Kaveri Water: ತಮಿಳುನಾಡಿಗೆ ಹರಿಯಿತು 10 ಟಿಎಂಸಿ ಹೆಚ್ಚುವರಿ ನೀರು
ಕರ್ನಾಟಕದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜುಲೈ 1 ರಿಂದ 22 ರ ನಡುವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ 10 ಟಿಎಂಸಿ ಅಡಿ ಹೆಚ್ಚುವರಿ ನೀರು ಹರಿದಿದೆ.
ತಮಿಳುನಾಡಿನ ಬೇಡಿಕೆಯ ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆ ಜುಲೈ 30 ರಂದು ನಡೆಯಲಿದ್ದು, ಆಗಸ್ಟ್ ತಿಂಗಳ ನೀಡನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಧಾರ ಮಾಡಲಿದೆ.

ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡು ಆಗಸ್ಟ್ನಲ್ಲಿ 45.95 ಟಿಎಂಸಿ ಅಡಿ ನೀರು ಹರಿಸಬೇಕಿದೆ. ಜಲಸಂಪನ್ಮೂಲ ಇಲಾಖೆ ಪ್ರಕಾರ, ಜುಲೈ 1 ರಿಂದ 22 ರ ಅವಧಿಯಲ್ಲಿ ತಮಿಳುನಾಡಿಗೆ ನಿಗದಿತ 22 ಟಿಎಂಸಿ ನೀರು ಬಿಡಬೇಕಿತ್ತು ಆದರೆ ಬಿಳಿಗುಂಡ್ಲುವಿನಲ್ಲಿ 32 ಟಿಎಂಸಿ ನೀರು ಹರಿದಿರುವ ಬಗ್ಗೆ ದಾಖಲೆಯಾಗಿದೆ.
ರಾಜ್ಯದ ಜಲಾಶಯಗಳು ಭರ್ತಿ
ಕರ್ನಾಟಕದಲ್ಲಿ ಕಾವೇರಿ ಜಲಾನಯನ ವ್ಯಾಪ್ತಿಯ ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿದ್ದು, ಕಬಿನಿ ಜಲಾಶಯ ಕೂಡ ಭರ್ತಿಯಾಗಿದೆ. ಹೇಮಾವತಿ ಜಲಾಶಯ ಕೂಡ ಭರ್ತಿಯಾಗಿದ್ದು ಭಾರಿ ಪ್ರಮಾಣದಲ್ಲಿ ನೀರು ಹೊರಬಿಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಹಾರಂಗಿ ಜಲಾಶಯ ಕೂಡ ಇನ್ನೇನು ಭರ್ತಿಯಾಗುವ ಹಂತ ತಲುಪಿದೆ.
ತಮಿಳುನಾಡಿನ ಸೇಲಂನಲ್ಲಿರುವ ಮೆಟ್ಟೂರು ಜಲಾಶಯದ ಸಂಗ್ರಹದಲ್ಲಿ ಭಾರಿ ಏರಿಕೆಯಾಗಿದೆ. ಮೆಟ್ಟೂರು ಜಲಾಶಯದ ಗರಿಷ್ಠ ಸಾಮರ್ಥ್ಯ 93.47 ಟಿಎಂಸಿ ಆಗಿದ್ದು ಸದ್ಯ ಜಲಾಶಯದ ನೀರಿನ ಮಟ್ಟ 49 ಟಿಎಂಸಿ ಆಗಿದೆ.
ಕೇಳಿದಷ್ಟು ನೀರು ಸಿಕ್ಕಿದೆ
ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸಿದ ನಂತರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳುನಾಡಿನ ಜಲಸಂಪನ್ಮೂಲ ಕಾರ್ಯದರ್ಶಿ ಕೆ ಮಣಿವಾಸನ್, ಜುಲೈ ತಿಂಗಳಿಗೆ ಕರ್ನಾಟಕದಿಂದ ನೀರು ಬಿಡುಗಡೆಗೆ ಯಾವುದೇ ಬಾಕಿ ಇಲ್ಲ ಎಂದು ಒಪ್ಪಿಕೊಂಡರು.
ಸುಪ್ರೀಂ ಕೋರ್ಟ್ ಸೂಚಿಸಿದಷ್ಟು ನೀರನ್ನು ನಾವು ಸ್ವೀಕರಿಸಿದ್ದೇವೆ. ಕರ್ನಾಟಕ ಕೂಡ ನೀರು ಬಿಡುಗಡೆಗೆ ವಿರೋಧಿಸಿಲ್ಲ. ಕಬಿನಿ ಜಲಾಶಯದಿಂದ ಕೂಡ ನೀರು ಬಿಡಲಾಗುತ್ತಿದೆ. ಕರ್ನಾಟಕವು ಸುಪ್ರೀಂ ಕೋರ್ಟ್ ಸೂಚಿಸಿದ ಬಿಡುಗಡೆ ವೇಳಾಪಟ್ಟಿಗೆ ಬದ್ಧವಾಗಿರಬೇಕು ಮತ್ತು ಪ್ರಾಧಿಕಾರದಿಂದ ನಿಕಟವಾಗಿ ಮೇಲ್ವಿಚಾರಣೆ ಮಾಡಬೇಕು ತಮಿಳುನಾಡು ಸರ್ಕಾರ ಒತ್ತಾಯಿಸಿದೆ. ಪ್ರಾಧಿಕಾರದ ಸಭೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ನೀರಿನ ಕೊರತೆಯಿಂದಾಗಿ, ಅಲ್ಪಾವಧಿ ಭತ್ತದ ಕೃಷಿಗೆ ಬೆಂಬಲ ನೀಡುವ ವಾಡಿಕೆಯಂತೆ ಜೂನ್ 12 ರಂದು ತಮಿಳುನಾಡು ಸರ್ಕಾರವು ಮೆಟ್ಟೂರು ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications