Jagadish Shettar: ಬಿಜೆಪಿ ಆಪರೇಷನ್ ಕಮಲ; ಕೈ ಶಾಸಕರ ಅಸಮಾಧಾನದಿಂದ ಸರ್ಕಾರಕ್ಕೆ ಎಫೆಕ್ಟ್: ಜಗದೀಶ್ ಶೆಟ್ಟರ್ ಹೇಳಿದ್ದೇನು?
ಹುಬ್ಬಳ್ಳಿ, ಜೂನ್ 29: ಕಾಂಗ್ರೆಸ್ನ ಒಳ ಬೇಗುದಿಯಿಂದ, ಶಾಸಕರ ಅಸಮಾಧಾನದಿಂದ ಸರ್ಕಾರಕ್ಕೆ ಎಫೆಕ್ಟ್ ಆಗುತ್ತದೆ. ಬಿಜೆಪಿ ಆಪರೇಷನ್ ಕಮಲ ಮಾಡುವುದು ಬೇಕಾಗಿಲ್ಲ. ಸಿದ್ದರಾಮಯ್ಯ ಅವರ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ಹಿನ್ನೆಲೆಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟವಾಗಿ ಏನು ಹೇಳುತ್ತಿಲ್ಲಒಂದು ಸ್ಪಷ್ಟವಾದ ಸಿಗ್ನಲ್ಲನ್ನ ಕಾಂಗ್ರೆಸ್ ಹೈಕಮಾಂಡ್ ಕೊಡಬೇಕಿತ್ತು ಎಂದು ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಇರಬೇಕು ಎನ್ನುವ ಕ್ಲಿಯರ್ ಸಿಗ್ನಲ್ ಕೊಡಬೇಕಿತ್ತು. ಸಿದ್ದರಾಮಯ್ಯ ಅವರ ಕೈಕಟ್ಟಿ ಹಾಕುವ ಕೆಲಸ ನಡೆಯುತ್ತಿದೆ, ಇದರಿಂದ ರಾಜ್ಯದಲ್ಲಿ ಸರ್ಕಾರ ಅತಂತ್ರ ಆಗುತ್ತೆ ಇಂತಹ ಪರಿಸ್ಥಿತಿಯಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತೆ, ಆಡಳಿತ ವ್ಯವಸ್ಥೆ ಹದಗಡುತ್ತದೆ ಎಂದು ಹೇಳಿದರು.
ಆಂತರಿಕ ಕಲಹದಿಂದ ಸರ್ಕಾರಕ್ಕೆ ತೊಂದರೆ ಆಗುತ್ತೆ ಒಂದು ಡಿಸಿಎಂ ಇದ್ದಿದ್ದು ಮೂರು ಡಿಸಿಎಂ ಆಗಲಿ ಮುಖ್ಯಮಂತ್ರಿ ಬದಲಾವಣೆ ಆಗಲಿ ಅನ್ನೋ ಗೊಂದಲ ನಿರ್ಮಾಣ ಮಾಡಿದ್ದಾರೆ ಎಂದ ಅವರು
ಇದರಿಂದಾಗಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಂದರು. ಒಕ್ಕಲಿಗ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಮಾತನಾಡಿ, ಯಾರ ಮನಸಲ್ಲಿಏನಿದೆ ನ್ನೋದನ್ನ ಬೇರೆಯವರಿಂದ ಹೇಳಿಸುವ ಪ್ರಯತ್ನ ಆಗುತ್ತಿದೆ ಎಂದ ಅವರು, ಏನು ಹೇಳಬೇಕು ಅನ್ನೋದನ್ನ ಹೈಕಮಾಂಡ್ ಮುಂದೆ ಹೇಳಬೇಕು. ನಾನು ಕಾಂಗ್ರೆಸ್ ನಲ್ಲಿ ಇದ್ದರೂ ಕೂಡ ಈ ಬಗ್ಗೆ ಗೊತ್ತಾಗಿರಲಿಲ್ಲ. ಮುಖ್ಯಮಂತ್ರಿ ಹುದ್ದೆಗಾಗಿ ಮೊದಲಿನಿಂದಲೂ ಗುದ್ದಾಟ ಇದ್ದೇ ಇದೆ, ಈಗಲೂ ಅದು ಮುಂದುವರೆದಿದೆ.
ಗ್ಯಾರಂಟಿ ಯೋಜನೆಗಳಿಂದ ಎಲೆಕ್ಷನ್ ನಲ್ಲಿ ಲಾಭ ಆಗುತ್ತೆ ಅಂತ ತಿಳಿದುಕೊಂಡಿದ್ದರು ಲಾಭ ಆಗಿಲ್ಲ ಹೀಗಾಗಿ, ವಾಪಸ್ ತೆಗೆದುಕೊಳ್ಳುವಂತೆ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಗ್ಯಾರಂಟಿ ಅನುಷ್ಠಾನಕ್ಕಾಗಿ ಸರ್ಕಾರದ ಖಜಾನೆ ಖಾಲಿ ಆಗುತ್ತಿದೆ ಎಂದು ಆರೋಪ ಮಾಡಿದ ಅವರು, ವರಮಾನ ಹೆಚ್ಚಿಗೆ ಮಾಡಿಕೊಳ್ಳಲು ಡೀಸೆಲ್, ಪೆಟ್ರೋಲ್, ಹಾಲು, ಬಸ್ ಪ್ರಯಾಣ ದರ ಹೆಚ್ಚಳ ಮಾಡುತ್ತಿದ್ದಾರೆ. ಜನಸಾಮಾನ್ಯರು, ಬಡವರು ಬಹಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ರಾಜ್ಯದ ಜನತೆಗೆ ತೊಂದರೆಯಾಗುತ್ತಿದೆ. ಖಜಾನೆ ಕಾಲಿಯಾಗುತ್ತಿದೆ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ, ಇದನ್ನೆಲ್ಲ ವಿಚಾರ ಮಾಡಿ ಸಿದ್ದರಾಮಯ್ಯನವರು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications