Anganawadi: ಬಿಸಿಲಿನ ತಾಪಮಾನ ಹೆಚ್ಚಳ; 8 ಜಿಲ್ಲೆಗಳಲ್ಲಿ ಅಂಗನವಾಡಿ ಸಮಯ ಬದಲಾವಣೆ
ಬೆಂಗಳೂರು, ಏಪ್ರಿಲ್.02: ರಾಜ್ಯದಲ್ಲಿ ಬಿಸಿಲು ಕಡಿಮೆಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಇದೇ ವೇಳೆ ಜನ ಮನೆಯಿಮದ ಹೊರ ಬರುವುದೇ ಕಷ್ಟವಾಗಿದೆ. ಇಂತಹ ಸಮಯದಲ್ಲಿ ಚಿಕ್ಕ ಮಕ್ಕಳನ್ನು ಬಿಸಿಲಿಗೆ ಬಿಡುವುದು ಅನೇಕ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹೀಗಾಗಿಯೇ ಮಕ್ಕಳಿಗಾಗಿ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಅಂಗನವಾಡಿ ಸಮಯ ಬದಲಾವಣೆ ಮಾಡಲಾಗಿದೆ.
ಬಿಸಿಲು ಹೆಚ್ಚಿರುವ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್ ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಜಿ ಸಿ ಪ್ರಕಾಶ್ ಆದೇಶ ಹೊರಡಿಸಿದ್ದಾರೆ.

ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಏಪ್ರಿಲ್ ಮತ್ತು ಮೇ - 2024ರ ಮಾಹೆಗಳಲ್ಲಿ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ತಾತ್ಕಾಲಿಕವಾಗಿ ಪರಿಷ್ಕರಿಸುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸಿದೆ. ಇದರ ಪ್ರಕಾರ, ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ ಮತ್ತು ಮೇ-2024ರ ತಿಂಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಮತ್ತು ಬಾಗಲಕೋಟೆ, ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಅಂಗನವಾಡಿ ಕೇಂದ್ರಗಳನ್ನು ಬೆಳಗ್ಗೆ 08:00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆ ಇಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಜಿ ಸಿ ಪ್ರಕಾಶ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮುಂದುವರೆಯಲಿದೆ ಶುಷ್ಕ ಹವಾಮಾನ ಮತ್ತು ಶಾಖದ ಅಲೆ
ಭಾರತದ ಹವಾಮಾನ ಇಲಾಖೆ (ಐಎಂಡಿ) ಏಪ್ರಿಲ್ 5 ರವರೆಗೆ ಕರ್ನಾಟಕದ ಉತ್ತರ ಜಿಲ್ಲೆಗಳಲ್ಲಿ ಶಾಖದ ಅಲೆ ಮತ್ತು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವಾಮಾನದ ಮುನ್ಸೂಚನೆಯನ್ನು ನೀಡಿದೆ. ಐಎಂಡಿ ಪ್ರಕಾರ, ದಕ್ಷಿಣ ತಮಿಳುನಾಡಿನಿಂದ ಪೂರ್ವ ವಿದರ್ಭದವರೆಗೆ ಕೆಲವು ಗಾಳಿ ಮತ್ತು ಹವಾಮಾನ ಪರಿಸ್ಥಿತಿಯಿಂದಾಗಿ, ಕರ್ನಾಟಕ ಏಪ್ರಿಲ್ 6 ರಿಂದ 8 ರವರೆಗೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ಉತ್ತರ ಕರ್ನಾಟಕದಲ್ಲಿ ಶಾಖದ ಅಲೆ ಹೆಚ್ಚಾಗಲಿದೆ. ಐಎಂಡಿ ಪ್ರಕಾರ, ರಾಜ್ಯದ ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಳಗಾವಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದಿದೆ. ಹೀಗಾಗಿ ಎಂಟು ಜಿಲ್ಲೆಗಳ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications