ಕೂಡಲ ಸಂಗಮದಲ್ಲಿ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ
ಬೆಂಗಳೂರು, ಸೆಪ್ಟೆಂಬರ್ 01 : ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಸೆ.01) ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ವಸ್ತು ಸಂಗ್ರಹಾಲಯ ಸ್ಥಾಪನೆಗೆ ಸಲಹೆ, ಸೂಚನೆ ಪಡೆಯಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಸವಣ್ಣ ಮತ್ತಿತರ ಶರಣರು ಪ್ರತಿಪಾದಿಸಿದ ವಿಚಾರ ಧಾರೆಗಳನ್ನು ಪ್ರವಾಸಿಗರಿಗೆ ಮನಮುಟ್ಟುವಂತೆ ವಿವರಿಸುವುದು ವಸ್ತು ಸಂಗ್ರಹಾಲಯದ ಉದ್ದೇಶವಾಗಬೇಕು ಎಂದು ಹೇಳಿದರು.
ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಸಮ ಸಮಾಜದ ನಿರ್ಮಾಣ ಕುರಿತು ಬಸವಣ್ಣ ಅವರು ಹೇಳಿದ್ದರು. ಇದೂ ಸೇರಿದಂತೆ ಅವರ ಎಲ್ಲ ವಿಚಾರ ಧಾರೆ ವಿಶ್ವದ ಗಮನ ಸೆಳೆಯುವ ವ್ಯವಸ್ಥೆ ವಸ್ತು ಸಂಗ್ರಹಾಲಯದಲ್ಲಿರಬೇಕು ಎಂದು ತಿಳಿಸಿದರು.
ಕೂಡಲ ಸಂಗಮದ ಅಭಿವೃದ್ದಿಗೆ ಸುಮಾರು 140 ಕೋಟಿ ರು. ಮತ್ತು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 84 ಕೋಟಿ ರು. ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.
ಅಕ್ಷರ ಧಾಮದ ಮಾದರಿಯಲ್ಲಿ ನಿರ್ಮಾಣವಾಗುವ ವಸ್ತು ಸಂಗ್ರಹಾಲಯದಲ್ಲಿ ಅಧ್ಯಯನ ಕೇಂದ್ರ, ಬಸವಣ್ಣರ ಸಂದೇಶಗಳು, ಹಂಪಿ ಮಾದರಿಯ ಸಾಲುಗಂಬಗಳು, ಶರಣ ಗ್ರಾಮ ಹೀಗೆ ಪ್ರತಿಯೊಂದು ಇರಲಿದೆ.
ಸಚಿವರಾದ ಎಂ.ಬಿ.ಪಾಟೀಲ್, ಶಾಸಕರಾದ ಶಿವಾನಂದ ಪಾಟೀಲ್, ಎಸ್.ಆರ್. ಪಾಟೀಲ್ ಮತ್ತಿತರರು ಸಭೆಯಲ್ಲಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications