ಕಾರವಾರದಲ್ಲಿ ಆರ್ಭಟಿಸಿದ ಮಳೆ: ಜನಜೀವನ ಅಸ್ತವ್ಯಸ್ತ
ಕಾರವಾರ, ಜುಲೈ 20: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ಬಹುತೇಕ ರಸ್ತೆಗಳಲ್ಲಿ ಸಂಚಾರ ದುಸ್ತರವಾಗಿದೆ. ಅಲ್ಲಲ್ಲಿ ಸೃಷ್ಟಿಯಾಗಿರುವ ಹೊಂಡಗಳು ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿವೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಭಾರಿ ಗಾಳಿ ಮಳೆಗೆ ಯಲ್ಲಾಪುರ ತಾಲ್ಲೂಕಿನ ಸಾವಗದ್ದೆ ಸಮೀಪದ ಶೇಡಿಗಾಳಿ ಬಳಿ ಕೈಗಾ ಗ್ರಿಡ್ ಲೈನ್ ತಂತಿ ಕಡಿದು ಬಿದ್ದಿತು. ಕೈಗಾದಿಂದ ದಾವಣಗೆರೆಗೆ ವಿದ್ಯುತ್ ಪೂರೈಸುವ ಲೈನ್ ಇದಾಗಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ. ಕುಮಟಾ ತಾಲ್ಲೂಕಿನ ಅಘನಾಶಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಕಾರವಾರದ ಕೆಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆ ಉಂಟಾಗಿದೆ. ಜೊಯಿಡಾ ಚಾಪೋಲಿ ಬಳಿಯ ರಾಮನಗರ ರಸ್ತೆಯಲ್ಲಿಯೂ ಕೂಡ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಜತೆಗೆ ಮಳೆಯಿಂದಾಗಿ ಸಮೀಪದ ಪಾಂಡ್ರಿ ನದಿ ಉಕ್ಕಿ ಹರಿಯುತ್ತಿದೆ.

ನದಿಯಂಚಿನ ಚಾಂದೆವಾಡಿ ಗ್ರಾಮದ ಸೇತುವೆ ನೀರಿನಲ್ಲಿ ಮುಳುಗಿದ್ದು, ಶಾಲಾ ಮಕ್ಕಳು ನದಿ ದಾಟುವುದು ಕಷ್ಟಸಾಧ್ಯವಾಗಿದೆ. ಅಸು ಗ್ರಾಮ ಪಂಚಾಯ್ತಿಯ ಸದಸ್ಯ ರಮೇಶ ಗಾವಡ ಅವರು ದಾಂಡೇಲಿಯಿಂದ ರ್ಯಾಫ್ಟ್ ತರಿಸಿದ್ದು, ಮಕ್ಕಳು ಶಾಲೆಗೆ ಹೋಗಲು ಅನುವು ಮಾಡಿಕೊಟ್ಟಿದ್ದಾರೆ. ಶಿರಸಿಯಲ್ಲಿ ವಿದ್ಯುತ್ ತಂತಿಯ ಮೇಲೆ ಮರಗಳು ಬಿದ್ದು 24 ಕಂಬಗಳು ನೆಲಕ್ಕುರುಳಿ ಹೆಸ್ಕಾಂಗೆ ಅಂದಾಜು 3 ಲಕ್ಷ ಹಾನಿ ಸಂಭವಿಸಿದೆ. ಬೀಳೂರು, ಹುಡೇಲ ಕೊಪ್ಪ, ಹಳ್ಳಿಕೊಪ್ಪದಲ್ಲಿ ತಲಾ ಎರಡು, ಸೋಂದಾದಲ್ಲಿ ಆರು, ಭಾಶಿಯಲ್ಲಿ ಮೂರು, ಕುಪ್ಪಳ್ಳಿಯಲ್ಲಿ ಒಂದು ಕಂಬಮುರಿದಿದೆ.
ಅಂಕೋಲಾ ತಾಲ್ಲೂಕಿನಲ್ಲಿ ಹರಿಯುವ ಗಂಗಾವಳಿ ನದಿ ತುಂಬಿ ತೀರದ ವಾಸಿಗಳು ಹಾಗೂ ಕೇಣಿ ಗ್ರಾಮದ ಜನರು ಆತಂಕಕ್ಕೊಳಗಾಗಿದ್ದಾರೆ. ಭಾವಿಕೇರಿ ಗ್ರಾಮದ ಚಂದ್ರಭಾಗಿ ಎಸ್. ನಾಯಕ ಎನ್ನುವವರ ಮನೆಯ ಮೇಲೆ ಅಡಿಕೆ ಮರ ಬಿದ್ದ ಪರಿಣಾಮ ಚಾವಣಿಯ ರೀಪು, ಪಕಾಸಿ, ಹೆಂಚು ಸೇರಿದಂತೆ ವಿವಿಧ ಗೃಹೋಪಯೋಗಿ ವಸ್ತುಗಳು ಹಾನಿಗೊಳಗಾಗಿವೆ. 50 ಸಾವಿರ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ಅವರ್ಸಾ ದಂಡೆಭಾಗ ಗ್ರಾಮದಲ್ಲಿ ಗಾಳಿಯ ರಭಸಕ್ಕೆ ಮನೆಯ ಚಾವಣಿ, ಭಾವಿಕೇರಿಯ ಕಾನಬೀರ ಕೊಪ್ಪದ ಅಂಗನವಾಡಿ ಕೇಂದ್ರ ಚಾವಣಿಯ ತಗಡು ಹಾರಿಹೋಗಿದೆ.
ಗುಡ್ಡ ಕುಸಿದ ಪರಿಣಾಮ ಸಿದ್ದಾಪುರ ತಾಲ್ಲೂಕಿನ ಹೆಗ್ಗನೂರು ಗ್ರಾಮದ ಹರ್ತೆಬೈಲಿನ ವೆಂಕಟ್ರಮಣ ಗಣಪಯ್ಯ ಹೆಗಡೆ ಅವರ ಕೊಟ್ಟಿಗೆಮನೆಗೆ ಹಾನಿ ಸಂಭವಿಸಿದ್ದು, 75 ಸಾವಿರ ನಷ್ಟ ಅಂದಾಜು ಮಾಡಲಾಗಿದೆ.

ಸಿದ್ದಾಪುರ ಗೋಳಿಮಕ್ಕಿ ರಸ್ತೆಯಲ್ಲಿರುವ ಮಾಣಿ ಹೊಳೆ ಸೇತುವೆಗೆ ತಗುಲುವ ರೀತಿಯಲ್ಲಿ ನೀರು ಹರಿಯತೊಡಗಿದೆ. ಕಳೆದ ಮೂರು ವರ್ಷಗಳ ಹಿಂದೆ ಶಿಥಿಲವಾಗಿದ್ದ ಮಾಣಿ ಹೊಳೆ ಸೇತುವೆಯ ಮೇಲೆ ಸಂಚಾರವನ್ನು ನಿಷೇಧಿಸಲಾಗಿದೆ. ಮಳೆಯಿಂದಾಗಿ ಶಿಥಿಲ ಸೇತುವೆ ಕೊಚ್ಚಿ ಹೋಗುವ ಅಪಾಯ ಎದುರಾಗಿದೆ. ಕುಮಟಾದ ಹರಕಡೆಯಲ್ಲಿ ಇಂದು ಬೆಳಿಗ್ಗೆ ಗುಡ್ಡ ಕುಸಿತ, ಹೆಗಡೆಯಲ್ಲಿ ರಸ್ತೆಯ ಮೇಲೆ ಮರ ಉರುಳಿ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications