Liquor Prices: ಬಜೆಟ್ನಲ್ಲಿ ಬೆಲೆ ಏರಿಕೆ, ಈಗ ದುಬಾರಿ ಮದ್ಯದ ಸುಂಕ ಇಳಿಕೆಗೆ ಸರ್ಕಾರ ಚಿಂತನೆ!
ಬೆಂಗಳೂರು, ಫೆಬ್ರವರಿ.19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ. ರಾಜ್ಯದಲ್ಲಿ ಮದ್ಯದ ದರ ಮತ್ತೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಆದರೆ, ಇದರ ಜೊತೆಗೆಯೇ ಮತ್ತೊಂದು ಖುಷಿಯ ವಿಚಾರದ ಸುಳಿವನ್ನು ಸಿದ್ದರಾಮಯ್ಯ ನೀಡಿದ್ದಾರೆ.
ಮದ್ಯದ ಪ್ರಮುಖ ಬ್ರಾಂಡ್ಗಳ ಮೇಲೆ ವಿಧಿಸಿದ್ದ ಹೆಚ್ಚುವರಿ ಅಬಕಾರಿ ಸುಂಕವನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ. ದಕ್ಷಿಣದ ಇತರ ರಾಜ್ಯಗಳೊಂದಿಗೆ ಪೈಪೋಟಿ ನಡೆಸಲು, ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಐಎಂಎಲ್, ಬಿಯರ್ ಸ್ಲಾಬ್ ಪರಿಷ್ಕರಣೆ ಮಾಡಲಾಗುತ್ತದೆ.

ಮದ್ಯದ ಬೆಲೆ ಏರಿಕೆ ಬೆನ್ನಲ್ಲೆ ರಾಜ್ಯ ಸರ್ಕಾರ ಅಬಕಾರಿ ಸ್ಲಾಬ್ಗಳ ಮೇಲೆ ಇದ್ದ ತೆರಿಗೆಯನ್ನು ಕಡಿಮೆ ಮಾಡಲಿದೆ. ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ, ತೆರಿಗೆ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸಲು ಮತ್ತು ಅವುಗಳನ್ನು ನೆರೆಯ ರಾಜ್ಯಗಳೊಂದಿಗೆ ಪೈಪೋಟಿ ಮಾಡಲು, ಐಎಂಎಲ್ ಮತ್ತು ಬಿಯರ್ನ ತೆರಿಗೆ ಸ್ಲಾಬ್ಗಳನ್ನು ಪರಿಷ್ಕರಿಸಲಾಗುವುದು ಎಂದು ಹೇಳಿದ್ದರು.
ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಮೂರು ಬಾರಿ ಮದ್ಯದ ಬೆಲೆ ಏರಿಕೆಯಾಗಿದೆ. ಬಜೆಟ್ನಲ್ಲಿ ಐಎಂಎಲ್ ಹಾಗೂ ಬಿಯರ್ ಮೇಲೆ 20% ಹೆಚ್ಚುವರಿ ಅಬಕಾರಿ ಸುಂಕ ವಿಧಿಸಲಾಗಿತ್ತು. ನಂತರ ಐಎಂಎಲ್ ಮದ್ಯ, ಬಿಯರ್ ತಯಾರಿಕಾ ಕಂಪನಿಗಳು ದರ ಹೆಚ್ಚಳ ಮಾಡಿದ್ದವು. ಕಳೆದ ತಿಂಗಳು ಬಿಯರ್ ಮೇಲೆ ಮತ್ತೆ 5 %ರಷ್ಟು ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಿಸಲಾಗಿತ್ತು. ಈಗ ಸ್ಲಾಬ್ ಪರಿಷ್ಕರಣೆಯಿಂದ ಬಿಯರ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮದ್ಯಕ್ಕೆ ಸ್ಲಾಬ್ ಪ್ರಕಾರ ಬೆಲೆ ಮತ್ತು ತೆರಿಗೆ ವಿಧಿಸಲಾಗುತ್ತದೆ. ಒಟ್ಟು 18 ಸ್ಲಾಬ್ಗಳಿದ್ದು, ಮೊದಲನೆಯದರಲ್ಲಿ ಅಗ್ಗದ ಆಲೋಹಾಲ್ ಮತ್ತು 18 ರಲ್ಲಿ ಅತ್ಯಂತ ದುಬಾರಿ ಐಎಂಎಲ್ ಬರುತ್ತದೆ. ಕಳೆದ ಜುಲೈನಲ್ಲಿ ಐಎಂಎಲ್ನ ಎಲ್ಲಾ 18 ಸ್ಲಾಬ್ಗಳಲ್ಲಿ ಎಇಡಿಯಲ್ಲಿ ಶೇ. 20 ರಷ್ಟು ಹೆಚ್ಚಳ ಮಾಡಿತ್ತು. ಬಿಯರ್ ಬೆಲೆಗಳಲ್ಲಿ ಶೇ. 10 ರಷ್ಟು ಹೆಚ್ಚಾಗಿತ್ತು.
ಹೆಚ್ಚಿನ ತೆರಿಗೆಗಳು ಸೇರಿದಂತೆ ವಿವಿಧ ಕಾರಣಗಳಿಂದಾಗಿ ಐಎಂಎಲ್ನ ಉನ್ನತ ಬ್ರಾಂಡ್ಗಳು ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಹೆಚ್ಚು ಬೆಲೆ ಹೊಂದಿವೆ. ಹೀಗಾಗಿಯೇ ಬೆಲೆ ಪೈಪೋಟಿ ಕಾರಣದಿಂದ ಸ್ಲಾಬ್ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಇನ್ನು, ರಾಜ್ಯದಲ್ಲಿ ಮದ್ಯದ ಘೋಷಿತ ಸ್ಲಾಬ್ಗಳನ್ನು ಪರಿಷ್ಕರಿಸುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇದು ಪ್ರೀಮಿಯಂ ಮದ್ಯದ ಬೆಲೆ ಇಳಿಕೆಗೆ ಕಾರಣವಾಗಲಿದೆ. ಇದರ ಜೊತೆಗೆ ಅಬಕಾರಿ ತೆರಿಗೆ ಆದಾಯದಲ್ಲಿಯೂ ಇಳಿಕೆಯಾಗುವ ಸಂಭವವಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications