ಗಣೇಶ ಕೂರಿಸಲು ಡಿಕೆಶಿ ಬಳಿಯೇ ಹಣ ಕೇಳಿದ ಚಿಣ್ಣರ ಗ್ಯಾಂಗ್; ಆಮೇಲೆ ಏನಾಯ್ತು ಗೊತ್ತಾ?
ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಎಲ್ಲೆಡೆ ಹಬ್ಬಕ್ಕೆ ತಯಾರಿ ಭರ್ಜರಿಯಾಗಿ ಸಾಗಿದೆ. ಗಣೇಶನನ್ನು ಕೂರಿಸಲು ಈಗಾಗಲೇ ಏರಿಯಾಗಳಲ್ಲಿ ಚಪ್ಪರ ಹಾಕಲಾಗುತ್ತಿದ್ದು, ಇದಕ್ಕಾಗಿ ಹಣ ಸಂಗ್ರಹವೂ ಜೋರಾಗಿ ಸಾಗಿದೆ. ಇದೀಗ ಗಣೇಶ ಕಲೆಕ್ಷನ್ ವಿಚಾರವು ಡಿ.ಕೆ.ಶಿವಕುಮಾರ್ ಅವರ ಅಂಗಳದರೆಗೂ ತಲುಪಿರುವುದು ಸದ್ಯ ಗಮನ ಸೆಳೆದಿದೆ.
ರಸ್ತೆಗಳಲ್ಲಿ ಗಣೇಶನನ್ನ ಕೂರಿಸುವ ವಿಚಾರವಾಗಿ ಚಂದಾ ವಸೂಲಿ ಮಾಡುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಹಣ ಸಂಗ್ರಹದ ವಿಚಾರವಾಗಿ ಯಾರನ್ನೂ ಬಲವಂತ ಮಾಡಬಾರದು ಎಂದು ನಿನ್ನೆಯಷ್ಟೇ ಪೊಲೀಸರು ಹೇಳಿದ್ದಾರೆ. ಆದರೆ, ಇಂದು ಮಕ್ಕಳ ಗ್ಯಾಂಗ್ವೊಂದು ಸೀದಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಳಿಯೇ ಗಣೇಶ ಕೂರಿಸಲು ದುಡ್ಡು ಕೇಳಿರುವ ಪ್ರಸಂಗ ನಡೆದಿದೆ.

ಇಂದು ಕನಕಪುರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಡಿ.ಕೆ.ಶಿವಕುಮಾರ್ ನಡೆಸಿದರು. ಸಾರ್ವಜನಿಕರ ಕುಂದು ಕೊರತೆ ಆಲಿಸುತ್ತಿದ್ದಾಗ ಮಕ್ಕಳ ಗುಂಪೊಂದು ಸಾಲಿನಲ್ಲಿ ನಿಂತಿತ್ತು. ಏನೋ ಸಮಸ್ಯೆ ಇರಬಹುದು ಎಂದು ಹತ್ತಿರಕ್ಕೆ ಕರೆದು ಕೇಳಿದಾಗ, ಸಾರ್ ನಮ್ ಏರಿಯಾದಲ್ಲಿ ಗಣೇಶ ಕೂರುಸ್ತಿದೀವಿ..ಒಂದು 50 ರೂಪಾಯಿ ಕೊಡಿ ಸಾರ್...ʼʼ ಎಂದು ಡಿ.ಕೆ.ಶಿವಕುಮಾರ್ ಅವರ ಬಳಿ ಚಂದಾ ಕೇಳಿದರು.
ಮಕ್ಕಳೆಲ್ಲ ಡಿ.ಕೆ.ಸಾರ್ ನಮಗೆ ದುಡ್ಡು ಕೊಡ್ತಾರೆ ಅನ್ನೋ ಖುಷಿಯಲ್ಲೇ ಇದ್ದರು. ಆದರೆ, ಮಕ್ಕಳಿಗೆ ಮಾತಿಗೆ ನಕ್ಕ ಡಿ.ಕೆ.ಶಿವಕುಮಾರ್, ಆಯ್ತು..ಎಂಪಿ ಬರ್ತಾರೆ, ಅವರೇ ದುಡ್ ಕೊಡ್ತಾರೆ ನಡೀರಿ, ನಡೀರಿ..ʼ ಎಂದು ಕಳಿಸಿಬಿಟ್ಟರು. ಇದರಿಂದ ಮಕ್ಕಳೆಲ್ಲ ಬೇಸರದಿಂದ ಅಲ್ಲಿಂದ ಹೊರಟು ಹೋಗಿರುವ ಹಾಸ್ಯಮಯ ಪ್ರಸಂಗ ನಡೆಯಿತು. ಇನ್ನು ಮಕ್ಕಳು ನೇರವಾಗಿ ಡಿಕೆಶಿ ಬಳಿ ಕೇಳಿದ್ದಕ್ಕೆ ಜನಸ್ಪಂದನದಲ್ಲಿದ್ದ ಜನರೆಲ್ಲ ಒಂದು ಕ್ಷಣ ನಗೆಗಡಲಲ್ಲಿ ತೇಲಾಡಿದರು.

ಹಬ್ಬಕ್ಕೂ ಒಂದೆರಡು ವಾರಗಳ ಮುಂಚೆಯೇ ಗಣಪತಿ ಕೂರಿಸೋ ಹುಡುಗರು ಗುಂಪು ಗುಂಪಾಗಿ ರಸ್ತೆಗಳಲ್ಲಿ ನಿಂತು ಹಣ ಸಂಗ್ರಹ ಮಾಡೋದು ಅಂದಿನಿಂದಲೂ ನಡೆದುಕೊಂಡು ಬಂದಿರೋ ಅನ್ಅಫೀಶಿಯಲ್ ಪದ್ಧತಿ ಎಂದೇ ಹೇಳಬಹುದು. ಆದರೆ, ಈ ಸಲ ಗಣಪತಿ ಹಬ್ಬಕ್ಕೆ ಚಂದಾ ವಸೂಲಿ ಮಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ ಎನ್ನುವುದು ನೆನಪಿರಲಿ. ಹಬ್ಬದ ಹೆಸರಲ್ಲಿ ಏನಾದರೂ ಸಾರ್ವಜನಿಕರ ಹತ್ತಿರ ಜೋರು ಮಾಡೋಕೆ ಹೋದ್ರೆ, ಸೀದಾ ಜೈಲಿಗೂ ಕಳೆಸೋಕೆ ಪೊಲೀಸರು ರೆಡಿಯಾಗಿದ್ದಾರೆ.
ಹೌದು ಈ ಬಗ್ಗೆ ಖುದ್ದು ಬೆಂಗಳೂರು ಪೊಲೀಸ್ ಕಮೀಷನರ್ ಬಿ.ದಯಾನಂದ್ ಅವರೇ ಎಚ್ಚರಿಕೆ ನೀಡಿದ್ದಾರೆ. ಗೌರಿ-ಗಣೇಶ ಉತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಗಣೇಶ ಕೂರಿಸ್ತಿದೀವಿ, ದುಡ್ ಕೊಡ್ಲೇಬೇಕು ಎಂದು ನೀವು ಸಾರ್ವಜನಿಕರಿಗೆ ಬಲವಂತ ಮಾಡುವಂತಿಲ್ಲ.
ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಯ ಹೆಸರಲ್ಲಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ಹಣ ಸಂಗ್ರಹಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಖಡಕ್ ಆದೇಶ ಕೂಡ ನೀಡಿದ್ದಾರೆ. ಹಾಗಾಗಿ ಸಾರ್ವಜನಿಕರು ಕೊಟ್ಟರಷ್ಟೇ ದುಡ್ಡು ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು, ದುಡ್ ಅಷ್ಟೇ ಕೊಡಿ, ಇಷ್ಟೇ ಕೊಡಿ ಅಂತೆಲ್ಲ ಕೇಳುವಂತಿಲ್ಲ ಎಂದು ವಾರ್ನ್ ಮಾಡಲಾಗಿದೆ. ಆದರೆ, ಈ ಸಮಸ್ಯೆ ಖುದ್ದು ಡಿ.ಕೆ.ಶಿವಕುಮಾರ್ ಅವರನ್ನು ಬಿಟ್ಟಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications