ಪರಿಷ್ಕೃತ ಪಠ್ಯ ಪುಸ್ತಕ ವಾಪಸಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಬೆಂಗಳೂರು, ಜೂ. 09: ನಾಡಿನ ಮಹಾನ್ ಚೇತನಗಳಿಗೆ ಅಪಮಾನ ಮಾಡಿ ರೋಹಿತ್ ಚಕ್ರತೀರ್ಥ ಪರಿಷ್ಕರಿಸಿರುವ ಪಠ್ಯ ಪುಸ್ತಕಗಳನ್ನು ವಾಪಸು ಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷ ಎರಡೂ ಜಂಟಿಯಾಗಿ ರೋಹಿತ್ ಚಕ್ರತೀರ್ಥ ಪರಿಷ್ಕರಣೆ ಮಾಡಿರುವ ಪಠ್ಯಕ್ರಮವನ್ನು ವಿರೋಧಿಸಿ ಸಾಂಕೇತಿಕವಾಗಿ ಇಂದು ಮುಷ್ಕರ ನಡೆಸುತ್ತಿದ್ದೇವೆ.
ಸರ್ಕಾರ ರೋಹಿತ್ ಚಕ್ರತೀರ್ಥ ಸಮಿತಿಯನ್ನು ವಿಸರ್ಜನೆ ಮಾಡಿದೆ. ಸಾರ್ವಜನಿಕರು, ಸಾಹಿತಿಗಳು, ಮಠಾಧೀಶರು, ಶಿಕ್ಷಣ ತಜ್ಞರು, ರಾಜಕಾರಣಿಗಳಿಂದ ತೀವ್ರವಾದ ವಿರೋಧ ವ್ಯಕ್ತವಾದದ್ದು ಇದಕ್ಕೆ ಕಾರಣ ಎಂದರು. ಸಮಿತಿ ವಿಸರ್ಜನೆ ಮಾಡಿದ ಮೇಲೆ ಆ ಸಮಿತಿ ಶಿಫಾರಸು ಮಾಡಿದ ಪಠ್ಯವನ್ನು ಇಟ್ಟುಕೊಂಡಿದೆ. ಸಮಿತಿ ವಜಾ ಆಗಿರುವುದರಿಂದ ಆ ಸಮಿತಿ ಪರಿಷ್ಕರಣೆ ಮಾಡಿದ ಪಠ್ಯವನ್ನು ಮಕ್ಕಳಿಗೆ ಬೋಧನೆ ಮಾಡಬಾರದು. ಪರಿಷ್ಕರಣೆಗೊಂಡ ಪಠ್ಯದಲ್ಲಿ ಇತಿಹಾಸ ತಿರುಚುವ ಕೆಲಸ ಆಗಿದೆ ಎಂದು ದೂರಿದರು.

ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರು, ಕುವೆಂಪು, ಭಗತ್ ಸಿಂಗ್, ಇನ್ನೂ ಅನೇಕ ಸಂತರು, ದಾರ್ಶನಿಕರ ಚರಿತ್ರೆಗಳನ್ನು ತಿರುಚಲಾಗಿದೆ. 9ನೇ ತರಗತಿ ಪಠ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಕರೆಯಲಾಗಿತ್ತು, ಈಗ ಅದನ್ನು ತೆಗೆದು ಹಾಕಲಾಗಿದೆ. ಬಸವಣ್ಣನವರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮವನ್ನು ಸ್ಥಾಪನೆ ಮಾಡಿದ್ದಾರೆ. ಇದನ್ನು ತೆಗೆದುಹಾಕಲಾಗಿದೆ. ಹೀಗೆ ದೇಶಭಕ್ತರು, ದಾರ್ಶನಿಕರ ವಿಚಾರಗಳನ್ನು ತಿರುಚಿ ಕೇಸರಿಕರಣಗೊಳಿಸಲಾಗಿದೆ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಶಿಕ್ಷಣ ಸಚಿವ ನಾಗೇಶ್ ಅವರು ಮೊದಲು ಪರಿಷ್ಕರಣೆಗೊಂಡ ಪಠ್ಯವನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಹೇಳಿದ್ದರು. ಗಣ್ಯ ವ್ಯಕ್ತಿಗಳಿಂದ ಇದಕ್ಕೆ ಪ್ರತಿರೋಧ ವ್ಯಕ್ತವಾದ ಮೇಲೆ ಕೆಲವು ವಿಚಾರಗಳನ್ನು ಪುನರ್ ಪರಿಶೀಲನೆ ಮಾಡುತ್ತೇವೆ, ಇನ್ನೊಂದು ತಿಂಗಳಲ್ಲಿ ಪಠ್ಯಪುಸ್ತಕ ಮುದ್ರಣ ಮಾಡಿ ಮಕ್ಕಳಿಗೆ ಹಂಚುತ್ತೇವೆ ಎಂದಿದ್ದಾರೆ. ಇದರರ್ಥ ತಾವು ಚರಿತ್ರೆ ತಿರುಚಿರುವುದು ಸತ್ಯ, ಆರ್.ಎಸ್.ಎಸ್ ನಿರ್ದೇಶನದಂತೆ ಪಠ್ಯ ರಚನೆ ಮಾಡಿದ್ದಾರೆ ಎಂದು ಒಪ್ಪಿಕೊಂಡಂತೆ ಎಂದು ಹೇಳಿದರು.
ನಾವು ಒಂದು ರಾಷ್ಟ್ರೀಯ ಪಕ್ಷವಾಗಿ ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ, ನೈಜ ಇತಿಹಾಸವನ್ನು ತಿಳಿಸುವ ಕೆಲಸ ಮಾಡಬೇಕು, ಕೇಸರಿಕರಣಗೊಂಡಿರುವ ಪಠ್ಯವನ್ನು ಮಕ್ಕಳಿಗೆ ತಿಳಿಸಬಾರದು ಎಂದು ಒತ್ತಾಯ ಮಾಡುತ್ತೇವೆ. ಆರ್. ಎಸ್. ಎಸ್ ನಲ್ಲಿ ಮಾಡುವ ಭಾಷಣವನ್ನು ಮಕ್ಕಳಿಗೆ ತಿಳಿಸಿ, ಅವರ ಮನಸನ್ನು ಹಾಳು ಮಾಡುವ ಕೆಲಸ ಮಾಡಬಾರದು ಎಂಬುದು ನಮ್ಮ ನಿಲುವು ಎಂದರು.

Recommended Video
ಸರ್ಕಾರ ಪರಿಷ್ಕೃತ ಪಠ್ಯವನ್ನು ವಾಪಾಸು ಪಡಿಸಬೇಕು ಹಾಗೂ ಬರಗೂರು ರಾಮಚಂದ್ರಪ್ಪನವರು ಪರಿಷ್ಕರಣೆ ಮಾಡಿದ್ದ ಪಠ್ಯವನ್ನೇ ಮುಂದುವರೆಸಬೇಕು ಎಂಬುದು ನಮ್ಮ ಒತ್ತಾಯ. ಇದನ್ನು ಸರ್ಕಾರ ಈಡೇರಿಸದೆ ಹೋದರೆ ಮುಂದಿನ ಹೋರಾಟದ ರೂಪುರೇಷಗಳನ್ನು ಚರ್ಚಿಸಿ, ತೀರ್ಮಾನ ಮಾಡಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು












Click it and Unblock the Notifications