ಬೆಂಗಳೂರಿನಲ್ಲಿ ಮೊದಲ ಸಂಚಾರಿ ಬಸ್ ನಿಲ್ದಾಣ : ಯಾವ್ಯಾವ ದಿನ ಎಲ್ಲೆಲ್ಲಿ ಇರಲಿದೆ ಈ ಬಸ್ಸ್ಟ್ಯಾಂಡ್..?
ಬೆಂಗಳೂರು, ಅಕ್ಟೋಬರ್ 09: ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಯಥೇಚ್ಛವಾಗಿ ಹೆಚ್ಚಾಗಿದೆ. ಆದರೆ ಅದಕ್ಕೆ ತಕ್ಕಂತೆ ಪ್ರಯಾಣಿಕರಿಗೆ ಬೇಕಾದ ಮೂಲಸೌಕರ್ಯ ಇಲ್ಲ. ಹೀಗಾಗಿ ಇದರ ಕುರಿತಾಗಿ ಸರ್ಕಾರದ ಗಮನ ಸೆಳೆಯುವುದಕ್ಕೆ ಅಸಂಘಟಿತ ವಲಯದ ಮಹಿಳೆಯರು ಮುಂದಾಗಿದ್ದು, ಸಂಚಾರಿ ಬಸ್ ನಿಲ್ದಾಣ ಎಂಬ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ನಗರದಲ್ಲಿ ಮೊದಲ ಮೊಬೈಲ್ ಬಸ್ ಸ್ಟ್ಯಾಂಡ್ ಅಂದರೆ ಸಂಚಾರಿ ಬಸ್ ನಿಲ್ದಾಣ ಕಾರ್ಯನಿರ್ವಹಿಸುತ್ತಿದ್ದು, 'ಅಲ್ಲಿ ಸೇರೋಣ' ಎಂಬ ಮಹಿಳಾ ಉಪಕ್ರಮದ ಅಡಿಯಲ್ಲಿ ಈ ಚಲಿಸುವ ಬಸ್ ನಿಲ್ದಾಣ ಆರಂಭವಾಗಿದೆ. ಬೆಂಗಳೂರಿನ ಮೊದಲ ಮೊಬೈಲ್ ಬಸ್ ನಿಲ್ದಾಣ ಮೊಬಿಲಿಟಿಯ ಅಂತರವನ್ನು ನಿವಾರಿಸುವ ಉದ್ದೇಶ ಹೊಂದಿದ್ದು, ಅಸಂಘಟಿತ ವಲಯದ ಅಗತ್ಯಗಳನ್ನು ಹೇಗೆ ಪೂರೈಸಬಹುದು ಎಂಬ ನಿಟ್ಟಿನಲ್ಲಿ ಸಾರಿಗೆ ಇಲಾಖೆಯ ಗಮನ ಸೆಳೆಯಲು ಮುಂದಾಗಿದೆ.

ನಿನ್ನೇವರೆಗೂ ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ಹಿಂಬದಿಯ ಹೊಸನಗರದಲ್ಲಿ ಸ್ಥಾಪನೆಯಾಗಿದ್ದ ಸಂಚಾರಿ ಬಸ್ ನಿಲ್ದಾಣ, ಅಲ್ಲಿಂದ ಅಕ್ಟೋಬರ್ 9 ಮತ್ತು 10 ರಂದು ಸೀಗೆಹಳ್ಳಿ ಮತ್ತು ಪ್ರಿಯಾಂಕ ನಗರ, ಅಕ್ಟೋಬರ್ 16 ರಿಂದ 18 ರಂದು ಗುರುವಾರ ಸಂತೆ ಪ್ರದೇಶ ಮತ್ತು ಅಕ್ಟೋಬರ್ 20 ರಿಂದ 21 ರಂದು ಬೈರಸಂದ್ರದಲ್ಲಿ ಇರಲಿದೆ ಎಂದು ಅಲ್ಲಿ ಸೇರೋಣ ಸಂಸ್ಥೆಯ ಸದಸ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಇದರಲ್ಲಿ ನೋಂದಣಿ ವ್ಯವಸ್ಥೆ ಸಹ ಇದ್ದು, ಬಸ್ ಆಗಮನ, ಮತ್ತು ನಿರ್ಗಮನ ಕುರಿತಾದ ಮಾಹಿತಿ ಸಹ ಇರಲಿದೆ. ಇದಾದ ನಂತರ ಟಿವಿ ವ್ಯವಸ್ಥೆಯೊಂದಿಗೆ ಪ್ರಯಾಣಿಕರಿಗೆ ಹಲವು ಸೌಲಭ್ಯ ನೀಡಲಿದೆ. ಈ ಕಾನ್ಸೆಪ್ಟ್ ಗೆ ಬೆಂಬಲ ಸೂಚಿಸಲು ಕುರ್ಚಿ ಮೇಲೆ ಕುಳಿತರೆ ಕೌಂಟ್ ಆಗಲಿದ್ದು, ಸುಮಾರು 300ಕ್ಕೂ ಹೆಚ್ಚು ಮಂದಿ ಸಹಮತ ಸೂಚಿಸಿದ್ದಾರೆ.

ಒಟ್ಟಾರೆ ಬಹುತೇಕ ಮಹಿಳಾ ಮಣಿಯರೆ ಸೇರಿಕೊಂಡು ಮಾಡಿರುವ ಅಲ್ಲಿ ಸೇರೋಣ ಎಂಬ ಸಂಸ್ಥೆಯ ಮೂಲಕ ಸ್ಥಾಪಿಸಿರುವ ಈ ಸಂಚಾರಿ ಬಸ್ ನಿಲ್ದಾಣ ಅಸಂಘಟಿತ ವಲಯದ ಮಹಿಳೆಯರ ಗಮನ ಸೆಳೆಯುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ಸೇರಿದಂತೆ ಸಾಕಷ್ಟು ಮಂದಿ ಪ್ರಯಾಣಿಕರಿಗೆ ಯಾವ ರೀತಿ ಬಸ್ ನಿಲ್ದಾಣ ಇರಬೇಕು ಎಂಬ ಬಗ್ಗೆ ಇದು ಕೆಲಸ ಮಾಡುತ್ತಿದ್ದು, ಸಾರಿಗೆ ಇಲಾಖೆ ಸಹ ಇವರ ಧ್ಯೇಯೋದ್ದೇಶಗಳ ಗಮನ ಹರಿಸಲಿ ಎನ್ನುವುದು ಎಲ್ಲರ ಆಶಯ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications