ಅಂಬೇಡ್ಕರ್ಗೆ ಅವಮಾನ: ಮತ್ತೊಂದು ವಿವಾದದಲ್ಲಿ ರೋಹಿತ್ ಚಕ್ರತೀರ್ಥ
ಬೆಂಗಳೂರು, ಜೂನ್1: ಕರ್ನಾಟಕ ಪಠ್ಯಪುಸ್ತಕ ಮರು ಪರಿಷ್ಕರಣೆಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮೇಲೆ ಒಂದೊಂದೇ ವಿವಾದಗಳು ಸುತ್ತಿಕೊಳ್ಳುತ್ತಿವೆ. ಕುವೆಂಪುರವರಿಗೆ ಅವಮಾನ, ನಾಡಗೀತೆಯನ್ನು ತಿರುಚಿದ ವಿವಾದ, ಪಠ್ಯದಲ್ಲಿ ಕೆಲವು ಲೇಖಕರ ಪಠ್ಯವನ್ನು ಕೈಬಿಟ್ಟಿದ್ದು. ಬಸವಣ್ಣರವರಿಗೆ ಅವಮಾನ ಸೇರಿದಂತೆ ಹಲವಾರು ವಿವಾದಗಳು ಸುತ್ತಿಕೊಳ್ಳುತ್ತವೆ. ಈಗ ರೋಹಿತ್ ಚಕ್ರತೀರ್ಥರಿಗೆ ಮತ್ತೊಂದು ವಿವಾದ ಸುತ್ತಿಕೊಂಡಿದೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ಗೆ ಅವಮಾನಿಸಿದ್ದರು ಎಂದು ಟ್ವಿಟ್ಟರ್ ಹರಿದಾಡುತ್ತಿದೆ.
ಪಠ್ಯಪುಸ್ತಕ ವಿವಾದದ ಸ್ವರೂಪವನ್ನು ಪಡೆದುಕೊಂಡಿದೆ. ರೋಹಿತ್ ಚಕ್ರತೀರ್ಥ ವಿವಾದದ ಕೇಂದ್ರ ಬಿಂದುವಾಗಿದ್ದಾರೆ. ತಿರುಚಿದ ನಾಡಗೀತೆಯನ್ನು ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ನಾಡಗೀತೆ ಮತ್ತು ಕುವೆಂಪುರವರಿಗೆ ಅವಮಾನವನ್ನು ಮಾಡಲಾಗಿತ್ತು. ಇದಾದ ಬಳಿಕ ಪುಸ್ತಕ ಪರಿಷ್ಕರಣೆಯಲ್ಲಿಯೂ ಹಲವು ವಿವಾದ ತಲೆ ಎತ್ತಿವೆ. ಇದರ ನಡುವೆ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವವರಿಗೆ ಅವಮಾನವನ್ನು ಮಾಡಿದ್ದಾರೆ ಅನ್ನೋ ಆರೋಪಗಳು ಕೇಳಿ ಬರುತ್ತಿವೆ.
ರೋಹಿತ್ ಚಕ್ರತೀರ್ಥ ಅಂಬೇಡ್ಕರ್ ಬಗ್ಗೆ ಟ್ವೀಟಿಸಿದ್ದೇನು..?
""ಅಂಬೇಡ್ಕರ್ ಜಗತ್ತಿನ ಅತಿದೊಡ್ಡ ಜಲತಂತ್ರಜ್ಞರು, ವಾಯು ತಂತ್ರಜ್ಞರು, ಕಂಪ್ಯೂಟರ್ ತಜ್ಞರು, ಪ್ರಾಧ್ಯಾಪಕರು, ವಕೀಲರು, ರಾಕೇಟ್ ತಂತ್ರಜ್ಞರು ಆಗಿದ್ದರು. ಪ್ರಪಂಚದ ಚಕ್ರ ಮತ್ತು ಬೆಂಕಿಯ ಉಪಯೋಗವನ್ನು ಕಂಡು ಹಿಡಿದವರು ಇವರೇ, ಜೈಭೀಮ್'' ಎಂದು ವ್ಯಂಗ್ಯವಾಗಿ ಅಂಬೇಡ್ಕರ್ ಬಗ್ಗೆ ರೋಹಿತ್ ಚಕ್ರತೀರ್ಥ ಮಾಡಿದ್ದ ಟ್ವೀಟ್ ಸ್ರೀನ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಂಬೇಡ್ಕರ್ಗೆ ಅವಮಾನ ಮಾಡಿದ್ದಾರೆ ಎಂಬ ವಿಚಾರ ವ್ಯಾಪಕ ಆಕ್ರೋಕ್ಕೂ ಕಾರಣವಾಗುತ್ತಿದೆ.

ರೋಹಿತ್ ಚಕ್ರತೀರ್ಥರವವರು ಅಂಬೇಡ್ಕರ್ ಬಗ್ಗೆ ಹಾಕಲಾಗಿದ್ದ ಟ್ವೀಟ್ ಅನ್ನು ಡಿಲಿಟ್ ಮಾಡಿದ್ದಾರೆ. ಆದರೆ ರೋಹಿತ್ ಚಕ್ರತೀರ್ಥ ಮಾಡಿದ್ದರು ಎನ್ನವ ಟ್ವೀಟ್ ಮಾತ್ರ ಎಲ್ಲೆಡೆ ವೈರಲ್ ಆಗುತ್ತಿದ್ದ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ರವರಿಗೆ ಅವಮಾನ ಮಾಡಲಾಗಿದೆ ಎಂದು ಜನರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ರೋಹಿತ್ ಚಕ್ರತೀರ್ಥ ಮಾನಸಿಕ ರೋಗಿ..!
""ರೋಹಿತ್ ಚಕ್ರತೀರ್ಥ ಮಾನಸಿಕ ರೋಗಿಯಾಗಿದ್ದಾನೆ. ಭಾರತಕ್ಕೆ ಸಂವಿಧಾನವನ್ನು ಕೊಟ್ಟಂತಹ ಅಂಬೇಡ್ಕರ್ ಅವರನ್ನು ಅವಮಾನ ಮಾಡಲಾಗಿದೆ. ಪಠ್ಯಪುಸ್ತಕ ಸಮಿತಿಯಲ್ಲಿ ಇಂಥಹ ಅಧ್ಯಕ್ಷನಿದ್ದಾಗ ಮಕ್ಕಳಿಗೆ ಯಾವ ರೀತಿಯ ಸಂದೇಶ ಸಿಗಲಿದೆ. ನಾಡಗೀತೆಗೂ ಅವಮಾನವನ್ನು ಮಾಡಿರುವ ರೋಹಿತ್ ಚರ್ಕತೀರ್ಥ ವಿರುದ್ದ ಯಾವ ರೀತಿಯ ಹೋರಾಟವನ್ನು ಮಾಡಬೇಕು,'' ಎಂದು ದಲಿತ ಸಂರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಚನ್ನಕೇಶವ ತಿಳಿಸಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications