ಪಠ್ಯಪುಸ್ತಕ ವಿವಾದ: ಬೊಮ್ಮಾಯಿ ಮಧ್ಯಪ್ರವೇಶಕ್ಕೆ ಕರವೇ ಆಗ್ರಹ
ಬೆಂಗಳೂರು, ಮೇ24: ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರು ಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ "ಎದೆಗೆ ಬಿದ್ದ ಅಕ್ಷರ' ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ನಾರಾಯಣಗೌಡ ಒತ್ತಾಯಿಸಿದ್ದಾರೆ.
ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ
ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ.

ಪರಿಶೀಲನೆಗಾಗಿ ಸಮಿತಿ ನೇಮಕ
ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ.

ಕುವೆಂಪು ಅವರನ್ನು ನಿಂದಿಸಿ ಲೇಖನ?
ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು.

ಕನ್ನಡದ್ರೋಹದ ಕೆಲಸ
ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ.

ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು
ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು.

ಸಿಎಂ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕು ಎಂದು ಮನವಿ ಮಾಡುತ್ತೇನೆ.
ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ. ಅವರಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷರು ಸರ್ಕಾರಕ್ಕೆ ಆಗ್ರಹವನ್ನು ಮಾಡಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications