ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಬಿಜೆಪಿ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ರಾಜ್ಯ ಸರ್ಕಾರವು ಇತ್ತೀಚೆಗೆ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ, ಸೇವಾ ಕಾಣಿಕೆ ಹೆಸರಿನಲ್ಲಿ ಭಕ್ತರ ಸುಲಿಗೆ ಮಾಡಲು ಮುಂದಾಗಿದೆ ಎಂದು ಆರೋಪ ಮಾಡಿದೆ. ಇದಕ್ಕೆ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವೆಲ್ಲ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಹೆಚ್ಚಳವಾಗಿತ್ತು ಎಂದು ಪಟ್ಟಿ ಹಂಚಿಕೊಂಡಿದ್ದಾರೆ.
ರಾಜ್ಯದ 35,554 ದೇವಸ್ಥಾಗಳ ಪೈಕಿ ವಿವಿಧ ಭಾಗಗಳ 14 ದೇವಸ್ಥಾನಗಳಲ್ಲಿ ಮಾತ್ರ ದೇವಾಲಯಗಳ ಸೇವಾಶುಲ್ಕ ಹೆಚ್ಚಳವಾಗಿದೆ. ಸಂಬಂಧಪಟ್ಟ 14 ದೇವಸ್ಥಾನಗಳ ಆಡಳಿತ ಮಂಡಳಿಗಳ ಕೋರಿಕೆ ಮೇರೆಗೆ ಈ ಸೇವಾ ಶುಲ್ಕ ಹೆಚ್ಚಳ ಮಾಡಿರುವುದು ಎಂಬುದು ಗಮನಿಸತಕ್ಕದ್ದು. ಇದಕ್ಕೆ ಸರ್ಕಾರದ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಸರ್ಕಾರದ ಹಸ್ತಕ್ಷೇಪ ಇರಲ್ಲ
ಈ ದೇವಾಲಯಗಳ ಸೇವಾಶುಲ್ಕವು ಕಡೆ ಬಾರಿ ಪರಿಷ್ಕರಣೆಯಾಗಿದ್ದು ಸುಮಾರು 7ರಿಂದ 15 ವರ್ಷಗಳ ಹಿಂದೆ, ಇದನ್ನು ಪರಿಷ್ಕರಣೆ ಮಾಡುವ ನಿರ್ಣಯ ಕೈಗೊಂಡಿರುವುದು ಕೂಡ ದೇವಾಲಯಗಳ ವ್ಯವಸ್ಥಾಪನಾ ಸಮಿತಿ. ಹೊಸ ಸೇವಾಶುಲ್ಕದಿಂದ ಸಂಗ್ರಹವಾಗುವ ಹಣ ಕೂಡ ಅದೇ ದೇವಾಲಯಗಳ ನಿರ್ವಹಣೆ, ಅಭಿವೃದ್ಧಿಗೆ ಬಳಕೆಯಾಗಲಿದೆ. ಇಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವೇ ಇರುವುದಿಲ್ಲ ಎಂದಿದ್ದಾರೆ.
'ಹಿಂದು ಪರ' ಎನ್ನುವ ಮತ್ತು ಸದಾ ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುವ ಬಿಜೆಪಿ ನಾಯಕರು, ಇನ್ನಾದರೂ ತಮ್ಮ ಮುಖವಾಡವನ್ನು ಕಳಚಲಿ, ಧರ್ಮ- ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಕೆಲಸ ಮಾಡುವ ಇವರುಗಳಿಗೆ ಆ ದೇವರೇ ಸದ್ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಇದು ಬಿಜೆಪಿ ನಾಯಕರ ಬೌದ್ಧಿಕ ಅಧಃಪತನದ ಪರಾಮಾವಧಿ. ಧರ್ಮದ ಹೆಸರಲ್ಲಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಹತಾಶ ಪ್ರಯತ್ನ. ಧರ್ಮ ರಕ್ಷಣೆಗಾಗಿಯೇ ಅಧಿಕಾರಕ್ಕೆ ಬಂದವರು ನಾವು ಎನ್ನುವ 'ನಕಲಿ ಧರ್ಮರಕ್ಷಕ' ಬಿಜೆಪಿ ಸರ್ಕಾರದವರು 2019-2023 ಅವಧಿಯಲ್ಲಿ 24 ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕವನ್ನು ಏರಿಕೆ ಮಾಡಿದ್ದರು. ಇದು ಧರ್ಮ ವಿರೋಧಿ ನಡೆಯೇ? ಎಂದು ತರಾಟೆಗೆ ತೆಗೆದುಕೊಂಡಿರುವ ರಾಮಲಿಂಗಾ ರೆಡ್ಡಿ, ಅವುಗಳ ಪಟ್ಟಿ ಹಂಚಿಕೊಂಡಿದ್ದಾರೆ.
1. ಶ್ರೀ ವೀರಭದ್ರ ಸ್ವಾಮಿ ದೇವಾಲಯ, ನೆಲಮಂಗಲ ತಾಲ್ಲೂಕು
2. ಶ್ರೀ ಮಹಾಲಿಂಗೇಶ್ವರಸ್ವಾಮಿ ದೇವಾಲಯ, ಕವೂರು
3. ಶ್ರೀ ವೀರಭದ್ರೇಶ್ವರಸ್ವಾಮಿ ದೇವಾಲಯ, ದರೂರು ಗ್ರಾಮ, ಸಿರುಗುಪ್ಪ ತಾಲ್ಲೂಕು, ಬಳ್ಳಾರಿ
4. ಶ್ರೀ ಮೈಲಾರಲಿಂಗಸ್ವಾಮಿ ದೇವಾಲಯ, ಹೂವಿನಹಡಗಲಿ ತಾಲ್ಲೂಕು, ಬಳ್ಳಾರಿ
5. ಶ್ರೀ ಹೊಸೂರಮ್ಮ ದೇವಾಲಯ, ಹೊಸಪೇಟೆ ತಾಲ್ಲೂಕು, ಬಳ್ಳಾರಿ
6. ಶ್ರೀ ವಿಶ್ವೇಶ್ವರಸ್ವಾಮಿ ದೇವಾಲಯ, ಎಲ್ಲೂರು, ಕಾಪು ತಾಲ್ಲೂಕು, ಉಡುಪಿ
7. ಶ್ರೀಬೋಳರಾಮೇಶ್ವರಸ್ವಾಮಿ ದೇವಾಲಯ, ಚಿಕ್ಕಮಗಳೂರು ನಗರ
8. ಶ್ರೀ ಕೋಟಿಲಿಂಗೇಶ್ವರಸ್ವಾಮಿ ದೇವಾಲಯ, ಕುಂದಾಪುರ ತಾಲ್ಲೂಕು, ಉಡುಪಿ
9. ಶ್ರೀ ನಾಗೇಶ್ವರಸ್ವಾಮಿ ದೇವಾಲಯ, ಚನ್ನರಾಯಪಟ್ಟಣ, ಹಾಸನ
10. ಶ್ರೀ ಮಹಿಷಮರ್ಧಿನಿ ದೇವಾಲಯ, ಕಡಿಯಾಳಿ, ಉಡುಪಿ
11. ತಿಪಟೂರು ಕಿಬ್ಬನಹಳ್ಳಿ ರಜತಾದ್ರಿಪುರ ಹತ್ಯಾಳು ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾದೇವಾಲ. ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯ, ಕುಣಿಗಲ್ ತಾಲ್ಲೂಕು, ತುಮಕೂರು
12. ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯ, ಕುಣಿಗಲ್ ತಾಲ್ಲೂಕು, ತುಮಕೂರು
13. ತುಮಕೂರು ಜಿಲ್ಲೆ, ಪಾವಗಡ ತಾಲ್ಲೂಕು, ನಾಗಲಮಡಿಕೆ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯ
14. ಮೈಸೂರು ಜಿಲ್ಲೆ ನಂಜನಗೂಡು ತಾ. ಚಿಕ್ಕಯ್ಯನ ಛತ್ರದಲ್ಲಿರುವ ಶ್ರೀ ಪ್ರಸನ್ನ ನಂಜುಂಡೇಶ್ವರಸ್ವಾಮಿ ದೇವಾಲಯ
15. ದ.ಕ. ಜಿಲ್ಲೆರವರ ಕೋರಿಕೆಯಂತೆ, ಕುತ್ಯಾರು ಶ್ರೀ ಸೋಮನಾಥೇಶ್ವರ ದೇ. ಬೆಳ್ತಂಗಡಿ
16. ಕನಕಪುರ ತಾಲ್ಲೂಕು ಸಾತನೂರು ಹೋಬಳಿ ಕಬ್ಬಾಳು ಗ್ರಾಮದ ಶ್ರೀ ಕಬ್ಬಾಳಮ್ಮ ದೇವಾಲಯ
17. ಬೆಂಗಳೂರು ನಗರ ಸಂಪಂಗಿರಾಮನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ ಮತ್ತು ಶ್ರೀ ಲಕ್ಷ್ಮೀವೆಂಕಟೇಶ್ವರ ಸ್ವಾಮಿ ದೇವಾಲಯ
18. ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲ್ಲೂಕು, ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ
19. ಶ್ರೀ ಅಮೃತೇಶ್ವರಸ್ವಾಮಿ ದೇವಾಲಯ, ಬ್ರಹ್ಮಾವರ ತಾಲ್ಲೂಕು, ಉಡುಪಿ
20. ಶ್ರೀ ದೊಡ್ಡಗಣಪತಿ ಮತ್ತು ಸಮೂಹ ದೇವಾಲಯಗಳು, ಬಸವನಗುಡಿ, ಬೆಂಗಳೂರು.
21. ಶ್ರೀ ಕಾಶಿವಿಶ್ವೇಶ್ವರಸ್ವಾಮಿ ದೇವಾಲಯ, ಅಂತರಗಂಗೆ, ಕೋಲಾರ
22. ಚನ್ನಪಟ್ಟಣ ತಾಲ್ಲೂಕು, ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಾಲಯ
23. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕು ಎಡೆಯೂರು ಗ್ರಾಮದ ಶ್ರೀಶ್ರೀಸಿದ್ದಲಿಂಗೇಶ್ವರ ದೇವಾಲಯ
24. ಬೆಂಗಳೂರು ನಗರ ಜಿಲ್ಲೆ ಹನುಮಂತನಗರ ಶ್ರೀ ಕುಮಾರಸ್ವಾಮಿ ದೇವಾಲಯ ಶ್ರೀ ಪಂಚಮುಖಿ ಸನ್ನಿಧಿ ಮತ್ತು ಶ್ರೀ ಉದ್ಭವ ಆಧಿಶೇಷ ಸನ್ನಿಧಿ
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications