TN State Anthem: ಶಿವಮೊಗ್ಗ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ ಪ್ಲೇ- ಕನ್ನಡಿಗರು ಕಿಡಿ
ಶಿವಮೊಗ್ಗ ಏಪ್ರಿಲ್ 27: ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಕೇಂದ್ರ ಹಾಗೂ ಇತರ ರಾಜ್ಯದ ಪ್ರಭಾವಿ ನಾಯಕರನ್ನು ಕರೆತಂದು ರಾಜ್ಯದಲ್ಲಿ ಪ್ರಚಾರವನ್ನು ಪಕ್ಷಗಳು ನಡೆಸುತ್ತಿವೆ. ಇಂದು ಸಮಾವೇಶವೊಂದರಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಲಾಗಿದ್ದು, ಬಳಿಕ ಎಚ್ಚತ್ತುಕೊಂಡ ಶಾಸಕ ಕೆ.ಎಸ್. ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದು ಕಂಡು ಬಂದಿದೆ. ಈ ಘಟನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಗಣ್ಯರು ಎದ್ದು ನಿಂತಿದ್ದಾರೆ. ಈ ವೇಳೆ ತಮಿಳುನಾಡು ನಾಡಗೀತೆ ಆರಂಭವಾಗಿದೆ. ಬಳಿಕ ಈಶ್ವರಪ್ಪ ಕರ್ನಾಟಕದ ನಾಡಗೀತೆಯನ್ನ ಹಾಕಿಸಿದ್ದಾರೆ.

ಶಿವಮೊಗ್ಗ ನಗರ ಹಾಗೂ ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮಿಳು ಮತದಾರರಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಬಿಜೆಪಿ ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿತ್ತು. ಸಮಾವೇಶದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಮಾಜಿ ಸಚಿವ ಈಶ್ವರಪ್ಪ, ಅಭ್ಯರ್ಥಿ ಚನ್ನಬಸಪ್ಪ ಭಾಗಿಯಾಗಿದ್ದರು.
ಈ ವೇಳೆ ಸಮಾವೇಶದಲ್ಲಿ ತಮಿಳು ಪ್ರಾರ್ಥನೆ ಪ್ಲೇ ಆಗಿದೆ. ತಕ್ಷಣವೇ ಎಚ್ಚೆತ್ತ ಮಾಜಿ ಸಚಿವ ಈಶ್ವರಪ್ಪ, ಏಯ್ ಇದು ಯಾವ ಪ್ರಾರ್ಥನೆ? ನಾಡಗೀತೆ ಹಾಕಪ್ಪ. ನಿಮ್ಮಲ್ಲಿ ಯಾರಾದರೂ ನಾಡಗೀತೆ ಹಾಡುತ್ತೀರಾ ಎಂದು ನೆರೆದಿದ್ದವರನ್ನು ಈಶ್ವರಪ್ಪ ಕೇಳಿದ್ದಾರೆ. ಬಳಿಕ ಆಯೋಜಕರು ತಮಿಳಿನ ಪ್ರಾರ್ಥನೆಯನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಪ್ಲೇ ಮಾಡಿದರು.
ಕನ್ನಡಕ್ಕಾಗಿ ತನ್ನ ಪ್ರಾಣ ನೀಡಿದ ಗೋವಿಂದರಾಜರ ಹೆಸರಿನ ಬಡಾವಣೆಯಲ್ಲಿ ತಮಿಳು
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) April 26, 2023
ಇದು ತಮಿಳುನಾಡು ಅಂದುಕೊಂಡ್ರಾ ಅಲ್ಲಾ
ಅಪ್ಪಟ ಕನ್ನಡಿಗರಿರೋ ಬೆಂಗಳೂರಿನ ಗೋವಿಂದರಾಜನಗರ
ಎಲ್ಲವೂ ವೊಟ್ಗಾಗಿ..
ಅಯ್ಯೋ ಕರ್ಮವೇ ಇನ್ನು ಏನೇನು ನೋಡಬೇಕೋ ಕನ್ನಡಿಗರು...
ಇಲ್ಲಿರೋ ಎಲ್ಲರಿಗೂ ಕನ್ನಡ ಬರುತ್ತೆ ಅರಿವಿರಲಿ..
ಭಾಷೆಗಿಂತ ನಿಮ್ಮ ರಾಜಕೀಯ ದೊಡ್ಡದಲ್ಲ.. pic.twitter.com/f6iSnceTvQ
ಇದರ ವಿರುದ್ಧ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು 'ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ.. ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ... ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ...' ಎಂದು ಆಕ್ರೋಶಗೊಂಡಿದ್ದಾರೆ.
ಬುಧವಾರ ಅಣ್ಣಾಮಲೈ ವಿ ಸೋಮಣ್ಣ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಮಿಳಿನಲ್ಲಿ ಅವರು ಮಾತನಾಡಿರುವ ದೃಶ್ಯ ಕಂಡು ಬಂದಿದೆ. ಈ ವಿಡಿಯೋವನ್ನು ಹಂಚಿಕೊಂಡ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿ ಕಾರಿದ್ದಾರೆ.
ಇದು ನಡೆದಾಗ ಒಂದೇ ಒಂದು ಸಹ ಮಾತು ಬರ್ಲಿಲ್ಲ ಏನಿತ್ತು ಬಾಯಲ್ಲಿ?
— 🇮🇳 Madhukumar.V.P🇮🇳 (@MadhukumarVP1) April 26, 2023
ಬಿಜೆಪಿಯವರು ತಪ್ಪುಗಳನ್ನು ಮಾತ್ರ ಎತ್ತಿ ತೋರಿಸುತ್ತಾ ಒಂದು ಪಕ್ಷಕ್ಕೆ ಬಕೆಟ್ ಹಿಡಿಯುವ ನೀನ್ಯಾವ ಸೀಮೆ ಹೋರಾಟಗಾರ? pic.twitter.com/59zkqXqqeg
'ಕನ್ನಡಕ್ಕಾಗಿ ತನ್ನ ಪ್ರಾಣ ನೀಡಿದ ಗೋವಿಂದರಾಜರ ಹೆಸರಿನ ಬಡಾವಣೆಯಲ್ಲಿ ತಮಿಳು. ಇದು ತಮಿಳುನಾಡು ಅಂದುಕೊಂಡ್ರಾ ಅಲ್ಲಾ ಅಪ್ಪಟ ಕನ್ನಡಿಗರಿರೋ ಬೆಂಗಳೂರಿನ ಗೋವಿಂದರಾಜನಗರ ಎಲ್ಲವೂ ವೊಟ್ಗಾಗಿ.. ಅಯ್ಯೋ ಕರ್ಮವೇ ಇನ್ನು ಏನೇನು ನೋಡಬೇಕೋ ಕನ್ನಡಿಗರು... ಇಲ್ಲಿರೋ ಎಲ್ಲರಿಗೂ ಕನ್ನಡ ಬರುತ್ತೆ ಅರಿವಿರಲಿ.. ಭಾಷೆಗಿಂತ ನಿಮ್ಮ ರಾಜಕೀಯ ದೊಡ್ಡದಲ್ಲ..' ಎಂದು ಅವರು ಕಿಡಿ ಕಾರಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆದಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವೂ ಮುಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
ಬಿಜೆಪಿ ಪ್ರಚಾರದ ವೇಳೆ ಅಣ್ಣಾಮಲೈ ತಮಿಳಿನಲ್ಲಿ ಮತಯಾಚಿಸಿದ್ದರು. ಅದಕ್ಕೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಆಕ್ಷೇಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದರು. ಅವರ ಟ್ವೀಟಿಗೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ಹಿಂದೆ ಜೆಡಿಎಸ್ ಪ್ರಚಾರದ ವೇಳೆ ಉರ್ದುವಿನಲ್ಲಿ ಭಾಷಣ ಮಾಡಿದ ವಿಡಿಯೋ ತುಣುಕನ್ನು ಹಾಕಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ -
GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications