Get Updates
Get notified of breaking news, exclusive insights, and must-see stories!

3,300 ಬೆಲೆ ನಿಗದಿ; ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ: ಕೇಂದ್ರಕ್ಕೆ ನಿಯೋಗ ಭೇಟಿ ಯಾವಾಗ?

ಬೆಂಗಳೂರು, ನವೆಂಬರ್‌ 08: ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ಮಣಿದಿದೆ. ಶುಕ್ರವಾರ ರೂ.3,200 ಪ್ರತಿ ಟನ್ ಗೆ ನೀಡುವುದಾಗಿ ತಿಳಿಸಿದ್ದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ರೂ.3,200 ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿಯಾಗಿ ರೂ.50 ಮತ್ತು ಸರ್ಕಾರದಿಂದ 50 ರೂ ಸೇರಿದಂತೆ ಪ್ರತಿ ಟನ್ ಕಬ್ಬಿಗೆ ರೂ.3,300 ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ. ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದ್ದು, ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

The Government Has Fixed A Price Of Rs 3 300 Per Tonne For Sugarcane Growers

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ. ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ ಎಂದರು.

ಕ್ಯಾಬಿನೆಟ್ ತೀರ್ಮಾನದಂತೆ ಇಂದು ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು.

10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ರಾದ, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮತು ಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಕೇಂದ್ರ ಸರ್ಕಾರ 10-5-2025ರಂದು ಕಟಾವು ಮತ್ತು ಸಾಗಾಟ ಸೇರಿಸಿ 10.5 ರಿಕವರಿ ಇರುವ ಕಬ್ಬಿಗೆ ಪ್ರತಿ ಮೆಟ್ರಿಕ್ ಟನ್ಗೆ ರೂ.3550 ನಿಗದಿಪಡಿಸಿದೆ. ರಾಜ್ಯದಲ್ಲಿ ಕಳೆದ ವರ್ಷ 5.6 ಕೋಟಿ ಮೆ.ಟನ್ ಸಕ್ಕರೆ ಉತ್ಪಾದಿಸಲಾಗಿದ್ದು, ಈ ವರ್ಷ ಸುಮಾರು 6 ಕೋಟಿಗೂ ಹೆಚ್ಚು ಮೆ.ಟನ್ ಉತ್ಪಾದನೆ ಅಂದಾಜಿದೆ. ಇಂದು ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಅನ್ವಯವಾಗುವಂತೆ ಕಟಾವು ಮತ್ತು ಸಾಗಾಟ ವೆಚ್ಚಕ್ಕೆ ಹೊರತುಪಡಿಸಿ, 11.25 ರಿಕವರಿ ಕಬ್ಬಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಇದು ಬೆಳಗಾವಿ ಜಿಲ್ಲಾಧಿಕಾರಿ ಅವರು ಅಂತಿಮಗೊಳಿಸಿದ್ದ ದರಕ್ಕಿಂತ ರೂ.100 ಹೆಚ್ಚಾಗಿದೆ. ಇದಕ್ಕೆ ಬಹುತೇಕ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲಿಕರು ಒಪ್ಪಿಗೆ ಸೂಚಿಸಿದ್ದಾರೆ. ರಿಕವರಿ ದರಕ್ಕೆ ಅನುಗುಣವಾಗಿ ಜಿಲ್ಲೆಯಿಂದ ಜಿಲ್ಲೆಗೆ ಪ್ರತ್ಯೇಕ ದರ ನಿಗದಿಪಡಿಸಲಾಗುವುದು. ಇದಕ್ಕೆ ರೈತರು ಒಪ್ಪಿಗೆ ಸೂಚಿಸುವ ವಿಶ್ವಾಸವಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+