Tesla In karnataka: ಕರ್ನಾಟಕದಲ್ಲಿ ಟೆಸ್ಲಾ; ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿದ್ದೇನು?
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಎಚ್ಡಿಕೆ ಅವರು ಮೊದಲ ಬಾರಿ ಕೇಂದ್ರ ಸಚಿವರಾಗಿರುವ ಕಾರಣ ರಾಜ್ಯದ ಜನ ಅವರ ಮೇಲೆ ಹೆಚ್ಚಿನ ನಿರೀಕ್ಷೆಯನ್ನೇ ಇಟ್ಟುಕೊಂಡಿದ್ದಾರೆ.
ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಖಾತೆಯನ್ನು ವಹಿಸಿಕೊಂಡ ನಂತರ, ಎಚ್ಡಿ ಕುಮಾರಸ್ವಾಮಿ ಅವರಿಗೆ ವರದಿಗಾರರು ಟೆಸ್ಲಾದಂತಹ ಕಂಪನಿಯು ಕರ್ನಾಟಕದಲ್ಲಿ ಕಾರ್ಖಾನೆಯನ್ನು ಸ್ಥಾಪಿಸುವ ಬಗ್ಗೆ ಕೇಳಿದ್ದು, ಎಚ್ಡಿಕೆ ಅಚ್ಚರಿಯ ಉತ್ತರ ನೀಡಿದ್ದಾರೆ.

ನಾನು ಸ್ವಾರ್ಥಿಯಲ್ಲ ಎಂದು ಹೇಳಿರುವ ಅವರ, ಈಗ ನನ್ನ ಗಮನ ಕೇವಲ ಕರ್ನಾಟಕವಲ್ಲ ಇಡೀ ದೇಶವಾಗಿದೆ ಎಂದು ಹೇಳಿದ್ದಾರೆ.ಹೌದು, ರಾಜ್ಯಕ್ಕೆ ಟೆಸ್ಲಾ ತರುವ ಆಸೆ ಇದೆ, ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
ಬಳಿಕ, "ನನ್ನ ಕಾಳಜಿ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇಡೀ ದೇಶದ ಬೆಳವಣಿಗೆಯಾಗಿದೆ. ನಾವು ಅದರಂತೆ ಕೆಲಸ ಮಾಡುತ್ತೇವೆ. ನಾನು ಸ್ವಾರ್ಥಿಯಲ್ಲ. ದೇಶದ ಬೆಳವಣಿಗೆಗೆ ಪ್ರಾಮಾಣಿಕವಾಗಿ ನಾವು ಕೆಲಸ ಮಾಡುತ್ತೇವೆ" ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸ್ಥಾನಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದ್ದರೂ ಎಚ್ಡಿ ಕುಮಾರಸ್ವಾಮಿ ಪ್ರಮುಖ ಖಾತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಅವರ ನಡುವೆ ಕರ್ನಾಟಕದ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ಪಕ್ಷಗಳು ಗೆಲುವು ಸಾಧಿಸಿದ್ದವು.
ಭಾರತಕ್ಕೆ ಟೆಸ್ಲಾ ಬರೋದ್ಯಾವಾಗ?
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವು ದಿನಗಳ ನಂತರ, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಪ್ರಧಾನಿ ನರೇಂದ್ರ ಮೊದಿ ಅವರನ್ನು ಅಭಿನಂದಿಸಿದ್ದಾರೆ. ಭಾರತದಲ್ಲಿ ತಮ್ಮ ಕಂಪನಿಗಳನ್ನು ಸ್ಥಾಪನೆ ಮಾಡಲು ಎದರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
"ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಚುನಾವಣೆಯಲ್ಲಿ ಗೆಲುವಿಗಾಗಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು! ಭಾರತದಲ್ಲಿ ನನ್ನ ಕಂಪನಿಗಳು ಅತ್ಯಾಕರ್ಷಕ ಕೆಲಸವನ್ನು ಮಾಡುವುದನ್ನು ಎದುರು ನೋಡುತ್ತಿದ್ದೇನೆ" ಎಂದು ಮಸ್ಕ್ ಶುಕ್ರವಾರ ಹೇಳಿದ್ದಾರೆ.
"ನಿಮ್ಮ ಶುಭಾಶಯಗಳನ್ನು ಶ್ಲಾಘಿಸಿದ್ದೇನೆ, ನಮ್ಮ ಜನಸಂಖ್ಯಾಶಾಸ್ತ್ರ, ಊಹಿಸಬಹುದಾದ ನೀತಿಗಳು ಮತ್ತು ಸ್ಥಿರವಾದ ಪ್ರಜಾಪ್ರಭುತ್ವದ ರಾಜಕೀಯವು ನಮ್ಮ ಎಲ್ಲಾ ಪಾಲುದಾರರಿಗೆ ವ್ಯಾಪಾರ ವಾತಾವರಣವನ್ನು ಒದಗಿಸುವುದನ್ನು ಮುಂದುವರಿಸುತ್ತದೆ" ಎಂದು ಪ್ರಧಾನಿ ಮೋದಿ ಎಲಾನ್ ಮಸ್ಕ್ ಅವರ ಟ್ವೀಟ್ಗೆ ಉತ್ತರಿಸಿದರು.
ಭಾರತದಲ್ಲಿ ಹೂಡಿಕೆಗೆ ಟೆಸ್ಲಾ ಆಸಕ್ತಿ ವಹಿಸಿದ್ದು, ಚಾಲಕ ಸಹಿತ ಕಾರುಗಳ ಉತ್ಪಾದನೆ ಮಾಡಲು ಎಲಾನ್ ಮಸ್ಕ್ ಆಸಕ್ತಿ ತೋರಿಸಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications