Karnataka BJP: ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ ಯಾವಾಗ ಸರಿ ಹೋಗುತ್ತೆ: ಮಾಜಿ ಸಿಎಂ ಹೇಳಿದ್ದೇನು?
ಬೆಂಗಳೂರು, ನವೆಂಬರ್ 27: ಬಿಜೆಪಿಯಲ್ಲಿ ಭಿನ್ನಮತವಿಲ್ಲ. ಎಲ್ಲರೂ ಬಿಜೆಪಿ ಪರವಿದ್ದಾರೆ. ಕೆಲವು ವಿಚಾರಗಳಲ್ಲಿ ಭಿನ್ನ ಅಭಿಪ್ರಾಯಗಳಿವೆ. ಒಂದು ತಿಂಗಳಲ್ಲಿ ಎಲ್ಲವೂ ಸರಿಯಾಗುವ ವಿಶ್ವಾಸವಿದೆ. ಬಿಜೆಪಿಯ ಒಂದು ತಂಡ ಉತ್ಸಾಹದಿಂದ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮವಾಗಿ ಗನ್ ಮಾರಾಟದ ವಿಚಾರ ಚರ್ಚೆಯಾಗುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಪೊಲಿಸ್ ಸ್ಟೇಷನ್ ಗಳು, ಕಲೆಕ್ಷನ್ ಸೆಂಟರ್ ಆಗಿವೆ. ಭಯೊತ್ಪಾದನೆಗೆ ಬೆಂಬಲಕೊಡುವವರನ್ನು ರಕ್ಷಿಸುತ್ತಾರೆ. ಬಂಗ್ಲಾ ನಿರಾಶ್ರಿತರು ನುಸುಳುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಪರಿಸ್ಥಿತಿ ಕಷ್ಟವಾಗಲಿದೆ ಎಂದು ಹೇಳಿದರು.

ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ನೀಡಿರುವ ಜನಾದೇಶವಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಭ್ರಮನಿರಸನಗೊಂಡಿದ್ದಾರೆ.
ಸಾಮಾನ್ಯವಾಗಿ ಉಪ ಚುನಾವಣೆ ಸರ್ಕಾರದ ಪರವಾಗಿರುತ್ತವೆ. ನಾವು ಅಧಿಕಾರದಲ್ಲಿ ಇದ್ದಾಗ 17 ಉಪ ಚುನಾವಣೆಗಳಲ್ಲಿ 13 ಉಪ ಚುನಾವಣೆ ಗೆದ್ದಿದ್ದೇವೆ. ಕಾಂಗ್ರೆಸ್ ನವರು ಇದು ಸರ್ಕಾರದ ಪರ ಜನರ ತೀರ್ಪು ಅಂತ ತಿಳಿದುಕೊಳ್ಳುವ ಅವಗತ್ಯವಿಲ್ಲ. ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗಿಲ್ಲ ಅಂತ ಭ್ರಮ ನಿರಸನಗೊಂಡಿದ್ದಾರೆ. ಈ ಚುನವಣೆ ಫಲಿತಾಂಶ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಹೇಳಿದರು.
ಇನ್ನು ಗ್ಯಾರೆಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಆಡಳಿತ ಪಕ್ಷದ ಶಾಸಕರೇ ತಮ್ಮ ಪಕ್ಷದ ವೇದಿಕೆಯಲ್ಲಿ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಹಣಕಾಸಿನ ಸಿದ್ದತೆ ಮಾಡಿಕೊಳ್ಳದೇ ಗ್ಯಾರೆಂಟಿ ಯೋಜನೆ ಜಾರಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಲಕ್ಷ ಕೋಟಿಗಿಂತಲೂ ಹೆಚ್ಚು ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದಲ್ಲಿ ಹಣಕಾಸು ನಿರ್ವಹಣೆ ಕಷ್ಟವಾಗಿದೆ.
ಹದಿನೈದನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸುಮಾರು ಎರಡು ಸಾವಿರ ಕೋಟಿಗಿಂತಲೂ ಹೆಚ್ಚು ಹಣ ಗ್ರಾಮ ಪಂಚಾಯತಿಗಳು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಬೇಕಿದೆ. ಅಂಗನವಾಡಿ ಕಾರ್ಯಕರ್ತೆಯರು, ಗುತ್ತಿಗೆ ನೌಕರರಿಗೆ ಸಂಬಳ ಆಗುತ್ತಿಲ್ಲ. ಹಣ ಬಿಡುಗಡೆಯಾಗುತ್ತಿಲ್ಲ ಎನ್ನುವ ಕಾರಣಕ್ಕೆ ಟೆಂಡರ್ ಕರೆದರೂ ಕೆಲಸ ಮಾಡಲು ಕಾಂಟ್ರ್ಯಾಕ್ಟರ್ ಬರುತ್ತಿಲ್ಲ ಎಂದು ಹೇಳಿದರು.
ಸಂವಿಧಾನದಲ್ಲಿ ಸಂಪೂರ್ಣ ನಂಬಿಕೆಯಿಟ್ಟು ಕೆಲಸ ಕಾರ್ಯ ಮಾಡಿದ ಬಿಜೆಪಿ
ಬಿಜೆಪಿ ಸಂವಿಧಾನದಲ್ಲಿ ಸಂಪೂರ್ಣ ನಂಬಿಕೆಯಿಟ್ಟು ಕೆಲಸ ಕಾರ್ಯಗಳನ್ನು ಮಾಡಿದೆ. ಡಾ. ಅಂಬೇಡ್ಕರ್ ಅವರು 370ನೇ ವಿಧಿ ತಾತ್ಕಾಲಿಕವಾಗಿ ಇರಬೇಕು ಎಂದಿದ್ದರು. 370ನೇ ವಿಧಿ ರದ್ದು ಮಾಡಿ ಆ ಕೆಲಸವನ್ನು ಬಿಜೆಪಿ ಮಾಡಿದೆ. ಹಿಂದುಳಿದ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನದ ಆಶಯ ಈಡೇರಿಸಿದ್ದಾರೆ ಎಂದು ವಿವರ ನೀಡಿದರು. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಿದರು ಎಂದು ತಿಳಿಸಿದರು.
ಕಾಂಗ್ರೆಸ್ಸಿಗೆ ಆರಂಭದಿಂದಲೂ ಸಂವಿಧಾನ ಮಾತ್ರವಲ್ಲದೆ, ಶ್ರೇಷ್ಠ ಸಂವಿಧಾನ ಕೊಟ್ಟ ಬಾಬಾ ಸಾಹೇಬರ ಬಗ್ಗೆ ತಿರಸ್ಕಾರ ಇತ್ತು. ಕಾಂಗ್ರೆಸ್ ಆಡಳಿತದಲ್ಲಿ ಸಂವಿಧಾನದ ಮೂಲ ಆಶಯವನ್ನೇ ಬದಲಿಸುವ ಪ್ರಯತ್ನ ನಡೆದಿತ್ತು ಎಂದು ಅವರು ಆರೋಪಿಸಿದರು. ಸಂವಿಧಾನದ ಮೂಲ ಸ್ಥೂಲ ರಚನೆಯನ್ನೇ ಬದಲಿಸಲು ಮುಂದಾದಾಗ ಅದನ್ನು ಕೇರಳದ ಕೇಶವಾನಂದ ಭಾರತೀ ಗುರುಗಳು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠದಲ್ಲಿ ಪ್ರಶ್ನಿಸಿದ್ದರು. ಸುಪ್ರೀಂ ಕೋರ್ಟ್, ಸಂವಿಧಾನದ ಮೂಲ ರಚನೆಯನ್ನು ಬದಲಿಸಬಾರದು ಎಂದು ತಿಳಿಸಿತ್ತು ಎಂದು ಗಮನ ಸೆಳೆದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications