Lok Sabha Election: ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ರಾಹುಲ್ ಗಾಂಧಿ ಸವಾಲು ಹಾಕಿದ ಬಿ ವೈ ವಿಜಯೇಂದ್ರ
ಬೆಂಗಳೂರು, ಜುಲೈ 30: ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ಹಾಗೂ ಪಾದಯಾತ್ರೆ ಅಥವಾ ಧರಣಿ ಮಾಡುತ್ತಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ನಡವಳಿಕೆ ಗಮನಿಸಿದರೆ ಅಯ್ಯೋ ಪಾಪ ಅನಿಸುತ್ತದೆ. ಚುನಾವಣಾ ಆಯೋಗದ ಬಗ್ಗೆಯೂ ಅನುಮಾನ, ಸುಪ್ರೀಂ ಕೋರ್ಟಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದರು. ನೀವು ಅದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಿ ಎಂದು ಆಗ್ರಹಿಸಿದರು.

ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಪ್ರಯತ್ನ ಮಾಡಿತ್ತು. ಆದರೆ, ಗೆಲುವು ಸಾಧ್ಯವಾಗಿಲ್ಲ ಎಂದ ಅವರು, ಆರೋಪದಿಂದ ಅವರು ಏನೂ ಸಾಧನೆ ಮಾಡಲು ಸಾಧ್ಯವಾಗದು ಎಂದು ತಿಳಿಸಿದರು. ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ನಾವು (ಬಿಜೆಪಿ) ಕರ್ನಾಟಕದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುವ ಅವಶ್ಯಕತೆ ಇರಲಿಲ್ಲ ಎಂದು ಅವರು ತಿಳಿಸಿದರು. ಕಾಂಗ್ರೆಸ್ 66 ಶಾಸಕ ಸ್ಥಾನ ಪಡೆದರೆ, ಬಿಜೆಪಿ 136 ಸ್ಥಾನದಿಂದ ಅಧಿಕಾರಕ್ಕೆ ಏರುತ್ತಿತ್ತು ಎಂದು ಹೇಳಿದರು.
3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಗೆಲ್ಲುತ್ತಿತ್ತು. ಹಾಗಿದ್ದರೆ ಮೂರರಲ್ಲೂ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಪ್ರಶ್ನಿಸಿದರು. ಇದು ಮೂರ್ಖತನದ ಪರಮಾವಧಿ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ಮೂರ್ಖರ ಪಕ್ಷವಾಗಿದೆ ಎಂದು ಟೀಕಿಸಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಹಾಗಿದ್ದರೆ ರಾಯಚೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಕೇಳಿದರು. ಈ ರೀತಿ ಹುಚ್ಚಾಟ, ರಂಪಾಟದ ಮೂಲಕ ಸಾಂವಿಧಾನಿಕ ಸಂಸ್ಥೆ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸುವುದು ಅಪಾಯಕಾರಿ ಬೆಳವಣಿಗೆ, ಇದು ಅಕ್ಷಮ್ಯ ಅಪರಾಧ ಎಂದು ಕಿಡಿಕಾರಿದರು.
4 ಅಥವಾ 5 ರಂದು ಅವರು ಬಂದು ಏನು ಕಡಿದು ಕಟ್ಟೆ ಹಾಕುತ್ತಾರೆಂದು ಬಿಜೆಪಿ ನೋಡುತ್ತದೆ. ನಾವು ಕೂಡ ಕಾರ್ಯತಂತ್ರ ರೂಪಿಸುತ್ತೇವೆ. ಬಿಜೆಪಿ, ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆಗೆ ಮುಂದಾದರೆ ಕಮೀಷನರ್ ಅವರು ಹೈಕೋರ್ಟಿನ ಆದೇಶ ತೋರಿಸುತ್ತಾರೆ. ಸಿದ್ದರಾಮಯ್ಯನವರು ಎಲ್ಲಿಂದ ಬೇಕಿದ್ದರೂ ಪಾದಯಾತ್ರೆ ಮಾಡಬಹುದು, ರಾಹುಲ್ ಗಾಂಧಿಯವರು ಮೆರವಣಿಗೆ ಮಾಡಬಹುದು. ಇದು ಖಂಡಿತ ಸರಿಯಲ್ಲ ಎಂದು ಟೀಕಿಸಿದರು. ನಮಗೊಂದು ಕಾನೂನು, ಅವರಿಗೊಂದು ಕಾನೂನು ಇರಲು ಸಾಧ್ಯವಿಲ್ಲ ಎಂದರು. ಅವರಿಗೆ ಅವಕಾಶ ನೀಡಿದರೆ ನಾವೂ ಹೋರಾಟ ಮಾಡುತ್ತೇವೆ. ಅದನ್ನು ತಡೆಯಬಾರದು ಎಂದು ಹೇಳಿದರು.
ರಾಹುಲ್ ಗಾಂಧಿಯವರು ಹತಾಶರಾಗಿದ್ದಾರೆ. ಅವರಿಗೆ ದಿಕ್ಕು ತೋಚುತ್ತಿಲ್ಲ. ಒಂದೆಡೆ ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಬೀದಿಗೆ ಬಂದಿದ್ದಾರೆ. ಜಾಮೀನಿನಲ್ಲಿ ಅವರಿದ್ದಾರೆ. ದೇಶದ ಯಾವುದೇ ರಾಜ್ಯಕ್ಕೆ ಹೋದರೂ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿ ಬಂದು ಪುಂಗಿ ಊದುವ ಕೆಲಸ ಮಾಡುತ್ತಾರೆ. ಅವರು ಬರಲಿ ಎಂದು ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications