Tesla In karnataka: ಕರ್ನಾಟಕದಲ್ಲಿ ಟೆಸ್ಲಾ; ಸಚಿವ ಎಚ್ಡಿ ಕುಮಾರಸ್ವಾಮಿ ಹೇಳಿದ್ದೇನು?
ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಚ್ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಎಚ್ಡಿಕೆ ಅವರು ಮೊದಲ ಬಾರಿ ಕೇಂದ್ರ ಸಚಿವರಾಗಿರುವ ಕಾರಣ ರಾಜ್ಯದ ಜನ ಅವರ ಮೇಲೆ ಹೆಚ್ಚಿನ ನಿರೀಕ್ಷೆಯನ್ನೇ ಇಟ್ಟುಕೊಂಡಿದ್ದಾರೆ.
ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಖಾತೆಯನ್ನು ವಹಿಸಿಕೊಂಡ ನಂತರ, ಎಚ್ಡಿ ಕುಮಾರಸ್ವಾಮಿ ಅವರಿಗೆ ವರದಿಗಾರರು ಟೆಸ್ಲಾದಂತಹ ಕಂಪನಿಯು ಕರ್ನಾಟಕದಲ್ಲಿ ಕಾರ್ಖಾನೆಯನ್ನು ಸ್ಥಾಪಿಸುವ ಬಗ್ಗೆ ಕೇಳಿದ್ದು, ಎಚ್ಡಿಕೆ ಅಚ್ಚರಿಯ ಉತ್ತರ ನೀಡಿದ್ದಾರೆ.

ನಾನು ಸ್ವಾರ್ಥಿಯಲ್ಲ ಎಂದು ಹೇಳಿರುವ ಅವರ, ಈಗ ನನ್ನ ಗಮನ ಕೇವಲ ಕರ್ನಾಟಕವಲ್ಲ ಇಡೀ ದೇಶವಾಗಿದೆ ಎಂದು ಹೇಳಿದ್ದಾರೆ.ಹೌದು, ರಾಜ್ಯಕ್ಕೆ ಟೆಸ್ಲಾ ತರುವ ಆಸೆ ಇದೆ, ನಾವು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದಾರೆ.
ಬಳಿಕ, "ನನ್ನ ಕಾಳಜಿ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇಡೀ ದೇಶದ ಬೆಳವಣಿಗೆಯಾಗಿದೆ. ನಾವು ಅದರಂತೆ ಕೆಲಸ ಮಾಡುತ್ತೇವೆ. ನಾನು ಸ್ವಾರ್ಥಿಯಲ್ಲ. ದೇಶದ ಬೆಳವಣಿಗೆಗೆ ಪ್ರಾಮಾಣಿಕವಾಗಿ ನಾವು ಕೆಲಸ ಮಾಡುತ್ತೇವೆ" ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸ್ಥಾನಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಿದ್ದರೂ ಎಚ್ಡಿ ಕುಮಾರಸ್ವಾಮಿ ಪ್ರಮುಖ ಖಾತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಅವರ ನಡುವೆ ಕರ್ನಾಟಕದ 28 ಕ್ಷೇತ್ರಗಳ ಪೈಕಿ 19 ಕ್ಷೇತ್ರಗಳಲ್ಲಿ ಪಕ್ಷಗಳು ಗೆಲುವು ಸಾಧಿಸಿದ್ದವು.
ಭಾರತಕ್ಕೆ ಟೆಸ್ಲಾ ಬರೋದ್ಯಾವಾಗ?
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವು ದಿನಗಳ ನಂತರ, ಟೆಸ್ಲಾ ಸಿಇಒ ಎಲಾನ್ ಮಸ್ಕ್ ಪ್ರಧಾನಿ ನರೇಂದ್ರ ಮೊದಿ ಅವರನ್ನು ಅಭಿನಂದಿಸಿದ್ದಾರೆ. ಭಾರತದಲ್ಲಿ ತಮ್ಮ ಕಂಪನಿಗಳನ್ನು ಸ್ಥಾಪನೆ ಮಾಡಲು ಎದರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
"ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಚುನಾವಣೆಯಲ್ಲಿ ಗೆಲುವಿಗಾಗಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು! ಭಾರತದಲ್ಲಿ ನನ್ನ ಕಂಪನಿಗಳು ಅತ್ಯಾಕರ್ಷಕ ಕೆಲಸವನ್ನು ಮಾಡುವುದನ್ನು ಎದುರು ನೋಡುತ್ತಿದ್ದೇನೆ" ಎಂದು ಮಸ್ಕ್ ಶುಕ್ರವಾರ ಹೇಳಿದ್ದಾರೆ.
"ನಿಮ್ಮ ಶುಭಾಶಯಗಳನ್ನು ಶ್ಲಾಘಿಸಿದ್ದೇನೆ, ನಮ್ಮ ಜನಸಂಖ್ಯಾಶಾಸ್ತ್ರ, ಊಹಿಸಬಹುದಾದ ನೀತಿಗಳು ಮತ್ತು ಸ್ಥಿರವಾದ ಪ್ರಜಾಪ್ರಭುತ್ವದ ರಾಜಕೀಯವು ನಮ್ಮ ಎಲ್ಲಾ ಪಾಲುದಾರರಿಗೆ ವ್ಯಾಪಾರ ವಾತಾವರಣವನ್ನು ಒದಗಿಸುವುದನ್ನು ಮುಂದುವರಿಸುತ್ತದೆ" ಎಂದು ಪ್ರಧಾನಿ ಮೋದಿ ಎಲಾನ್ ಮಸ್ಕ್ ಅವರ ಟ್ವೀಟ್ಗೆ ಉತ್ತರಿಸಿದರು.
ಭಾರತದಲ್ಲಿ ಹೂಡಿಕೆಗೆ ಟೆಸ್ಲಾ ಆಸಕ್ತಿ ವಹಿಸಿದ್ದು, ಚಾಲಕ ಸಹಿತ ಕಾರುಗಳ ಉತ್ಪಾದನೆ ಮಾಡಲು ಎಲಾನ್ ಮಸ್ಕ್ ಆಸಕ್ತಿ ತೋರಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications