Karnataka Trains: ಕೆಲವು ರೈಲುಗಳ ಸಂಚಾರ ಭಾರೀ ವಿಳಂಬ: ದಸರಾಗೆ ರೈಲುಗಳ ನಿಲುಗಡೆ, ವಿವರ: SWR
ಬೆಂಗಳೂರು, ಸೆಪ್ಟಂಬರ್ 04: ಕರ್ನಾಟಕ ವ್ಯಾಪ್ತಿಯಲ್ಲಿ ವಿವಿಧ ಮಾರ್ಗಗಳ ರೈಲುಗಳನ್ನು ನೈಋತ್ಯ ರೈಲ್ವೆ ನಿಯಂತ್ರಿಸಲಿದೆ. ಹಾಸನ-ಕೊರವಂಗಲ ಮತ್ತು ಹಾಸನ-ಮಾವಿನಕೆರೆ ನಿಲ್ದಾಣಗಳ ನಡುವಿನ ಸಂಪೂರ್ಣ ಹಳಿ ನವೀಕರಣ ಕಾರ್ಯ ನಡೆಯಲಿದೆ. ಹೀಗಾಗಿ ಕೆಲವು ರೈಲು ಸೇವೆಗಳ ನಿಯಂತ್ರಿಸಲಾಗುತ್ತದೆ. ಇದರಿಂದ ಗಂಟೆಗಳ ಕಾಲ ರೈಲು ಸಂಚಾರ ವಿಳಂಬವಾಗಲಿದೆ. ಇದರೊಂದಿಗೆ ದಸರಾ ಪ್ರಯುಕ್ತ ರಾಜ್ಯದ ಈ ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ನೀಡಲಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
* ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್ಪ್ರೆಸ್ ರೈಲು (ಸಂಖ್ಯೆ 16222) ಸೆಪ್ಟೆಂಬರ್ 4 ಮತ್ತು 5 ರಂದು 30 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ. ಇದರಿಂದ ಅಂದು ಪ್ರಯಾಣಿಕರಿಗೆ ಸಂಚಾರ ವಿಳಂಬವಾಗಲಿದೆ.

* ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್ಪ್ರೆಸ್ ರೈಲು (16221) ಹಾಗೂ ಕೆಎಸ್ಆರ್ ಬೆಂಗಳೂರು-ಹಾಸನ ಮೆಮು ವಿಶೇಷ ರೈಲು (06583) ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 12 ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ 19 ರವರೆಗೆ ತಲಾ 15 ನಿಮಿಷಗಳ ಕಾಲ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ.
* ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು (16225) ಸೆಪ್ಟೆಂಬರ್ 8ರಿಂದ ಸೆಪ್ಟೆಂಬರ್ 12ರವರೆಗೆ ಹಾಗೂ ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 19ರವರೆಗೆ 80 ನಿಮಿಷಗಳ ಕಾಲ ಈ ಮಾರ್ಗದಲ್ಲಿ ನಿರ್ಬಂಧಿಸಲಾಗುತ್ತದೆ ಎಂದು SWR ತಿಳಿಸಿದೆ.
ದಸರಾ: ಕರ್ನಾಟಕ ರೈಲುಗಳ ನಿಲುಗಡೆ ವಿವರ
ಮೈಸೂರಿನಲ್ಲಿ ನಡೆಯಲಿರುವ ದಸರಾ ಹಬ್ಬದ ಪ್ರಯುಕ್ತ ನಿರೀಕ್ಷಿತ ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಅವರನ್ನು ನಿಭಾಯಿಸಲು ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು, ನೈಋತ್ಯ ರೈಲ್ವೆಯು ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 2, ರವರೆಗೆ ಕೆಳಗಿನ ರೈಲುಗಳಿಗೆ ತಾತ್ಕಾಲಿಕ ನಿಲುಗಡೆ ನೀಡಲಿವೆ.
* ಮೈಸೂರು-ಶಿವಮೊಗ್ಗ ಟೌನ್-ಮೈಸೂರು ಎಕ್ಸ್ಪ್ರೆಸ್ ರೈಲು (16225/16226) ಬೆಳಗುಳಿ, ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಡ್, ಸಾಗರಕಟ್ಟೆ, ಡೋರನಹಳ್ಳಿ, ಹಂಪಾಪುರ, ಅರ್ಜುನಹಳ್ಳಿ ಹಾಲ್ಟ್, ಹೊಸ ಅಗ್ರಹಾರ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ.
* ಮೈಸೂರು-ತಾಳಗುಪ್ತ-ಮೈಸೂರು ಎಕ್ಸ್ಪ್ರೆಸ್ ರೈಲು (16222/16221) ಕೃಷ್ಣರಾಜಸಾಗರ, ಕಲ್ಲೂರು ಎಡಹಳ್ಳಿ ಹಾಲ್ಟ್, ಡೋರನಹಳ್ಳಿ, ಹಂಪಾಪುರ ಮತ್ತು ಅರ್ಜುನಹಳ್ಳಿ ಹಾಲ್ಡ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
* ರೈಲು ಸಂಖ್ಯೆ 17301/17302 ಮೈಸೂರು-ಬೆಳಗಾವಿ-ಮೈಸೂರು ಎಕ್ಸ್ಪ್ರೆಸ್ ರೈಲು ಬೆಳಗುಳಿ, ಸಾಗರಕಟ್ಟೆ, ಹೊಸ ಅಗ್ರಹಾರ, ಅಕ್ಕಿಹೆಬ್ಬಾಳು, ಬೀರಹಳ್ಳಿ ಹಾಲ್ಟ್, ಮಂದಗೆರೆ ಮತ್ತು ಮಾವಿನಕೆರೆ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ಈ ಮೇಲಿನಂತೆ ಅನುಕೂಲವಾಗುವ ರೀತಿಯಲ್ಲಿ ಪ್ರಯಾಣವನ್ನು ಪ್ಲಾನ್ ಮಾಡಿಕೊಳ್ಳಬೇಕು.
-
New Railway Line: 6000 ಕಿಮೀ ರೈಲ್ವೆ ಜಾಲ ವಿಸ್ತರಣೆ, 100 ಯೋಜನೆಗಳ ಜಾರಿಗೆ ₹1.53 ಲಕ್ಷ ಕೋಟಿ ಹೂಡಿಕೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications