CM vs DCM: ಕುರ್ಚಿ ಕಾಳಗ; ಹೈಕಮಾಂಡ್ ನಾಯಕರ ಭೇಟಿ ಬಗ್ಗೆ ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 20: ನಮ್ಮ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, "ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ" ಎಂದರು.
ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ" ಎಂದು ತಿಳಿಸಿದರು.
ನಾಗಸಾಧುಗಳು ಆಶೀರ್ವಾದ ಮಾಡಿರುವ ಕುರಿತು ಮಾತನಾಡಿ, ನಾಗಸಾಧುಗಳು ಮನೆಗೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ" ಎಂದು ತಿಳಿಸಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ











Click it and Unblock the Notifications