಿ ಹೋರಾಡಿದರು. ಸಾಮಾನ್ಯರನ್ನು ಸೇರಿಸಿಕೊಂಡು ಸೈನ್ಯ ಕಟ್ಟಿ ಹೋರಾಟ ನಡೆಸಿದರು. ಅವರ ಆದರ್ಶ ನಮಗೆ ಸ್ಪೂರ್ತಿಯಾಗಲಿ ಎಂದು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications