Tamannaah Bhatia: "ಮೈಸೂರು ಸ್ಯಾಂಡಲ್ ಸೋಪ್: ಕನ್ನಡ ಚಿತ್ರರಂಗದ ನಟ್ಟು - ಬೋಲ್ಟು ಟೈಟ್ ಧಮ್ಕಿಯೇ"
Tamannaah Bhatia: ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಕನ್ನಡದ ನಟ - ನಟಿಯರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಗಂಭೀರವಾದ ಆರೋಪ ಸರ್ಕಾರದ ಮೇಲೆ ಕೇಳಿ ಬಂದಿದೆ. ಇದರೊಂದಿಗೆ ಕಳೆದ ಕೆಲವು ದಿನಗಳ ಹಿಂದಷ್ಟೇ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗವನ್ನು ಗುರಿಯಾಗಿಸಿಕೊಂಡು ನೀಡಿದ್ದ ನಟ್ಟು ಬೋಲ್ಟ್ ಟೈಟ್ ವಿಚಾರವು ಇದೀಗ ಭಾರೀ ಚರ್ಚೆಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಕೆಲವರ ನಟ್ಟು ಬೋಲ್ಟ್ ಹೇಗೆ ಟೈಟ್ ಮಾಡುವುದು ಎಂದು ನನಗೆ ತಿಳಿದಿದೆ ಎಂದು ಈಚೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಅಲ್ಲದೇ ಕಳೆದ ವಾರವಷ್ಟೇ ಇನ್ನೂ ಚಿತ್ರರಂಗದಲ್ಲಿ ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ ಎಂದಿದ್ದರು.
ಇದರ ಬೆನ್ನಲ್ಲೇ ಕರ್ನಾಟಕದ ಇತಿಹಾಸದೊಂದಿಗೆ ಬೆಸೆದುಕೊಂಡಿರುವ ಮೈಸೂರು ಸ್ಯಾಂಡಲ್ ಸೋಪ್ಗೆ ರಾಯಭಾರಿಯನ್ನಾಗಿ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಹಾಗೂ 6.20 ಕೋಟಿ ರೂಪಾಯಿ ನೀಡಲು ಮುಂದಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು, ಪ್ರಶ್ನಿಸಿದ್ದು. ಇದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ, ನಟ್ಟು - ಬೋಲ್ಟು ಧಮ್ಕಿಗೆ ಹೆದರದಿದ್ದಕ್ಕಾಗಿ ಕನ್ನಡ ಚಿತ್ರರಂಗಕ್ಕೆ ಈ ರೀತಿ ಮಾಡಲಾಗಿದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ಪ್ರಮುಖ ಇಲಾಖೆ/ಮಂಡಳಿಗಳೆಲ್ಲ ನಷ್ಟ ಅನುಭವಿಸುತ್ತಿರುವ ಸಮಯದಲ್ಲಿ, ಲಾಭದಲ್ಲಿರುವ ರಾಜ್ಯದ ಹೆಮ್ಮೆಯ ಸಂಸ್ಥೆಯಾದ ಮೈಸೂರು ಸ್ಯಾಂಡಲ್ ಸೋಪ್ / ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿ. (ಸ್ಯಾಂಡಲ್ ಸೋಪ್) ಮಂಡಳಿಯ ಮೇಲೆ ಸರ್ಕಾರದ ವಕ್ರ ದೃಷ್ಟಿ ಬಿದ್ದಿದೆ ಎಂದಿದ್ದಾರೆ.
ಕೆ.ಎಂ.ಎಫ್. ಹಾಗೂ ಇತರೆ ಸಂಸ್ಥೆಗಳಿಗೆ ಅಪ್ಪು-ಶಿವಣ್ಣ ಅವರಂತಹ ಮೇರು ನಟರನ್ನೇ ರಾಯಭಾರಿಗಳನ್ನಾಗಿ ಮಾಡಿದ್ದು ನಮೆಲ್ಲರ ಹೆಮ್ಮೆ. ಈ ರಾಯಭಾರಿಗಳೆಲ್ಲರೂ ಸರ್ಕಾರದ ಸಂಸ್ಥೆಗಳಿಗಾಗಿ ಉಚಿತವಾಗಿ ಪ್ರಾಯೋಜಿಕತೆಯನ್ನು ನೀಡಿದ್ದು ಕನ್ನಡಿಗರ ಹೃದಯ ವಿಶಾಲತೆಯನ್ನು ತೋರಿಸುತ್ತದೆ.
ಆದರೆ, ಇದೀಗ ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿ. (ಸ್ಯಾಂಡಲ್ ಸೋಪ್) ಮಂಡಳಿಗೆ ರಾಯಭಾರಿಯನ್ನಾಗಿ ಪರಭಾಷಿಕ ನಟಿಯೋರ್ವರನ್ನು 6.5 ಕೋಟಿ ಮೊತ್ತಕ್ಕೆ ನೇಮಕ ಮಾಡಿರುವುದು ಖಂಡನೀಯ. ಕರ್ನಾಟಕದಲ್ಲಿ ರಾಯಭಾರಿಗಳಾಗುವ ಅರ್ಹತೆ ಹೊಂದಿರುವ ಮತ್ಯಾರು ಕನ್ನಡದ ನಟ-ನಟಿಯರು ಸಿಗಲಿಲ್ಲವೇ? ಅಥವಾ ಡಿ.ಕೆ ಶಿವಕುಮಾರ್ ಅವರ ನಟ್ಟು - ಬೋಲ್ಟು ಧಮ್ಕಿಗೆ ಹೆದರದಿದ್ದಕ್ಕಾಗಿ ಶಿಕ್ಷೆಯೋ ಎಂದು ಪ್ರಶ್ನೆ ಮಾಡಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications