ರಾಜ್ಯ ಪಠ್ಯ ಕ್ರಮ ಪುಸ್ತಕ ಪೂರೈಕೆಯಲ್ಲಿ ವಿಳಂಬ:ಕಾಲಮಿತಿಯಲ್ಲಿ ಪೂರೈಕೆ ಮಾಡದಿದ್ದರೆ ಮುದ್ರಣಾಲಯಗಳಿಗೆ ದಂಡ
ಬೆಂಗಳೂರು, ಮೇ. 06: ಸರ್ಕಾರಿ ಪಠ್ಯ ಪುಸ್ತಕಗಳನ್ನು ಕಾಲಮಿತಿಯಲ್ಲಿ ಪೂರೈಕೆ ಮಾಡುವಂತೆ ಮುದ್ರಣಾಲಯ ಮಾಲೀಕರಿಗೆ ಶಿಕ್ಷಣ ಇಲಾಖೆ ಎಚ್ಚರಿಕೆ ರವಾನಿಸಿದೆ. ಕಾಲಮಿತಿಯಲ್ಲಿ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡದಿದ್ದರೆ ದಂಡ ವಿಧಿಸುವ ಸಂದೇಶವನ್ನು ರವಾನಿಸಲಾಗಿದೆ.
ರಾಜ್ಯದಲ್ಲಿ ಮೇ. 16 ರಿಂದ ಶಾಲೆಗಳನ್ನು ಪ್ರಾರಂಭ ಮಾಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಶಾಲೆಗಳ ಆರಂಭಕ್ಕೆ ಹತ್ತು ದಿನ ಬಾಕಿ ಇದೆ. ಶಾಲೆ ಪ್ರಾರಂಭ ಸಮೀಪಿಸಿದ್ದರೂ, ಇನ್ನೂ ಪಠ್ಯ ಪುಸ್ತಕಗಳು ಶಾಲೆಗಳಿಗೆ ತಲುಪಿಲ್ಲ. ಎರಡು ವರ್ಷದಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಗೆ ಒತ್ತು ನೀಡುವ ಕಾರಣದಿಂದ ಶಾಲೆಗಳ ತ್ವರಿತ ಆರಂಭಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗ ಪಠ್ಯ ಪುಸ್ತಕಗಳು ಕೈಗೆ ಸಿಗದೇ ಇದ್ದಲ್ಲಿ ಶಾಲೆ ತೆರೆದರೂ ಪ್ರಯೋಜನವಿಲ್ಲ ಎಂಬಂತಾಗುತ್ತದೆ.
ಕೊರೊನಾ ಮತ್ತು ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ಮುದ್ರಣ ಪೇಪರ್ ಬೆಲೆ ಗಗನಕ್ಕೇರಿದೆ. ಪಠ್ಯ ಪುಸ್ತಕ ಮುದ್ರಣದ ಗುತ್ತಿಗೆ ಮುನ್ನ ಇರುವ ಬೆಲೆಗೆ ಹೋಲಿಸಿದರೆ ದುಪ್ಪಟ್ಟು ಜಾಸ್ತಿಯಾಗಿದೆ. ಅಷ್ಟು ಬೆಲೆ ಕೊಟ್ಟರೂ ಪೇಪರ್ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿಲ್ಲ. ಹೀಗಾಗಿ ಪಠ್ಯ ಪುಸ್ತಕ ಮುದ್ರಣ ಗುತ್ತಿಗೆ ಪಡೆದ ಮುದ್ರಣಕಾರರು ಇದೀಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಷ್ಟವಾದರು ಪರವಾಗಿಲ್ಲ, ಕಾಲಮಿತಿಯಲ್ಲಿ ಪುಸ್ತಕ ಕೊಡಲು ಮುದ್ರಣ ಪೇಪರ್ ಲಭ್ಯವಾಗುತ್ತಿಲ್ಲ ಎಂದು ಮುದ್ರಣಾಲಯ ಮಾಲೀಕರು ಕಷ್ಟ ತೋಡಿಕೊಂಡಿದ್ದಾರೆ.

ದಂಡ ಕಟ್ಟಬೇಕಾದ ಪರಿಸ್ಥಿತಿ
ಪಠ್ಯ ಪುಸ್ತಕಗಳನ್ನು ಕಾಲಮಿತಿಯಲ್ಲಿ ಪೂರೈಕೆ ಮಾಡದೇ ಮುದ್ರಣಾಲಯಗಳು ವಿಳಂಬ ಮಾಡುತ್ತಿವೆ. ಮತ್ತಷ್ಟು ವಿಳಂಬವಾದರೆ ಅದಕ್ಕೆ ಮುದ್ರಣಾಲಯ ಮಾಲೀಕರನ್ನು ಹೊಣೆ ಮಾಡಲಾಗುತ್ತದೆ. ಮುದ್ರಣಾಲಯ ಮಾಲೀಕರ ಮನವಿ ಮೇರೆಗೆ ಹಲವು ಬದಲಾವಣೆ ತಂದಿದ್ದೇವೆ. ಇಷ್ಟಾಗಿಯೂ ಪಠ್ಯ ಪುಸ್ತಕ ಕಾಲಕ್ಕೆ ಸರಿಯಾಗಿ ಪೂರೈಕೆ ಮಾಡಿಲ್ಲ ಅಂದರೆ ದಂಡ ವಿಧಿಸಬೇಕಾಗುತ್ತದೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಪಠ್ಯ ಪುಸ್ತಕ ಮುದ್ರಣದ ಗುತ್ತಿಗೆ ಪಡೆಯುವಾಗಲೇ ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ದಂಡದ ಷರತ್ತು ವಿಧಿಸಲಾಗಿರುತ್ತದೆ. ಹೀಗಾಗಿ ಪಠ್ಯ ಪುಸ್ತಕ ಮುದ್ರಣಾಲಯಗಳು ದಂಡ ಕಟ್ಟಬೇಕಾದ ಪರಿಸ್ಥಿತಿ ಎದುರಿಸುವಂತಾಗಿದೆ.

ಬಿಲ್ ಮೊತ್ತದ ಆಧಾರದ ಮೇಲೆ ದಂಡ
ಮುದ್ರಣಾಲಯಗಳು ದಂಡದ ಭೀತಿ ಎದುರಿಸುತ್ತಿವೆ. ಪಠ್ಯ ಪುಸ್ತಕಗಳನ್ನು ಕಾಲಮಿತಿಯಲ್ಲಿ ಪೂರೈಕೆ ಮಾಡದೇ ವಿಳಂಬ ಮಾಡಿದರೆ, ಅವರಿಗೆ ಬಿಲ್ ಮೊತ್ತದ ಆಧಾರದ ಮೇಲೆ ದಂಡದ ಮೊತ್ತ ವಿಧಿಸಿ ಕಡಿತಗೊಳಿಸಲಾಗುತ್ತದೆ. ಎಷ್ಟು ದಿನ ವಿಳಂಬ ಮಾಡಲಾಗಿದೆ ಎಂಬುದರ ಆಧಾರದ ಮೇಲೆ ದಂಡ ವಿಧಿಸಲಾಗುತ್ತದೆ. ವಿಳಂಬ ಆದಷ್ಟು ದಂಡದ ಮೊತ್ತ ಹೆಚ್ಚಾಗಲಿದೆ ಎಂದು ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

6 ಕೋಟಿ ಪುಸ್ತಕ ಮುದ್ರಣ
ಶೇ. 30 ರಷ್ಟು ಪಠ್ಯ ಪುಸ್ತಕ ಪೂರೈಕೆ ಬಾಕಿ ಇದೆ. ಮೇ. 14 ರೊಳಗೆ ಪಠ್ಯ ಪುಸ್ತಕಗಳನ್ನು ಪೂರೈಕೆಗೆ ಕೊಟ್ಟಿರುವ ಡೆಡ್ ಲೈನ್ ಮೇ. 14 ರೊಳಗೆ ಪಠ್ಯ ಪುಸ್ತಕಗಳನ್ನು ಪೂರೈಕೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ. ರಾಜ್ಯದ ಪಠ್ಯ ಕ್ರಮ ಶಾಲೆಗಳಿಗೆ 530 ಟೈಟಲ್ ಹೊಂದಿರುವ 6 ಕೋಟಿ ಪಠ್ಯ ಪುಸ್ತಕಗಳು 2022-23 ಕ್ಕೆ ಅಗತ್ಯವಿದೆ. ಆದರೆ ಪೇಪರ್ ಸಿಗದ ಕಾರಣ ಮುದ್ರಣಾಲಯಗಳು ತಾತ್ಕಾಲಿಕವಾಗಿ ಪಠ್ಯ ಪುಸ್ತಕ ಮುದ್ರಣ ಸ್ಥಗಿತಗೊಳಿಸಿದ್ದಾರೆ.

ಪೇಪರ್ ಕೊರತೆ ಕಾರಣ
ಪಠ್ಯ ಪುಸ್ತಕ ಮುದ್ರಣದಲ್ಲಿ ವಿಳಂಬಕ್ಕೆ ಪೇಪರ್ ಕೊರತೆ ಕಾರಣ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮದ್ಯ ಪ್ರವೇಶಿಸಿಸಬೇಕು. ತಮಿಳುನಾಡು ಸರ್ಕಾರದ ಜತೆಗೆ ಮಾತುಕತೆ ಮಾಡಿ, ಪಠ್ಯ ಪುಸ್ತಕ ಮುದ್ರಣಕ್ಕೆ ಬೇಕಿರುವ ಪೇಪರ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಈವರೆಗೂ ಶೇ. 68 ರಷ್ಟು ಪಠ್ಯ ಪುಸ್ತಕ ಮುದ್ರಣವಾಗಿದೆ. ಶೇ. 32 ರಷ್ಟು ಬಾಕಿಯಿದ್ದು, ಅತಿ ಶೀಘ್ರದಲ್ಲಿ ಬಾಕಿ ಪಠ್ಯ ಪುಸ್ತಕ ಮುದ್ರಣಕ್ಕೆ ಸರ್ಕಾರ ಪರ್ಯಾಯ ದಾರಿ ಕಂಡುಕೊಳ್ಳಬೇಕಿದೆ.
-
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ











Click it and Unblock the Notifications