Get Updates
Get notified of breaking news, exclusive insights, and must-see stories!

ಕೂಡಲ ಸಂಗಮದಲ್ಲಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ

ಬೆಂಗಳೂರು, ಸೆಪ್ಟೆಂಬರ್ 01 : ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.01) ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಸ್ತು ಸಂಗ್ರಹಾಲಯ ಸ್ಥಾಪನೆಗೆ ಸಲಹೆ, ಸೂಚನೆ ಪಡೆಯಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

The Karnataka Government has decided to set up an international level museum in Kudalasangama

ಬಸವಣ್ಣ ಮತ್ತಿತರ ಶರಣರು ಪ್ರತಿಪಾದಿಸಿದ ವಿಚಾರ ಧಾರೆಗಳನ್ನು ಪ್ರವಾಸಿಗರಿಗೆ ಮನಮುಟ್ಟುವಂತೆ ವಿವರಿಸುವುದು ವಸ್ತು ಸಂಗ್ರಹಾಲಯದ ಉದ್ದೇಶವಾಗಬೇಕು ಎಂದು ಹೇಳಿದರು.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಸಮ ಸಮಾಜದ ನಿರ್ಮಾಣ ಕುರಿತು ಬಸವಣ್ಣ ಅವರು ಹೇಳಿದ್ದರು. ಇದೂ ಸೇರಿದಂತೆ ಅವರ ಎಲ್ಲ ವಿಚಾರ ಧಾರೆ ವಿಶ್ವದ ಗಮನ ಸೆಳೆಯುವ ವ್ಯವಸ್ಥೆ ವಸ್ತು ಸಂಗ್ರಹಾಲಯದಲ್ಲಿರಬೇಕು ಎಂದು ತಿಳಿಸಿದರು.

ಕೂಡಲ ಸಂಗಮದ ಅಭಿವೃದ್ದಿಗೆ ಸುಮಾರು 140 ಕೋಟಿ ರು. ಮತ್ತು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 84 ಕೋಟಿ ರು. ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಅಕ್ಷರ ಧಾಮದ ಮಾದರಿಯಲ್ಲಿ ನಿರ್ಮಾಣವಾಗುವ ವಸ್ತು ಸಂಗ್ರಹಾಲಯದಲ್ಲಿ ಅಧ್ಯಯನ ಕೇಂದ್ರ, ಬಸವಣ್ಣರ ಸಂದೇಶಗಳು, ಹಂಪಿ ಮಾದರಿಯ ಸಾಲುಗಂಬಗಳು, ಶರಣ ಗ್ರಾಮ ಹೀಗೆ ಪ್ರತಿಯೊಂದು ಇರಲಿದೆ.

ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ಶಿವಾನಂದ ಪಾಟೀಲ್, ಎಸ್.ಆರ್. ಪಾಟೀಲ್ ಮತ್ತಿತರರು ಸಭೆಯಲ್ಲಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+