Text Book Revision: ಬಿಜೆಪಿಯ ಅವಾಂತರ ಸರಿಪಡಿಸುತ್ತೇವೆ: ಕಾಂಗ್ರೆಸ್ ತಿರುಗೇಟು
ಬೆಂಗಳೂರು, ಸೆಪ್ಟಂಬರ್ 27: ಪಠ್ಯ ಪರಿಷ್ಕರಣೆ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಾಡಿನ ಮಹನೀಯರನ್ನು ಅವಮಾನಿಸಿದ್ದು ಹಲವು ವಿಚಾರಗಳನ್ನು ನಾಡಿನ ಜನರು ನೋಡಿದ್ದಾರೆ. ಕೊನೆಗೆ ನೀವು ಮಣಿದಿದ್ದನ್ನು ನೋಡಿದ್ದಾರೆ. ಬಿಜೆಪಿಯಿಂದ ಪಠ್ಯ ಪರಿಷ್ಕರಣೆ ಮೂಲಕ ನಡೆದ ಅವಾಂತರಗಳನ್ನು ಸರಿಪಡಿಸುವುದು ನಿಶ್ಚಿತ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಕುರಿತು ರಾಜ್ಯ ಬಿಜೆಪಿ ಮಾಡಿದ್ದ ಟ್ವೀಟ್ಗೆ ತಿರುಗೇಟು ನೀಡಿ ಬುಧವಾರ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಸಮರ ನಡೆಸಿದೆ. ಈ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎದ್ದಿದ್ದ ಪಠ್ಯ ಪರಿಷ್ಕರಣೆ ವಿಚಾರ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ಮತ್ತೆ ಮುನ್ನೆಲೆಗೆ ಬಂದಿದೆ.

ಹಿಂದಿದ್ದ ಬಿಜೆಪಿ ಸರ್ಕಾರವ, ಪಠ್ಯ ಪರಿಷ್ಕರಣೆ ಹೆಸರಲ್ಲಿ ನಾಡಿನ ಮಹನೀಯರನ್ನು ಅವಮಾನಿಸಿದ್ದನ್ನು ಜನತೆ ಕಂಡಿದ್ದಾರೆ. ಪಠ್ಯ ಪರಿಷ್ಕರಣೆ ಹೆಸರಲ್ಲಿ ನಾಡಿನ ಮಕ್ಕಳಿಗೆ ಪಠ್ಯ ಪುಸ್ತಕ ವಿತರಿಸದೆ ಕಳ್ಳಾಟ ಆಡಿದ್ದನ್ನೂ ಜನ ನೆನಪಿಟ್ಟುಕೊಂಡಿದ್ದಾರೆ.
ಪಠ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ನ ಅಜೆಂಡಾಗಳನ್ನು ತುರುಕಿ ಮಕ್ಕಳ ಮನಸ್ಸನ್ನು ಕೆಡಿಸುವ ಷಡ್ಯಂತ್ರ ರೂಪಿಸಿದ್ದನ್ನೂ ಜನರು ನೋಡಿದ್ದಾರೆ ಆರೋಪಿಸಲಾಗಿದೆ.
ಅಲ್ಲದೇ ಇದೆಲ್ಲರ ವಿರುದ್ಧ ವಿರೋಧಗಳು ಕೇಳಿ ಬಂದವು. ಅದಾದ ಬಳಿಕ ಜನರ ಆಕ್ರೋಶಕ್ಕಾಗಿ ತಾವು ಬಿಜೆಪಿಯವರು ಮಣಿದಿದ್ದನ್ನೂ ನೋಡಿದ್ದೇವೆ. ಹೋರಾಟ ಹಾರಾಟ ಏನೇ ಇದ್ದರೂ ಬಿಜೆಪಿ ಅವಧಿಯಲ್ಲಿ ಸೃಷ್ಟಿಯಾದ ಪಠ್ಯದ ಅವಂತರಗಳನ್ನು ಸರಿಪಡಿಸುವುದು ನಿಶ್ಚಿತ ಎಂದು ಸ್ಪಷ್ಟಪಡಿಸುವ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಹಿಂದೆ ಬಿಜೆಪಿ ಸರ್ಕಾರವು ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ನೇಮಕ ಮಾಡಿ, ಪರಿಷ್ಕರಣೆ ಮಾಡಿತ್ತು. ಇದಕ್ಕೆ ಕಾಂಗ್ರೆಸ್ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೇ ಚುನಾವಣೆಗೂ ಮುನ್ನ ನಾವು ಅಧಿಕಾರಕ್ಕೆ ಬಂದ ಪರಿಷ್ಕರಣೆ ಮಾಡುವುದಾಗಿ ಹೇಳಿತ್ತು.
ಇದೀಗ ಅಧಿಕಾರದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು 37 ಮಂದಿ ಸದಸ್ಯರ ತಂಡವನ್ನು ರಚಿಸಿದ್ದು, ವರದಿ ಸಲ್ಲಿಕೆಗೆ ಮೂರು ತಿಂಗಳ ಕಾಲಾವಕಾಶ ನೀಡಿದೆ. ಪರಿಷ್ಕರಣೆ ಆದರೆ ಮುಂದಿನ ವರ್ಷದಿಂದ ಹೊಸ ಪರಿಷ್ಕೃತ ಪಠ್ಯ ಅನುಷ್ಠಾನಕ್ಕೆ ಬರಲಿದೆ.
ಕಾಂಗ್ರೆಸ್ ಪಠ್ಯ ಪರಿಷ್ಕರಣೆಗೆ ಬಿಜೆಪಿ ಹೇಳಿದ್ದೇನು
ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಶಾಲಾ ಮಕ್ಕಳ ಶಿಕ್ಷಣ ಮತ್ತು ಭವಿಷ್ಯದ ಜತೆ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಟ್ವೀಟ್ ಮಾಡಿತ್ತು.
ಪಠ್ಯಪುಸ್ತಕದಲ್ಲಿ ಇರುವ ರಾಷ್ಟ್ರೀಯತೆಯ ವಿಚಾರಗಳನ್ನು ತೆಗೆದು ಹಾಕಿ ಕಮ್ಯುನಿಸ್ಟ್ ಮತ್ತು ದೇಶವಿರೋಧಿ ಎಡಬಿಡಂಗಿ ಸಿದ್ಧಾಂತವನ್ನು ಹೇರಿ ಮಕ್ಕಳ ಬ್ರೈನ್ ವಾಶ್ ಮಾಡುವುದಕ್ಕೆ ಕಾಂಗ್ರೆಸ್ ಸಂಚು ರೂಪಿಸಿದೆ. ಮುಖ್ಯಮಂತ್ರಿ ಅವರ ಸರ್ಕಾರದ ಎಲ್ಲ ಆಟಗಳು ನಾಡ ಜನರ ಮುಂದೆ ಬಯಲಾಗಲಿದೆ. ಮುಗ್ಧ ಮಕ್ಕಳ ವಿದ್ಯಾಭ್ಯಾಸದ ಕಮ್ಯುನಿಸ್ಟೀಕರಣದ ವಿರುದ್ಧ ನಾವು ಧ್ವನಿ ಎತ್ತಲಿದ್ದೇವೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.
-
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಮರ್ಯಾದೆ ಹತ್ಯೆಗೆ ಬೀಳಲಿದೆ ಬ್ರೇಕ್: ವಿಧಾನಸಭೆಯಲ್ಲಿ ಐತಿಹಾಸಿಕ 'ಇವ ನಮ್ಮವ' ಮಸೂದೆ ಮಂಡಿಸಿದ ಸರ್ಕಾರ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications