ರಾಷ್ಟ್ರಪತಿಗೆ 'ದಯಾಮರಣ' ಕೋರಿದ ಬೀದರ್ ಶಿಕ್ಷಕನ ಕುಟುಂಬ
ಔರಾದ್ (ಬೀದರ್), ಮೇ 4: ಸುಮಾರು ಹತ್ತು ವರ್ಷಗಳಿಂದ ತಮಗೆ ವೇತನ ಸಿಗದ ಕಾರಣಕ್ಕಾಗಿ ರಮೇಶ್ ರಕ್ಷಾಳೆ ಎಂಬ ಶಿಕ್ಷಕ ಹಾಗೂ ಅವರ ಕುಟುಂಬ ರಾಷ್ಟ್ರಪತಿಗಳಿಗೆ ದಯಾಮರಣ ಕೋರಿದೆ.
ಮೂಲಗಳ ಪ್ರಕಾರ, ಚೋಂಡಿ ಮುಖೇಡದವರಾದ ರಮೇಶ್ ರಕ್ಷಾಳೆ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಆದರೆ, ಕಾಲೇಜಿನ ಆಡಳಿತ ಮಂಡಳಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರ ಅವರಲ್ಲಿ ತೀವ್ರ ಅಸಮಾಧಾನ ತಂದಿತ್ತು.

ಈ ಹಿನ್ನೆಲೆಯಲ್ಲಿ ಅವರು ಅಲ್ಲಿನ ಭ್ರಷ್ಟಾಚಾರವನ್ನು ಪ್ರಶ್ನೆ ಮಾಡಿದ್ದರು. ಇದರಿಂದ ಕುಪಿತಗೊಂಡ ಶಾಲಾ ಆಡಳಿತ ಮಂಡಳಿಯುವ ಅವರಿಗೆ 2006ರ ಮಾರ್ಚ್ ನಿಂದ ಈವರೆಗೆ ಸಂಬಳವನ್ನೇ ನೀಡಿಲ್ಲ ಎಂದು ರಮೇಶ್ ಆರೋಪಿಸಿದ್ದಾರೆ.
ಇದರಿಂದ ತೀವ್ರ ಮನನೊಂದಿರುವ ಕುಟುಂಬ, ತಾವು ಪಡುತ್ತಿರುವ ಕಷ್ಟಗಳೆನ್ನೆಲ್ಲಾ ಸವಿವರವಾಗಿ ಪತ್ರವೊಂದರಲ್ಲಿ ಬರೆದು ಅದನ್ನು ರಾಷ್ಟ್ರಪತಿಗೆ ಕಳುಹಿಸಿದ್ದು, ತಮಗೆ ಹಾಗೂ ತಮ್ಮ ಕುಟುಂಬ ದಯಾ ಮರಣ ಪಡೆಯಲು ಅನುಮತಿ ನೀಡಬೇಕೆಂದು ಕೋರಿದ್ದಾರೆ.
ರಮೇಶ್ ರಕ್ಷಾಳೆ ಜತೆಗೆ ಅವರ ಪತ್ನಿ ಇಂದೂಬಾಯಿ, ಮಕ್ಕಳಾದ ಮಣಿಶಾ, ಪ್ರಿಯಾಂಕಾ ಹಾಗೂ ವಿವೇಕಾನಂದ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ.
ತಮಗಾಗಿರುವ ಕಷ್ಟವನ್ನು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಗಮನಕ್ಕೆ ತಂದಿದ್ದರೂ, ಪ್ರಯೋಜನವಾಗಿಲ್ಲ. ಇದರಿಂದ ನೊಂದಿದ್ದ ರಮೇಶ್ ರಕ್ಷಾಳೆ, ಇಲಾಖೆಯ ಮುಂದೆ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆದರೂ, ಇಲಾಖೆ ಅದಕ್ಕೆ ಕ್ಯಾರೇ ಅಂದಿಲ್ಲ. ಈ ಹಿನ್ನೆಲೆಯಲ್ಲಿ ದುಃಖಿತರಾಗಿರುವ ರಕ್ಷಾಳೆ ರಾಷ್ಟ್ರಪತಿಯವರಲ್ಲಿ ದಯಾ ಮರಣ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications