ಬೆಂಗಳೂರಿನಲ್ಲಿ ಮೊದಲ ಸಂಚಾರಿ ಬಸ್ ನಿಲ್ದಾಣ : ಯಾವ್ಯಾವ ದಿನ ಎಲ್ಲೆಲ್ಲಿ ಇರಲಿದೆ ಈ ಬಸ್ಸ್ಟ್ಯಾಂಡ್..?
ಬೆಂಗಳೂರು, ಅಕ್ಟೋಬರ್ 09: ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಯಥೇಚ್ಛವಾಗಿ ಹೆಚ್ಚಾಗಿದೆ. ಆದರೆ ಅದಕ್ಕೆ ತಕ್ಕಂತೆ ಪ್ರಯಾಣಿಕರಿಗೆ ಬೇಕಾದ ಮೂಲಸೌಕರ್ಯ ಇಲ್ಲ. ಹೀಗಾಗಿ ಇದರ ಕುರಿತಾಗಿ ಸರ್ಕಾರದ ಗಮನ ಸೆಳೆಯುವುದಕ್ಕೆ ಅಸಂಘಟಿತ ವಲಯದ ಮಹಿಳೆಯರು ಮುಂದಾಗಿದ್ದು, ಸಂಚಾರಿ ಬಸ್ ನಿಲ್ದಾಣ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ನಗರದಲ್ಲಿ ಮೊದಲ ಮೊಬೈಲ್ ಬಸ್ ಸ್ಟ್ಯಾಂಡ್ ಅಂದರೆ ಸಂಚಾರಿ ಬಸ್ ನಿಲ್ದಾಣ ಕಾರ್ಯನಿರ್ವಹಿಸುತ್ತಿದ್ದು, 'ಅಲ್ಲಿ ಸೇರೋಣ' ಎಂಬ ಮಹಿಳಾ ಉಪಕ್ರಮದ ಅಡಿಯಲ್ಲಿ ಈ ಚಲಿಸುವ ಬಸ್ ನಿಲ್ದಾಣ ಆರಂಭವಾಗಿದೆ. ಬೆಂಗಳೂರಿನ ಮೊದಲ ಮೊಬೈಲ್ ಬಸ್ ನಿಲ್ದಾಣ ಮೊಬಿಲಿಟಿಯ ಅಂತರವನ್ನು ನಿವಾರಿಸುವ ಉದ್ದೇಶ ಹೊಂದಿದ್ದು, ಅಸಂಘಟಿತ ವಲಯದ ಅಗತ್ಯಗಳನ್ನು ಹೇಗೆ ಪೂರೈಸಬಹುದು ಎಂಬ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ ಗಮನ ಸೆಳೆಯಲು ಮುಂದಾಗಿದೆ.

ನಿನ್ನೇವರೆಗೂ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ಹಿಂಬದಿಯ ಹೊಸನಗರದಲ್ಲಿ ಸ್ಥಾಪನೆಯಾಗಿದ್ದ ಸಂಚಾರಿ ಬಸ್ ನಿಲ್ದಾಣ, ಅಲ್ಲಿಂದ ಅಕ್ಟೋಬರ್ 9 ಮತ್ತು 10 ರಂದು ಸೀಗೆಹಳ್ಳಿ ಮತ್ತು ಪ್ರಿಯಾಂಕ ನಗರ, ಅಕ್ಟೋಬರ್ 16 ರಿಂದ 18 ರಂದು ಗುರುವಾರ ಸಂತೆ ಪ್ರದೇಶ ಮತ್ತು ಅಕ್ಟೋಬರ್ 20 ರಿಂದ 21 ರಂದು ಬೈರಸಂದ್ರದಲ್ಲಿ ಇರಲಿದೆ ಎಂದು ಅಲ್ಲಿ ಸೇರೋಣ ಸಂಸ್ಥೆಯ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಇದರಲ್ಲಿ ನೋಂದಣಿ ವ್ಯವಸ್ಥೆ ಸಹ ಇದ್ದು, ಬಸ್ ಆಗಮನ, ಮತ್ತು ನಿರ್ಗಮನ ಕುರಿತಾದ ಮಾಹಿತಿ ಸಹ ಇರಲಿದೆ. ಇದಾದ ನಂತರ ಟಿವಿ ವ್ಯವಸ್ಥೆಯೊಂದಿಗೆ ಪ್ರಯಾಣಿಕರಿಗೆ ಹಲವು ಸೌಲಭ್ಯ ನೀಡಲಿದೆ. ಈ ಕಾನ್ಸೆಪ್ಟ್ ಗೆ ಬೆಂಬಲ ಸೂಚಿಸಲು ಕುರ್ಚಿ ಮೇಲೆ ಕುಳಿತರೆ ಕೌಂಟ್ ಆಗಲಿದ್ದು, ಸುಮಾರು 300ಕ್ಕೂ ಹೆಚ್ಚು ಮಂದಿ ಸಹಮತ ಸೂಚಿಸಿದ್ದಾರೆ.

ಒಟ್ಟಾರೆ ಬಹುತೇಕ ಮಹಿಳಾ ಮಣಿಯರೆ ಸೇರಿಕೊಂಡು ಮಾಡಿರುವ ಅಲ್ಲಿ ಸೇರೋಣ ಎಂಬ ಸಂಸ್ಥೆಯ ಮೂಲಕ ಸ್ಥಾಪಿಸಿರುವ ಈ ಸಂಚಾರಿ ಬಸ್ ನಿಲ್ದಾಣ ಅಸಂಘಟಿತ ವಲಯದ ಮಹಿಳೆಯರ ಗಮನ ಸೆಳೆಯುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಸಾಕಷ್ಟು ಮಂದಿ ಪ್ರಯಾಣಿಕರಿಗೆ ಯಾವ ರೀತಿ ಬಸ್ ನಿಲ್ದಾಣ ಇರಬೇಕು ಎಂಬ ಬಗ್ಗೆ ಇದು ಕೆಲಸ ಮಾಡುತ್ತಿದ್ದು, ಸಾರಿಗೆ ಇಲಾಖೆ ಸಹ ಇವರ ಧ್ಯೇಯೋದ್ದೇಶಗಳ ಗಮನ ಹರಿಸಲಿ ಎನ್ನುವುದು ಎಲ್ಲರ ಆಶಯ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications