Breaking; ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ
ಬೆಂಗಳೂರು, ಜುಲೈ 11; ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಷ್ಟ್ರಪತಿಗಳು ಕಳೆದ ವಾರ ಥಾವರ್ ಚಂದ್ ಗೆಹ್ಲೋಟ್ರನ್ನು ರಾಜ್ಯಪಾಲರಾಗಿ ನೇಮಕ ಮಾಡಿದ್ದರು.
ಭಾನುವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಥಾವರ್ ಚಂದ್ ಗೆಹ್ಲೋಟ್ಗೆ ಆಡಳಿತ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.
Recommended Video

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ಬಿಜೆಪಿ ಹಿರಿಯ ನಾಯಕ ಥಾವರ್ ಚಂದ್ ಗೆಹ್ಲೋಟ್ರನ್ನು ಕರ್ನಾಟಕದ ರಾಜ್ಯಪಾಲರಾಗಿ ಜುಲೈ 6ರಂದು ನೇಮಕ ಮಾಡಲಾಗಿತ್ತು. 2014ರ ಸೆಪ್ಟೆಂಬರ್ನಿಂದ ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿದ್ದರು. ವಜುಭಾಯಿ ವಾಲಾರ 5 ವರ್ಷದ ಅವಧಿ ಪೂರ್ಣಗೊಂಡಿದ್ದರೂ ನೂತನ ರಾಜ್ಯಪಾಲರ ನೇಮಕವಾಗಿರಲಿಲ್ಲ.
Bengaluru | Thawarchand Gehlot takes oath as governor of Karnataka
— ANI (@ANI) July 11, 2021
Chief Justice of the Karnataka High Court, Justice Abhay Srinivas Oka, administers the oath of office and secrecy to Thawarchand Gehlot pic.twitter.com/jidS5LwT1s
ಮಧ್ಯಪ್ರದೇಶ ಮೂಲದ ಥಾವರ್ ಚಂದ್ ಗೆಹ್ಲೋಟ್ ರಾಜ್ಯಸಭಾ ಸದಸ್ಯರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.
ರಾಜ್ಯಪಾಲರಾಗಿ ಆಯ್ಕೆಯಾದ ಬಳಿಕ ರಾಜ್ಯಸಭಾ ಸದಸ್ಯತ್ವ ಮತ್ತು ಕೇಂದ್ರ ಸಚಿವ ಸ್ಥಾನಕ್ಕೆ ಥಾವರ್ ಚಂದ್ ಗೆಹ್ಲೋಟ್ ರಾಜೀನಾಮೆ ನೀಡಿದ್ದರು. ಭಾನುವಾರ ಕರ್ನಾಟಕದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.












Click it and Unblock the Notifications