ನ್ಯಾಯಾಧೀಶರಾದ ಮಾಜಿ ಸಚಿವ ಟಿ.ಬಿ.ಜಯಚಂದ್ರ
ಬೆಂಗಳೂರು, ಜನವರಿ 24 : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ ನ್ಯಾಯಾಧೀಶರಾಗಿದ್ದಾರೆ. ಹೌದು, ಕನ್ನಡ ಚಲನಚಿತ್ರವೊಂದರಲ್ಲಿ ಅವರು ನ್ಯಾಯಾಧೀಶರಾಗಿ ನಟನೆ ಮಾಡಿದ್ದಾರೆ.
ಇನ್ನೂ ಹೆಸರಿಡದ ಕನ್ನಡ ಚಿತ್ರದಲ್ಲಿ ನ್ಯಾಯಾಧೀಶನ ಪಾತ್ರದಲ್ಲಿ ಬಣ್ಣ ಹಚ್ಚಿದ್ದೇನೆ ಎಂದು ಟಿ.ಬಿ.ಜಯಚಂದ್ರ ಅವರು ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ. ಚಿತ್ರದ ಪಾತ್ರದ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.
ಸ್ವತಃ ಎಲ್ಎಲ್ಬಿ ಪದವೀಧರರಾಗಿರುವ ಟಿ.ಬಿ.ಜಯಚಂದ್ರ ಅವರು ಕೆಲವು ಕಾಲ ವಕೀಲರಾಗಿಯೂ ಕಾರ್ಯ ನಿರ್ವಹಿಸಿದ್ದರು. ಕಾನೂನಿನ ಬಗ್ಗೆ ಅಪಾರವಾದ ಜ್ಞಾನ ಹೊಂದಿರುವ ಅವರು ಸಿನಿಮಾದಲ್ಲಿ ನ್ಯಾಯಾಧೀಶರಾಗಿ ಬಣ್ಣ ಹಚ್ಚಿದ್ದಾರೆ.
'ಹೆಸರಿಡದ ಚಿತ್ರದಲ್ಲಿ ನ್ಯಾಯಾಧೀಶನ ಪಾತ್ರದಲ್ಲಿ ಬಣ್ಣ ಹಚ್ಚಿ ಎರಡು ದಶಕಗಳ ನಂತರ ಚಲನಚಿತ್ರದಲ್ಲಿ ಮತ್ತೊಮ್ಮೆ ಅಭಿನಯಿಸುತ್ತಿದ್ದೇನೆ. ಚಿತ್ರವೊಂದರ ಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತೋಷ ತಂದಿದೆ' ಎಂದು ಅವರು ಬರೆದಿದ್ದಾರೆ.

2013ರ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಟಿ.ಬಿ.ಜಯಚಂದ್ರ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಈಗ ನ್ಯಾಯಾಧೀಶರಾಗಿ ಬೆಳ್ಳಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜಯಚಂದ್ರ ಅವರು 63,973 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು. ಜೆಡಿಎಸ್ನ ಬಿ.ಸತ್ಯನಾರಾಯಣ ಅವರು ಗೆಲುವು ಸಾಧಿಸಿದ್ದರು.
ಕಳ್ಳಂಬೆಳ್ಳ ಕ್ಷೇತ್ರದಿಂದ ನಾಲ್ಕು ಬಾರಿ, ಶಿರಾ ಕ್ಷೇತ್ರದಿಂದ ಸತತ ಎರಡು ಬಾರಿ ಸೇರಿ ಒಟ್ಟು 6 ಬಾರಿ ಶಾಸಕರಾಗಿರುವ ಟಿ.ಬಿ.ಜಯಚಂದ್ರ ಅವರು ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಕೃಷಿ, ತೋಟಗಾರಿಕೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾಗಿದ್ದರು.
ಬಡ ಕೃಷಿ ಕುಟುಂಬದ ಹಿನ್ನಲೆಯಿಂದ ಬಂದ ಜಯಚಂದ್ರ ಅವರು ಬಿಎಸ್ಸಿ, ಎಲ್ಎಲ್ಬಿ ಪದವೀಧರರು. ಕೆಲವು ಕಾಲ ವಕೀಲರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ. ಈಗ ಸಿನಿಮಾದಲ್ಲಿ ನ್ಯಾಯಾಧೀಶರಾಗಿದ್ದಾರೆ.
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications