Get Updates
Get notified of breaking news, exclusive insights, and must-see stories!

Lok Sabha Election: ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಹುಲ್‌ ಗಾಂಧಿ ಸವಾಲು ಹಾಕಿದ ಬಿ ವೈ ವಿಜಯೇಂದ್ರ

ಬೆಂಗಳೂರು, ಜುಲೈ 30: ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ಹಾಗೂ ಪಾದಯಾತ್ರೆ ಅಥವಾ ಧರಣಿ ಮಾಡುತ್ತಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ನಡವಳಿಕೆ ಗಮನಿಸಿದರೆ ಅಯ್ಯೋ ಪಾಪ ಅನಿಸುತ್ತದೆ. ಚುನಾವಣಾ ಆಯೋಗದ ಬಗ್ಗೆಯೂ ಅನುಮಾನ, ಸುಪ್ರೀಂ ಕೋರ್ಟಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದರು. ನೀವು ಅದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಿ ಎಂದು ಆಗ್ರಹಿಸಿದರು.

The Congress Party Is Playing A New Drama Of Electoral Irregularities Says BY Vijayendra

ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಪ್ರಯತ್ನ ಮಾಡಿತ್ತು. ಆದರೆ, ಗೆಲುವು ಸಾಧ್ಯವಾಗಿಲ್ಲ ಎಂದ ಅವರು, ಆರೋಪದಿಂದ ಅವರು ಏನೂ ಸಾಧನೆ ಮಾಡಲು ಸಾಧ್ಯವಾಗದು ಎಂದು ತಿಳಿಸಿದರು. ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ನಾವು (ಬಿಜೆಪಿ) ಕರ್ನಾಟಕದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುವ ಅವಶ್ಯಕತೆ ಇರಲಿಲ್ಲ ಎಂದು ಅವರು ತಿಳಿಸಿದರು. ಕಾಂಗ್ರೆಸ್ 66 ಶಾಸಕ ಸ್ಥಾನ ಪಡೆದರೆ, ಬಿಜೆಪಿ 136 ಸ್ಥಾನದಿಂದ ಅಧಿಕಾರಕ್ಕೆ ಏರುತ್ತಿತ್ತು ಎಂದು ಹೇಳಿದರು.

3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಗೆಲ್ಲುತ್ತಿತ್ತು. ಹಾಗಿದ್ದರೆ ಮೂರರಲ್ಲೂ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಪ್ರಶ್ನಿಸಿದರು. ಇದು ಮೂರ್ಖತನದ ಪರಮಾವಧಿ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ಮೂರ್ಖರ ಪಕ್ಷವಾಗಿದೆ ಎಂದು ಟೀಕಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಹಾಗಿದ್ದರೆ ರಾಯಚೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಕೇಳಿದರು. ಈ ರೀತಿ ಹುಚ್ಚಾಟ, ರಂಪಾಟದ ಮೂಲಕ ಸಾಂವಿಧಾನಿಕ ಸಂಸ್ಥೆ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸುವುದು ಅಪಾಯಕಾರಿ ಬೆಳವಣಿಗೆ, ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.

4 ಅಥವಾ 5 ರಂದು ಅವರು ಬಂದು ಏನು ಕಡಿದು ಕಟ್ಟೆ ಹಾಕುತ್ತಾರೆಂದು ಬಿಜೆಪಿ ನೋಡುತ್ತದೆ. ನಾವು ಕೂಡ ಕಾರ್ಯತಂತ್ರ ರೂಪಿಸುತ್ತೇವೆ. ಬಿಜೆಪಿ, ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆಗೆ ಮುಂದಾದರೆ ಕಮೀಷನರ್ ಅವರು ಹೈಕೋರ್ಟಿನ ಆದೇಶ ತೋರಿಸುತ್ತಾರೆ. ಸಿದ್ದರಾಮಯ್ಯನವರು ಎಲ್ಲಿಂದ ಬೇಕಿದ್ದರೂ ಪಾದಯಾತ್ರೆ ಮಾಡಬಹುದು, ರಾಹುಲ್ ಗಾಂಧಿಯವರು ಮೆರವಣಿಗೆ ಮಾಡಬಹುದು. ಇದು ಖಂಡಿತ ಸರಿಯಲ್ಲ ಎಂದು ಟೀಕಿಸಿದರು. ನಮಗೊಂದು ಕಾನೂನು, ಅವರಿಗೊಂದು ಕಾನೂನು ಇರಲು ಸಾಧ್ಯವಿಲ್ಲ ಎಂದರು. ಅವರಿಗೆ ಅವಕಾಶ ನೀಡಿದರೆ ನಾವೂ ಹೋರಾಟ ಮಾಡುತ್ತೇವೆ. ಅದನ್ನು ತಡೆಯಬಾರದು ಎಂದು ಹೇಳಿದರು.

ರಾಹುಲ್ ಗಾಂಧಿಯವರು ಹತಾಶರಾಗಿದ್ದಾರೆ. ಅವರಿಗೆ ದಿಕ್ಕು ತೋಚುತ್ತಿಲ್ಲ. ಒಂದೆಡೆ ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಬೀದಿಗೆ ಬಂದಿದ್ದಾರೆ. ಜಾಮೀನಿನಲ್ಲಿ ಅವರಿದ್ದಾರೆ. ದೇಶದ ಯಾವುದೇ ರಾಜ್ಯಕ್ಕೆ ಹೋದರೂ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿ ಬಂದು ಪುಂಗಿ ಊದುವ ಕೆಲಸ ಮಾಡುತ್ತಾರೆ. ಅವರು ಬರಲಿ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+