Priyank Kharge: ನನ್ನ ನಿರ್ಧಾರ ಒಪ್ಪಿ ಗೌರವಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದ: ಸಚಿವ ಪ್ರಿಯಾಂಕ್ ಖರ್ಗೆ
Priyank Kharge: ಪ್ರತಿ ವರ್ಷದಂತೆ ಈ ವರ್ಷವೂ ಹುಟ್ಟುಹಬ್ಬವನ್ನು ಆಚರಿಸದಿರುವ ನನ್ನ ನಿರ್ಧಾರವನ್ನು ಒಪ್ಪಿ ಗೌರವಿಸಿದ್ದಕ್ಕೆ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ನಮ್ಮನ್ನು ಪ್ರೀತಿಸುವವವರು ತೋರುವ ವಾತ್ಸಲ್ಯ, ಅಭಿಮಾನ ಹಾಗೂ ಕಾಳಜಿ ನಾನೆಂದಿಗೂ ಚಿರಋಣಿ. ನಿಮ್ಮೆಲ್ಲರ ಈ ಅದಮ್ಯ ಪ್ರೀತಿಯೇ ನನ್ನ ಕೆಲಸಗಳಿಗೆ ಪ್ರೇರಣೆ ಮತ್ತು ಸ್ಫೂರ್ತಿ. ನನ್ನ ಕೆಲಸದಿಂದ ಯಾರಿಗಾದರೂ ಸಹಾಯವಾದರೆ, ಅದು ನೀವು ನನ್ನ ಮೇಲಿಟ್ಟಿರುವ ನಂಬಿಕೆಯಿಂದ ಮಾತ್ರ ಸಾಧ್ಯವಾದದ್ದು. ರಾಜ್ಯದ್ಯಂತ ಹಲವಾರು ಜನ ಕಾರ್ಯಕರ್ತರು, ಅಭಿಮಾನಿಗಳು ಅಸಂಖ್ಯಾತ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಡವರಿಗೆ ಆಹಾರ ಸಾಮಾಗ್ರಿಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಂದುವರಿದು ಆರೋಗ್ಯ ಶಿಬಿರಗಳನ್ನು ಆಯೋಜಿಸಿರುವುದು, ಆಸ್ಪತ್ರೆಗಳಲ್ಲಿ ಹಣ್ಣುಗಳನ್ನು ವಿತರಿಸಿರುವುದು, ಅನ್ನದಾಸೋಹ ನಡೆಸಿರುವುದು, ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕಗಳ ವಿತರಣೆ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪುಸ್ತಕಗಳನ್ನು ನೀಡಿರುವುದು, ಮಕ್ಕಳಲ್ಲಿ ಕ್ರಿಯಾತ್ಮಕ ಬೆಳವಣಿಗೆಗೆ ಪೂರಕವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ.ಮೈಸೂರು, ಮಂಡ್ಯ ಭಾಗದಲ್ಲಿ ಸಂವಿಧಾನ ಓದುವ ಕಾರ್ಯಕ್ರಮ ಕಲಬುರಗಿಯಲ್ಲಿ ಸಾವಿರಾರು ಪೌರಕಾರ್ಮಿಕರಿಗೆ ಸೀರೆ, ಪ್ಯಾಂಟ್ ಹಾಗೂ ಶರ್ಟ್ಗಳನ್ನು ವಿತರಣೆ ಮಾಡಲಾಗಿದೆ.
ಅಲ್ಲದೇ ನೂರಾರು ವಿಶೇಷ ಚೇತನರಿಗೆ ಬ್ಲಾಂಕೆಟ್ಗಳನ್ನು ವಿತರಣೆ ಮಾಡಿದ್ದಾರೆ. ನೂರಾರು ಪತ್ರಿಕಾ ವಿತರಕರಿಗೆ ಸ್ವೆಟರ್ ಹಂಚಿಕೆ, ಕಣ್ಮಣಿ ಎಂಬ ಕಾರ್ಯಕ್ರಮ ಆಯೋಜಿಸಿ ದೃಷ್ಟಿದೋಷ ಇರುವವರಿಗೆ ಉಚಿತ ಶಸ್ತ್ರಚಿಕಿತ್ಸೆ ಸೇರಿದಂತೆ ನಾಡಿನಾದ್ಯಂತ ಹಲವು ಜಿಲ್ಲೆಗಳಲ್ಲಿ ವಿವಿಧ ರೀತಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡು, ಪ್ರೀತಿ ತೋರಿಸಿ ನನ್ನ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದ್ದೀರಿ. ನಿಮ್ಮೆಲ್ಲರ ಈ ಸ್ವಯಂ ಪ್ರೇರಣೆಯ ಕಾರ್ಯಕ್ಕೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ.
ಅಸಂಖ್ಯಾತ ಜನ ಕರೆ ಮಾಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಲು ಯತ್ನಿಸಿದ್ದೀರಿ ಹಾಗೂ ಮೆಸೇಜ್ ಕಳಿಸಿ ಶುಭಾಶಯ ಕೋರಿದ್ದೀರಿ, ಆದರೆ ಎಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಸಲ್ಲಿಸಲು ಸಾಧ್ಯವಾಗದಿರುವುದಕ್ಕೆ ಈ ಮೂಲಕ ಕ್ಷಮೆ ಕೋರುತ್ತೇನೆ.
ನಿಮ್ಮೆಲ್ಲರ ಈ ಅಚಲ ನಂಬಿಕೆಗೆ ಚ್ಯುತಿ ಬಾರದಂತೆ ಪ್ರತಿ ದಿನ, ಪ್ರತಿ ಕ್ಷಣವೂ ಆ ನಂಬಿಕೆಯನ್ನು ಉಳಿಸಿಕೊಂಡು ಹೋಗಲು ನನ್ನ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ. ನಿಮ್ಮೆಲ್ಲರ ಶುಭ ಹಾರೈಕೆಗಳಿಗೆ ನನ್ನ ತುಂಬುಹೃದಯದ ಕೃತಜ್ಞತೆಗಳು. ನಿಮ್ಮ ಈ ಪ್ರೀತಿಗೆ ನಮ್ಮ ಇಡೀ ಕುಟುಂಬ ಸದಾ ಆಭಾರಿ ಹಾಗೂ ಚಿರಋಣಿಯಾಗಿರಲಿದ್ದೇವೆ ಎಂದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications