TN State Anthem: ಶಿವಮೊಗ್ಗ ಸಮಾವೇಶದಲ್ಲಿ ತಮಿಳುನಾಡು ನಾಡಗೀತೆ ಪ್ಲೇ- ಕನ್ನಡಿಗರು ಕಿಡಿ
ಶಿವಮೊಗ್ಗ ಏಪ್ರಿಲ್ 27: ರಾಜ್ಯದಲ್ಲಿ ಚುನಾವಣಾ ಪ್ರಚಾರದ ಭರಾಟೆ ಜೋರಾಗಿದೆ. ಕೇಂದ್ರ ಹಾಗೂ ಇತರ ರಾಜ್ಯದ ಪ್ರಭಾವಿ ನಾಯಕರನ್ನು ಕರೆತಂದು ರಾಜ್ಯದಲ್ಲಿ ಪ್ರಚಾರವನ್ನು ಪಕ್ಷಗಳು ನಡೆಸುತ್ತಿವೆ. ಇಂದು ಸಮಾವೇಶವೊಂದರಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಲಾಗಿದ್ದು, ಬಳಿಕ ಎಚ್ಚತ್ತುಕೊಂಡ ಶಾಸಕ ಕೆ.ಎಸ್. ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದು ಕಂಡು ಬಂದಿದೆ. ಈ ಘಟನೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಗಣ್ಯರು ಎದ್ದು ನಿಂತಿದ್ದಾರೆ. ಈ ವೇಳೆ ತಮಿಳುನಾಡು ನಾಡಗೀತೆ ಆರಂಭವಾಗಿದೆ. ಬಳಿಕ ಈಶ್ವರಪ್ಪ ಕರ್ನಾಟಕದ ನಾಡಗೀತೆಯನ್ನ ಹಾಕಿಸಿದ್ದಾರೆ.

ಶಿವಮೊಗ್ಗ ನಗರ ಹಾಗೂ ಭದ್ರಾವತಿ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮಿಳು ಮತದಾರರಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಬಿಜೆಪಿ ತಮಿಳು ಭಾಷಿಗರ ಸಮಾವೇಶ ಆಯೋಜನೆ ಮಾಡಿತ್ತು. ಸಮಾವೇಶದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಮಾಜಿ ಸಚಿವ ಈಶ್ವರಪ್ಪ, ಅಭ್ಯರ್ಥಿ ಚನ್ನಬಸಪ್ಪ ಭಾಗಿಯಾಗಿದ್ದರು.
ಈ ವೇಳೆ ಸಮಾವೇಶದಲ್ಲಿ ತಮಿಳು ಪ್ರಾರ್ಥನೆ ಪ್ಲೇ ಆಗಿದೆ. ತಕ್ಷಣವೇ ಎಚ್ಚೆತ್ತ ಮಾಜಿ ಸಚಿವ ಈಶ್ವರಪ್ಪ, ಏಯ್ ಇದು ಯಾವ ಪ್ರಾರ್ಥನೆ? ನಾಡಗೀತೆ ಹಾಕಪ್ಪ. ನಿಮ್ಮಲ್ಲಿ ಯಾರಾದರೂ ನಾಡಗೀತೆ ಹಾಡುತ್ತೀರಾ ಎಂದು ನೆರೆದಿದ್ದವರನ್ನು ಈಶ್ವರಪ್ಪ ಕೇಳಿದ್ದಾರೆ. ಬಳಿಕ ಆಯೋಜಕರು ತಮಿಳಿನ ಪ್ರಾರ್ಥನೆಯನ್ನು ನಿಲ್ಲಿಸಿ ಕನ್ನಡದ ನಾಡಗೀತೆಯನ್ನು ಪ್ಲೇ ಮಾಡಿದರು.
ಕನ್ನಡಕ್ಕಾಗಿ ತನ್ನ ಪ್ರಾಣ ನೀಡಿದ ಗೋವಿಂದರಾಜರ ಹೆಸರಿನ ಬಡಾವಣೆಯಲ್ಲಿ ತಮಿಳು
— ರೂಪೇಶ್ ರಾಜಣ್ಣ(RUPESH RAJANNA) (@rajanna_rupesh) April 26, 2023
ಇದು ತಮಿಳುನಾಡು ಅಂದುಕೊಂಡ್ರಾ ಅಲ್ಲಾ
ಅಪ್ಪಟ ಕನ್ನಡಿಗರಿರೋ ಬೆಂಗಳೂರಿನ ಗೋವಿಂದರಾಜನಗರ
ಎಲ್ಲವೂ ವೊಟ್ಗಾಗಿ..
ಅಯ್ಯೋ ಕರ್ಮವೇ ಇನ್ನು ಏನೇನು ನೋಡಬೇಕೋ ಕನ್ನಡಿಗರು...
ಇಲ್ಲಿರೋ ಎಲ್ಲರಿಗೂ ಕನ್ನಡ ಬರುತ್ತೆ ಅರಿವಿರಲಿ..
ಭಾಷೆಗಿಂತ ನಿಮ್ಮ ರಾಜಕೀಯ ದೊಡ್ಡದಲ್ಲ.. pic.twitter.com/f6iSnceTvQ
ಇದರ ವಿರುದ್ಧ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು 'ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ.. ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ... ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ...' ಎಂದು ಆಕ್ರೋಶಗೊಂಡಿದ್ದಾರೆ.
ಬುಧವಾರ ಅಣ್ಣಾಮಲೈ ವಿ ಸೋಮಣ್ಣ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಮಿಳಿನಲ್ಲಿ ಅವರು ಮಾತನಾಡಿರುವ ದೃಶ್ಯ ಕಂಡು ಬಂದಿದೆ. ಈ ವಿಡಿಯೋವನ್ನು ಹಂಚಿಕೊಂಡ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿ ಕಾರಿದ್ದಾರೆ.
ಇದು ನಡೆದಾಗ ಒಂದೇ ಒಂದು ಸಹ ಮಾತು ಬರ್ಲಿಲ್ಲ ಏನಿತ್ತು ಬಾಯಲ್ಲಿ?
— 🇮🇳 Madhukumar.V.P🇮🇳 (@MadhukumarVP1) April 26, 2023
ಬಿಜೆಪಿಯವರು ತಪ್ಪುಗಳನ್ನು ಮಾತ್ರ ಎತ್ತಿ ತೋರಿಸುತ್ತಾ ಒಂದು ಪಕ್ಷಕ್ಕೆ ಬಕೆಟ್ ಹಿಡಿಯುವ ನೀನ್ಯಾವ ಸೀಮೆ ಹೋರಾಟಗಾರ? pic.twitter.com/59zkqXqqeg
'ಕನ್ನಡಕ್ಕಾಗಿ ತನ್ನ ಪ್ರಾಣ ನೀಡಿದ ಗೋವಿಂದರಾಜರ ಹೆಸರಿನ ಬಡಾವಣೆಯಲ್ಲಿ ತಮಿಳು. ಇದು ತಮಿಳುನಾಡು ಅಂದುಕೊಂಡ್ರಾ ಅಲ್ಲಾ ಅಪ್ಪಟ ಕನ್ನಡಿಗರಿರೋ ಬೆಂಗಳೂರಿನ ಗೋವಿಂದರಾಜನಗರ ಎಲ್ಲವೂ ವೊಟ್ಗಾಗಿ.. ಅಯ್ಯೋ ಕರ್ಮವೇ ಇನ್ನು ಏನೇನು ನೋಡಬೇಕೋ ಕನ್ನಡಿಗರು... ಇಲ್ಲಿರೋ ಎಲ್ಲರಿಗೂ ಕನ್ನಡ ಬರುತ್ತೆ ಅರಿವಿರಲಿ.. ಭಾಷೆಗಿಂತ ನಿಮ್ಮ ರಾಜಕೀಯ ದೊಡ್ಡದಲ್ಲ..' ಎಂದು ಅವರು ಕಿಡಿ ಕಾರಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆದಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವೂ ಮುಗಿದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.
ಬಿಜೆಪಿ ಪ್ರಚಾರದ ವೇಳೆ ಅಣ್ಣಾಮಲೈ ತಮಿಳಿನಲ್ಲಿ ಮತಯಾಚಿಸಿದ್ದರು. ಅದಕ್ಕೆ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಆಕ್ಷೇಪ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದರು. ಅವರ ಟ್ವೀಟಿಗೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು ಹಿಂದೆ ಜೆಡಿಎಸ್ ಪ್ರಚಾರದ ವೇಳೆ ಉರ್ದುವಿನಲ್ಲಿ ಭಾಷಣ ಮಾಡಿದ ವಿಡಿಯೋ ತುಣುಕನ್ನು ಹಾಕಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
-
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications