Karnataka Trains: ಕೆಲವು ರೈಲುಗಳ ಸಂಚಾರ ಭಾರೀ ವಿಳಂಬ: ದಸರಾಗೆ ರೈಲುಗಳ ನಿಲುಗಡೆ, ವಿವರ: SWR
ಬೆಂಗಳೂರು, ಸೆಪ್ಟಂಬರ್ 04: ಕರ್ನಾಟಕ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳ ರೈಲುಗಳನ್ನು ನೈಋತ್ಯ ರೈಲ್ವೆ ನಿಯಂತ್ರಿಸಲಿದೆ. ಹಾಸನ-ಕೊರವಂಗಲ ಮತ್ತು ಹಾಸನ-ಮಾವಿನಕೆರೆ ನಿಲ್ದಾಣಗಳ ನಡುವಿನ ಸಂಪೂರ್ಣ ಹಳಿ ನವೀಕರಣ ಕಾರ್ಯ ನಡೆಯಲಿದೆ. ಹೀಗಾಗಿ ಕೆಲವು ರೈಲು ಸೇವೆಗಳ ನಿಯಂತ್ರಿಸಲಾಗುತ್ತದೆ. ಇದರಿಂದ ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಗಲಿದೆ. ಇದರೊಂದಿಗೆ ದಸರಾ ಪ್ರಯುಕ್ತ ರಾಜ್ಯದ ಈ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ನೀಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
* ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್ ರೈಲು (ಸಂಖ್ಯೆ 16222) ಸೆಪ್ಟೆಂಬರ್ 4 ಮತ್ತು 5 ರಂದು 30 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ. ಇದರಿಂದ ಅಂದು ಪ್ರಯಾಣಿಕರಿಗೆ ಸಂಚಾರ ವಿಳಂಬವಾಗಲಿದೆ.

* ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲು (16221) ಹಾಗೂ ಕೆಎಸ್ಆರ್ ಬೆಂಗಳೂರು-ಹಾಸನ ಮೆಮು ವಿಶೇಷ ರೈಲು (06583) ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 12 ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ 19 ರವರೆಗೆ ತಲಾ 15 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ.
* ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು (16225) ಸೆಪ್ಟೆಂಬರ್ 8ರಿಂದ ಸೆಪ್ಟೆಂಬರ್ 12ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 19ರವರೆಗೆ 80 ನಿಮಿಷಗಳ ಕಾಲ ಈ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ ಎಂದು SWR ತಿಳಿಸಿದೆ.
ದಸರಾ: ಕರ್ನಾಟಕ ರೈಲುಗಳ ನಿಲುಗಡೆ ವಿವರ
ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಪ್ರಯುಕ್ತ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಅವರನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2, ರವರೆಗೆ ಕೆಳಗಿನ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ನೀಡಲಿವೆ.
* ಮೈಸೂರು-ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್ ರೈಲು (16225/16226) ಬೆಳಗುಳಿ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಡ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ ಹಾಲ್ಟ್, ಹೊಸ ಅಗ್ರಹಾರ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.
* ಮೈಸೂರು-ತಾಳಗುಪ್ತ-ಮೈಸೂರು ಎಕ್ಸ್ಪ್ರೆಸ್ ರೈಲು (16222/16221) ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಡೋರನಹಳ್ಳಿ, ಹಂಪಾಪುರ ಮತ್ತು ಅರ್ಜುನಹಳ್ಳಿ ಹಾಲ್ಡ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
* ರೈಲು ಸಂಖ್ಯೆ 17301/17302 ಮೈಸೂರು-ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ ರೈಲು ಬೆಳಗುಳಿ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್, ಮಂದಗೆರೆ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಈ ಮೇಲಿನಂತೆ ಅನುಕೂಲವಾಗುವ ರೀತಿಯಲ್ಲಿ ಪ್ರಯಾಣವನ್ನು ಪ್ಲಾನ್ ಮಾಡಿಕೊಳ್ಳಬೇಕು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications