ದಾಖಲಾತಿ ಕಡಿಮೆ ಆದರೆ ಶಿಕ್ಷಕರಿಗೆ ಶಿಕ್ಷೆ: ಶಿಕ್ಷಣ ಇಲಾಖೆ ಎಚ್ಚರಿಕೆ
ಬೆಂಗಳೂರು, ಜೂನ್ 06: ಎತ್ತಿಗೆ ಬಂದ ಜ್ವರಕ್ಕೆ ಎಮ್ಮೆಗೆ ಬರೆ ಎಳೆಯುವ ಕ್ರಮಕ್ಕೆ ರಾಜ್ಯ ಶಿಕ್ಷಣ ಇಲಾಖೆ ಮುಂದಾದಂತಿದೆ. ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕಡಿಮೆ ಆದರೆ ಅದಕ್ಕೆ ಶಿಕ್ಷಕರನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಎಚ್ಚರಿಸಿದೆ.
ಈಗಾಗಲೇ ಪಾಠ ಪ್ರವಚನಗಳ ಜೊತೆ-ಜೊತೆಗೆ ಸಮುದಾಯದ ಕಾರ್ಯಗಳನ್ನೂ ಮಾಡುತ್ತಲಿರುವ ಶಿಕ್ಷಕರಿಗೆ ಇದೊಂದು ಹೊಸ ತೂಗುಕತ್ತಿಯಾಗಿ ಪರಿಣಮಿಸಿದೆ.
ಯಾವ ಶಾಲೆಯಲ್ಲಿ ದಾಖಲಾತಿಗಳು ಕಡಿಮೆ ಆಗುತ್ತವೆಯೋ ಆ ಶಾಲೆಯ ಶಿಕ್ಷರು ವರ್ಗಾವಣೆಯ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಪತ್ರದ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.

50 ಮಕ್ಕಳಿಗಿಂತ ಕಡಿಮೆ ದಾಖಲಾತಿ ಇದ್ದರೆ ಅದನ್ನು ಹೆಚ್ಚಿಸುವ ಜವಾಬ್ದಾರಿ ಮುಖ್ಯಶಿಕ್ಷಕರು ಮತ್ತು ಸಹ ಶಿಕ್ಷಕರದ್ದಾಗಿರುತ್ತದೆ. ಶೂನ್ಯ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳು 25 ಹಾಗೂ ಪ್ರೌಢ ಶಾಲಾ ಶಿಕ್ಷಕರು 50 ಮಕ್ಕಳನ್ನು ಶಾಲೆಗೆ ಸೇರಿಸದಿದ್ದರೆ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗಳಿಗೆ ಮರು ನಿಯೋಜನೆ ಮಾಡಬೇಕು' ಎಂದು ಸೂಚಿಸಿದ್ದಾರೆ.
ಆದರೆ ಶೂನ್ಯ ದಾಖಲಾತಿ ಇರುವ ಶಾಲೆಗಳನ್ನು ಮುಚ್ಚುವ ಬಗ್ಗೆ ಚಿಂತನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಶೂನ್ಯ ದಾಖಲಾತಿ ಇರುವ ಶಾಲೆಗಳಲ್ಲಿ ಕೇವಲ ಒಬ್ಬ ಶಿಕ್ಷಕರನ್ನು ಮಾತ್ರವೇ ನಿಯೋಜಿಸಿ ಉಳಿದವರನ್ನು ಹೆಚ್ಚು ದಾಖಲಾತಿ ಇರುವ ಶಾಲೆಗೆ ನಿಯೋಜಿಸಲಾಗುವುದು ಎಂದಿದ್ದಾರೆ.
ಈ ವರ್ಷ 261 ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ ಎಂದು ಶಾಲಿನಿ ರಜನೀಶ್ ಮಾಹಿತಿ ನೀಡಿದ್ದಾರೆ. ಇಂತಹಾ ಶಾಲೆಗಳಲ್ಲಿ ಒಟ್ಟು 231 ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು, ಅವರು ಪಾಠವೇ ಮಾಡದೆ ಸಂಬಳ ಪಡೆಯುತಿದ್ದಾರೆ. 57 ಪ್ರೌಢಶಾಲೆಗಳಲ್ಲಿಯೂ ಸಹ 137 ಶಿಕ್ಷಕರು ಕೆಲಸವೇ ಇಲ್ಲದೆ ವೇತನ ಪಡೆಯುತಿದ್ದಾರೆ ಎಂದು ಮಾಹಿತಿ ನೀಡಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications