ತೇಜಸ್ವಿ ಸೂರ್ಯ ಸಲಹೆಗಳಲ್ಲಿ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು, ಅಕ್ಟೋಬರ್ 28: ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸಂಸದ ತೇಜಸ್ವಿ ಸೂರ್ಯ ಅವರ ಭೇಟಿ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿ, ತೇಜಸ್ವಿ ಸೂರ್ಯ ಅವರು ಕೆಲವು ಸಲಹೆ ನೀಡಿದ್ದಾರೆ. ಟನಲ್ ರಸ್ತೆಯಲ್ಲಿ ಕೇವಲ ಕಾರುಗಳಿಗೆ ಅನುಕೂಲವಾಗುತ್ತದೆ. ಮೆಟ್ರೋ ಮಾರ್ಗ ಕೂಡ ವಿಸ್ತರಿಸಬೇಕು ಎಂದು ಹೇಳುತ್ತಿದ್ದಾರೆ. ಇಲ್ಲಿ ಮೆಟ್ರೋ ಸೇರಿಸಲು ನಮ್ಮ ತಕರಾರು ಇಲ್ಲ. ಇದರ ಜೊತೆಗೆ ಅವರು ನೀಡಿರುವ ಇತರೆ ಸಲಹೆಗಳನ್ನು ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇನ್ನು ಬೆಂಗಳೂರಿನಲ್ಲಿ ಖಾಸಗಿ ಬಸ್ ಗಳು, ಸಣ್ಣ ಬಸ್ ಗಳಿಗೆ ಅವಕಾಶ ನೀಡಿ ಎಂದು ಹೇಳುತ್ತಿದ್ದಾರೆ. ಈಗಾಗಲೇ ಬೆಂಗಳೂರು ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಖಾಸಗಿ ಬಸ್ ಗಳಿಗೆ ಅವಕಾಶ ನೀಡಿದರೆ ಏನು ಉಪಯೋಗ ಎಂದು ಚರ್ಚೆ ಮಾಡಬೇಕಿದೆ ಎಂದರು.

ಅವರು ಬಿಎಂಎಲ್ ಟಿ ಮಾಡಬೇಕು ಎಂದು ಹೇಳಿದರು. ಆಗ ನಾನು ನಿಮ್ಮ ಕಾಲದಲ್ಲಿ ಯಾಕೆ ಮಾಡಲಿಲ್ಲ ಎಂದು ಕೇಳಿದೆ? ಅದಕ್ಕೆ ಅವರು ಆಗ ಆಗಲಿಲ್ಲ ಎಂದರು. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಎಷ್ಟು ಅನುದಾನ ಕೊಡಿಸುತ್ತೀರಿ ಎಂದು ಕೇಳಿದೆ. ನಿಮ್ಮ ಸಂಸದರೆಲ್ಲ ಬನ್ನಿ, ನಾನು ಕೂಡ ಬರುತ್ತೇನೆ. ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಅನುದಾನಕ್ಕೆ ಒತ್ತಾಯ ಮಾಡೋಣ ಎಂದು ಹೇಳಿದೆ ಎಂದರು.
ಇನ್ನು ಟನಲ್ ರಸ್ತೆಗೆ ಲಾಲ್ ಬಾಗ್ ನಲ್ಲಿ ಆರು ಎಕರೆ ಭೂಮಿಯನ್ನು ಬಳಸಿಕೊಳ್ಳುವುದಿಲ್ಲ. ಲಾಲ್ ಬಾಗ್ನ ಮೂಲೆಯಲ್ಲಿ ಟನಲ್ ರಸ್ತೆ ಪ್ರವೇಶ ಹಾಗೂ ನಿರ್ಗಮನಕ್ಕೆ ಅವಕಾಶ ನೀಡಲಾಗುವುದು. ಇಲ್ಲಿ ಬೇಡ ಎಂದರೆ, ಬೇರೆ ಎಲ್ಲಿ ಇದಕ್ಕೆ ಅವಕಾಶ ಕಲ್ಪಿಸಬಹುದು, ನೀವೇ ಸಲಹೆ ನೀಡಿ ಎಂದು ಕೇಳಿದೆ. ಅದಕ್ಕೆ ಅವರು ಎಲ್ಲಾ ದೇಶಗಳಲ್ಲೂ ಟನಲ್ ರಸ್ತೆ ಬೇಡ ಎನ್ನುತ್ತಿದ್ದಾರೆ ಎಂದರು. ಅದಕ್ಕೆ ನಾನು, ನೀವು ಒಬ್ಬರು ಹೇಳಿದಂತೆ ಕೇಳಲು ಆಗುವುದಿಲ್ಲ ಎಂದು ಹೇಳಿದೆ.
ಒಆರ್ ಆರ್ ನಲ್ಲಿ 70% ಸಾರ್ವಜನಿಕ ಸಾರಿಗೆ, ಬಿಟಿಆರ್ಎಸ್ ಮಾಡಬೇಕು ಎಂದು ಹೇಳಿದರು. ಸಬ್ ಅರ್ಬನ್ ರೈಲುಗಳ ಸಂಖ್ಯೆ ಹೆಚ್ಚಿಸಬೇಕು ಎಂದು ಹೇಳಿದರು. ಅದಕ್ಕೆ ಸರಿ, ಕೇಂದ್ರ ಸರ್ಕಾರದ ಬಳಿ ಹೋಗಿ ಹಣ ಕೇಳೋಣ. ಸೋಮಣ್ಣ ಅವರ ಜೊತೆ ಚರ್ಚೆ ಮಾಡೋಣ. ಹಣ ಕೊಟ್ಟರೆ ಮಾಡೋಣ. ಇದುವರೆಗೂ ಕೇಂದ್ರ ಸರ್ಕಾರ ಹಣ ನೀಡದ ಕಾರಣ, ಒಂದು ರೈಲನ್ನೂ ಸೇರಿಸಿಲ್ಲ. ಎಲ್ಲಕ್ಕೂ ನಮ್ಮ ಮೇಲೆ ಅವಲಂಬಿತವಾದರೆ ಹೇಗೆ? ಕೇವಲ ಸಲಹೆ ಮಾತ್ರವಲ್ಲ, ಇದಕ್ಕೆ ಪೂರಕವಾಗಿ ಹಣವನ್ನು ತನ್ನಿ ಎಂದು ಹೇಳಿದ್ದೇನೆ ಎಂದರು.
ಸಾರ್ವಜನಿಕ ಸಾರಿಗೆ ಮಾಡಿದರೆ ಖಾಸಗಿ ವಾಹನ ಕಡಿಮೆಯಾಗುತ್ತದೆ ಎಂದು ತೇಜಸ್ವಿ ಸೂರ್ಯ ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಈಗ ನೀವು ಇಲ್ಲಿಗೆ ಬರುವಾಗ ನಿಮ್ಮ ವಾಹನ ತಂದಿದ್ದೀರಿ. ನೀವು ನಿಮ್ಮ ವಾಹನ ತರುವುದನ್ನು ನಾನು ತಡೆಯಲು ಆಗುತ್ತದೆಯೇ? ಇದು ಸಾಮಾಜಿಕ ಬಾಧ್ಯತೆ. ಜನ ತಮ್ಮ ವಾಹನದಲ್ಲೇ ತಾವು, ತಮ್ಮ ಮನೆಯವರು ಪ್ರಯಾಣ ಮಾಡಬೇಕು ಎಂದು ಬಯಸುತ್ತಾರೆ. ನಾವು ಅವರಿಗೆ ನಿಮ್ಮ ವಾಹನ ತರಬೇಡಿ ಎಂದು ತಡೆಯಲು ಆಗುತ್ತದೆಯೇ? ಬೇಕಿದ್ದರೆ ಸಂಸದರು ತಮ್ಮ ಕ್ಷೇತ್ರದ ಜನರಿಗೆ, ನೀವು ನಿಮ್ಮ ಕಾರುಗಳನ್ನು ಮನೆಯಲ್ಲೇ ನಿಲ್ಲಿಸಿ, ಸಾರ್ವಜನಿಕ ಸಾರಿಗೆಯಲ್ಲಿ ಸಂಚಾರ ಮಾಡಿ ಕರೆ ನೀಡಲಿ. ಆಗ ಯಾರು ಪಾಲನೆ ಮಾಡುತ್ತಾರೆ ನೋಡೋಣ? ಕಾರಿಲ್ಲದ ಹುಡುಗನ ಮನೆಗೆ ಹೆಣ್ಣು ನೀಡಲು ಹಿಂದೇಟು ಹಾಕುತ್ತಾರೆ. ಇಂತಹ ಸಾಮಾಜಿಕ ಬಾಧ್ಯತೆಗಳ ಬಗ್ಗೆ ಸಂಸದರಿಗೆ ಅರಿವಿಲ್ಲ ಎಂದು ತಿಳಿಸಿದರು.
ಒಂದು ಕಡೆ ನಿಮ್ಮನ್ನು ಭೇಟಿ ಮಾಡುತ್ತಾರೆ, ಮತ್ತೊಂದೆಡೆ ಪಿಐಎಲ್ ಸಲ್ಲಿಸಿದ್ದಾರೆ. ಇಂತಹ ಇಬ್ಬಗೆ ನೀತಿ ಯಾಕೆ ಎಂದು ಕೇಳಿದಾಗ, "ಅವರು ಏನಾದರೂ ಪಿಐಎಲ್ ಹಾಕಿಕೊಳ್ಳಲಿ. ಬೇಕಿದ್ದರೆ ನ್ಯಾಯಾಲಯವೇ ಸಮಿತಿ ರಚಿಸಿ ಎಲ್ಲಾ ಸ್ಥಳಗಳನ್ನು ಪರಿಶೀಲಿಸಲಿ. ನಾನು ಅಥವಾ ನಮ್ಮ ಅಧಿಕಾರಿಗಳು ಏನಾದರೂ ತಪ್ಪು ಮಾಡಿದ್ದರೆ ತಿಳಿಸಲಿ. ಅದನ್ನು ಸರಿಪಡಿಸಿಕೊಳ್ಳಲು ಸಿದ್ಧರಿದ್ದೇವೆ ಎಂದರು.
-
Siddaramaiah: ಡಿಕೆ ಶಿವಕುಮಾರ್ದು ಕಾಂಗ್ರೆಸ್ಗೆ ರಾಜಿಯಿಲ್ಲದ ನಿಷ್ಠೆ: ಸಿದ್ದರಾಮಯ್ಯ, ಸಿಎಂ ಕುರ್ಚಿ ಚರ್ಚೆ -
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
ಬೆಂಗಳೂರಿನಂತೆ ಇಲ್ಲಿ ಟ್ರಾಫಿಕ್ ಇಲ್ಲ, ನಮ್ಮ ಹೈದರಾಬಾದ್ ಬೆಸ್ಟ್ ಎಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications