ಐಐಟಿ ಮಾದರಿಯಲ್ಲಿ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ಫೋರ್ಸ್ ರಚನೆ
ಬೆಂಗಳೂರು, ಮೇ 06: ಐಐಟಿ ಮಾದರಿಯಲ್ಲಿ ರಾಜ್ಯದ 7ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಲು ಟಾಸ್ಕ್ ಫೋರ್ಸ್ ರಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಗಳಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಸಂಬಂಧಿಸಿದಂತೆ ಎನ್ ಐ ಟಿ, ಐಐಟಿಗಳ ನಿವೃತ್ತ ನಿರ್ದೇಶಕರು, ಶಿಕ್ಷಣ ತಜ್ಞರು ಒಳಗೊಂಡಿರುವ ಸಮಿತಿಯನ್ನು ಇನ್ನೆರಡು ದಿನಗಳ ಒಳಗಾಗಿ ರಚಿಸಬೇಕು. ಕೆಐಟಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪ್ರಮುಖ ಐಟಿ ಕಂಪನಿಗಳು, ಕೈಗಾರಿಕೋದ್ಯಮಿಗಳ ಪ್ರಮುಖರ ಸೇವೆಯನ್ನು ಪಡೆಯಬಹುದು ಎಂದರು.
2022- 23 ರ ಆಯವ್ಯಯದಲ್ಲಿ ಘೋಷಣೆ ಮಾಡಿರುವ ಯೋಜನೆಗಳಿಗೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಸಭೆಯ ಮುಖ್ಯಾಂಶಗಳು ಇಂತಿವೆ:

1. ರಾಜ್ಯದ ಆಯ್ದ 14 ಇಂಜಿನಿಯರಿಂಗ್ ಕಾಲೇಜುಗಳನ್ನು ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮೇಲ್ದರ್ಜೆಗೇರಿಸುವ ಯೋಜನೆ ಪ್ರಮುಖವಾದುದು.
2. ಈಗಾಗಲೇ ಉತ್ತಮ ರೀತಿಯಲ್ಲಿ ಸ್ಥಾಪಿತವಾಗಿರುವ ಹಾಗೂ ಮೂಲಸೌಲಭ್ಯ, ಶಿಕ್ಷಕ ವರ್ಗ, ಹಾಸ್ಟೆಲ್ ವ್ಯವಸ್ಥೆಯಿರುವಂತಹ ಕಾಲೇಜುಗಳನ್ನು ಕೆಐಟಿ ಗೆ ಮೇಲ್ದರ್ಜೆಗೆ ಏರಿಸಲು ಆಯ್ದುಕೊಳ್ಳಲಾಗುವುದು
3. ಗುಲ್ಬರ್ಗಾದ ಇಂಜಿಯರಿಂಗ್ ಕಾಲೇಜನ್ನು ಈ ಯೋಜನೆಯಡಿ ಮೇಲ್ದರ್ಜೆಗೇರಿಸಲು ಸೂಕ್ತ ಪ್ರಸ್ತಾವನೆ ಸಲ್ಲಿಸುವುದು.
4. ಕಲ್ಯಾಣ ಕರ್ನಾಟಕದ ಕಲಬುರಗಿ, ಕಿತ್ತೂರು ಕರ್ನಾಟಕ ವಿಭಾಗದಲ್ಲಿ ಹಾವೇರಿ ಹಾಗೂ ಉತ್ತರ ಕನ್ನಡ ( ಕಾರವಾರ) ಇಂಜಿನಿರಿಂಗ್ ಕಾಲೇಜು, ಮೈಸೂರು ವಿಭಾಗದಲ್ಲಿ ಕೆ.ಆರ್.ಪೇಟೆ ಹಾಗೂ ಕೊಡುಗು , ಬೆಂಗಳೂರು ವಿಭಾಗದಲ್ಲಿ ಎಸ್ ಕೆ ಎಸ್ ಜೆ ಟಿ ಐ ಹಾಗೂ ರಾಮನಗರದ ಇಂಜಿನಿಯರಿಂಗ್ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

5. ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಮುಂದಿನ ವರ್ಷದೊಳಗೆ ಎನ್ ಐ ಟಿ ಮಟ್ಟಕ್ಕೆ ಅಭಿವೃದ್ಧಿಯಾಗಬೇಕು. ಕಾಲೇಜುಗಳಲ್ಲಿ ವಿಷಯವಾರು ಕಲಿಕಾ ಉತ್ಕೃಷ್ಟ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಾಶಸ್ತ್ಯ ನೀಡಬೇಕು.
6. ಕೆಐಟಿಗಳ ನಿರ್ಮಾಣಕ್ಕೆ ವೈಜ್ಞಾನಿಕ ಚಿಂತನೆ ಅಗತ್ಯ. ಆರ್ ಎಂಡ್ ಡಿ ಹಾಗೂ ಉದ್ಯೋಗಾವಕಾಶಗಳಿಗೆ ಇಲ್ಲಿ ಪ್ರಾಮುಖ್ಯತೆ ನೀಡಬೇಕು.
7. ಕೆಐಟಿಗಳಿಗಾಗಿ ಇಂಜಿನಿಯರಿಂಗ್ ಕಾಲೇಜುಗಳ ಆಯ್ಕೆ, ಲೋಗೋ, ಬ್ರ್ಯಾಡಿಂಗ್ ಉತ್ತಮ ರೀತಿಯಲ್ಲಿ ಆಗಬೇಕು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications