ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಸಿನಿಮಾ ಆಗುತ್ತಿದೆ ಎಸ್.ಎಲ್. ಭೈರಪ್ಪರ ಪರ್ವ ಕಾದಂಬರಿ
ಬೆಂಗಳೂರು, ಅಕ್ಟೋಬರ್ 21: ದಿ ಕಾಶ್ಮೀರ್ ಫೈಲ್ಸ್ ಸಿನೆಮಾ ಖ್ಯಾತಿಯ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಕನ್ನಡದ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಸಿನೆಮಾ ಮಾಡಲು ಹೊರಟಿದ್ದಾರೆ.
ಕನ್ನಡದ ಖ್ಯಾತ ಲೇಖಕ ಎಸ್.ಎಲ್. ಭೈರಪ್ಪ ಅವರ ಪರ್ವ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಶನಿವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಈ ಸಿನಿಮಾದ ಟೈಟಲ್ ಲಾಂಚ್ ಮಾಡಲಾಗಿದೆ.

ದಿ ಕಾಶ್ಮೀರ್ ಫೈಲ್ಸ್, ದಿ ವ್ಯಾಕ್ಸಿನ್ ವಾರ್ ಸಿನಿಮಾಗಳ ಖ್ಯಾತಿಯ ವಿವೇಕ್ ಅಗ್ನಿಹೋತ್ರಿ ಪರ್ವ ಕೃತಿಯನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ವಿವೇಕ್ ಅಗ್ನಿಹೋತ್ರಿ, ಒಂದು ವರ್ಷದ ಹಿಂದೆ ಪ್ರಕಾಶ್ ಬೆಳವಾಡಿ ನನಗೆ ಕರೆ ಮಾಡಿದ್ದರು.
ಭೈರಪ್ಪನವರ ಜೊತೆ ಮಾತನಾಡುವಂತೆ ಹೇಳಿದ್ದರು. ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ನೋಡಿ ಅವರು ಪರ್ವ ಸಿನಿಮಾ ಮಾಡುವಂತೆ ಹೇಳಿದರು. ಮಹಾಭಾರತದಲ್ಲಿ ನಾವು ಕೇಳದೆ ಇರುವಂತಹ ವಿಷಯಗಳನ್ನ ಬರೆದಿದ್ದಾರೆ. ಇದಕ್ಕಾಗಿ ಸಾಕಷ್ಟು ವರ್ಷಗಳ ಕಾಲ ಶ್ರಮಿಸಿದ್ದಾರೆ. ಈ ಸಿನಿಮಾ ಮೂರು ಪಾರ್ಟ್ಗಳಲ್ಲಿ ಬರುತ್ತದೆ ಎಂದು ಹೇಳಿದರು.

ನಟಿ ಪಲ್ಲವಿ ಜೋಷಿ ಮಾತನಾಡಿ, ಪರ್ವ ಕಾದಂಬರಿಯನ್ನು ಸಿನಿಮಾ ಮಾಡುತ್ತಿರುವುದು ಜವಾಬ್ದಾರಿ ಹೆಚ್ಚಿಸಿದೆ. ಈ ವಿಷಯವನ್ನು ನಿರ್ವಹಿಸುವುದು ಅಷ್ಟು ಸುಲಭವಲ್ಲ. ಭೈರಪ್ಪ ಸರ್ ಗುರಿಯನ್ನು ಸಿನಿಮಾ ರೂಪಕ್ಕಿಳಿಸುತ್ತಿರುವುದು ಖುಷಿ ಕೊಟ್ಟಿದೆ. ಪರ್ವ ಸಿನಿಮಾವನ್ನು 3 ಭಾಗದಲ್ಲಿ ಕನ್ನಡ ಹಾಗೂ ಹಿಂದಿ ಎರಡು ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಕಾಶ್ ಇಲ್ಲದೇ ಇದು ಆಗುತ್ತಿರಲಿಲ್ಲ ಎಂದರು.
ಸಾಹಿತಿ ಎಸ್.ಎಲ್. ಭೈರಪ್ಪ ಮಾತನಾಡಿ, ಪರ್ವ ಕಾದಂಬರಿಯನ್ನು ಸಿನಿಮಾ ಮಾಡಲು ಬಂದಿದ್ದಾರೆ. ವಿವೇಕ್ ಅಗ್ನಿಹೋತ್ರಿ ಅವರಿಗೆ ಸಾಕಷ್ಟು ಅನುಭವವಿದೆ. ಇವರು ಮಾಡಿರುವ ಸಿನಿಮಾಗಳು ಸಕ್ಸಸ್ ಆಗಿವೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ. ಇಂಗ್ಲೀಷ್ ನಲ್ಲಿ ಸಿನಿಮಾ ಮಾಡಬೇಕು. ನಿಜವಾದ ಮಹಾಭಾರತ ಏನೋ ಅನ್ನೋದನ್ನು ತೋರಿಸಬಹುದು. ಸಿನಿಮಾ ಮಾಡಲು ನನ್ನ ಒಪ್ಪಿಗೆ ಇದೆ. ಹಾರೈಕೆ ಇದೆ ಎಂದರು.
ಪರ್ವ ಕಾದಂಬರಿಯ ವಿಷಯ ಏನ್ನು ಅನ್ನುವುದು ಓದಿದವರಿಗೆ ಗೊತ್ತೇ ಇದೆ. ಮಹಾಭಾರತವನ್ನ ಆಯಾ ಪಾತ್ರಗಳ ಮೂಲಕ ಮತ್ತೊಮ್ಮೆ ಹೇಳಿರೋದೇ ಈ ಪರ್ವ ಕಾದಂಬರಿಯ ವಿಶೇಷ. ಅಂತಹ ಈ ಒಂದು ಕಾದಂಬರಿಯನ್ನ ಕ್ಲಾಸಿಕ್ ಕೃತಿ ಅಂತಲೇ ಪರಿಗಣಿಸಲಾಗುತ್ತದೆ. ಇದೀಗ ಈ ಪರ್ವ ಕಾದಂಬರಿಗೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications