3,300 ಬೆಲೆ ನಿಗದಿ; ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಕೇಂದ್ರಕ್ಕೆ ನಿಯೋಗ ಭೇಟಿ ಯಾವಾಗ?
ಬೆಂಗಳೂರು, ನವೆಂಬರ್ 08: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಮಣಿದಿದೆ. ಶುಕ್ರವಾರ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿಯಾಗಿ ರೂ.50 ಮತ್ತು ಸರ್ಕಾರದಿಂದ 50 ರೂ ಸೇರಿದಂತೆ ಪ್ರತಿ ಟನ್ ಕಬ್ಬಿಗೆ ರೂ.3,300 ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ. ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದ್ದು, ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದರು.
ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.
10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ರಾದ, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮತು ಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.
ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.3550 ನಿಗದಿಪಡಿಸಿದೆ. ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ. ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.
ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications