ಕೋಮುಗಲಭೆ, ಪ್ರತಿಭಟನೆ ಪ್ರಕರಣಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ
34 ಪ್ರಕರಣಗಳು ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು 2009-2019 ರಿಂದ 10 ವರ್ಷಗಳ ಅವಧಿಯಲ್ಲಿ ದಾಖಲಾಗಿವೆ.
ಬೆಂಗಳೂರು, ಮಾರ್ಚ್ 8: ಕಳೆದ ಅಕ್ಟೋಬರ್ನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರವು ದ್ವೇಷ ಭಾಷಣ, ಕೋಮುಗಲಭೆಗಳು ಮತ್ತು ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ 34 ಪ್ರಕರಣಗಳನ್ನು ಕೈಬಿಟ್ಟಿದೆ ಎಂದು ವರದಿ ತಿಳಿಸಿದೆ.
ದಿ ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, 34 ಪ್ರಕರಣಗಳು ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರ ವಹಿಸಿಕೊಳ್ಳುವ ಮೊದಲು 2009-2019 ರಿಂದ 10 ವರ್ಷಗಳ ಅವಧಿಯಲ್ಲಿ ದಾಖಲಾಗಿವೆ ಎಂದು ತಿಳಿಸಿದೆ.

2013 ಮತ್ತು 2018ರ ನಡುವೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಎಸ್ಡಿಪಿಐ ಮತ್ತು ಪಿಎಫ್ಐನ ಸುಮಾರು 1,600 ಕಾರ್ಯಕರ್ತರ ವಿರುದ್ಧದ 176 ಪ್ರಕರಣಗಳನ್ನು ಕೈಬಿಡಲು ಆದೇಶಿಸಿದೆ. ಅವರಲ್ಲಿ ಹೆಚ್ಚಿನವರು ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ್ದಾರೆಂಬುದು ಗಮನಾರ್ಹ. ಆಗ ಬಿಜೆಪಿ ಪ್ರಕರಣಗಳನ್ನು ಕೈಬಿಡುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ವರದಿಯ ಪ್ರಕಾರ, 2019ರಲ್ಲಿ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಕಳೆದ ವರ್ಷ ಅಕ್ಟೋಬರ್ನಲ್ಲಿ ಬಿಜೆಪಿ ರಾಜ್ಯ ಸರ್ಕಾರವು 34 ಪ್ರಕರಣಗಳಲ್ಲಿ ಆರೋಪಿತರಾದ 341 ಜನರನ್ನು ಖುಲಾಸೆಗೊಳಿಸಲು ರಾಜ್ಯ ಪೊಲೀಸರು ಸಲ್ಲಿಸಿದ ಆಕ್ಷೇಪಣೆಗಳನ್ನು ತಳ್ಳಿಹಾಕಿತ್ತು. ಇವುಗಳಲ್ಲಿ 18 ಪ್ರಕರಣಗಳು 228 ಜನರನ್ನು ಒಳಗೊಂಡ ರೈತರು ಮತ್ತು ಇತರ ಗುಂಪುಗಳ ಪ್ರತಿಭಟನೆಗಳಿಗೆ ಸಂಬಂಧಿಸಿವೆ. ಉಳಿದ 16 ಪ್ರಕರಣಗಳು ಸಂಘ ಪರಿವಾರಕ್ಕೆ ಸಂಬಂಧಿಸಿರುವ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದೂ ಪರಿಷತ್ನ ಅಂಗಸಂಸ್ಥೆ, ಭಜರಂಗದಳ, ಮತ್ತು ಶ್ರೀರಾಮ ಸೇನೆಯ ಯುವ ಗುಂಪುಗಳ 113 ಕಾರ್ಯಕರ್ತರು ಒಳಗೊಂಡಿವೆ.

ಅಕ್ಟೋಬರ್ 1, 2022 ರಂದು ಗೃಹ ಇಲಾಖೆ ಹೊರಡಿಸಿದ ಆದೇಶವು ಅನುಬಂಧದಲ್ಲಿ ಉಲ್ಲೇಖಿಸಲಾದ 34 ಪ್ರಕರಣಗಳನ್ನು ಹಿಂಪಡೆಯಲು ಸಂಬಂಧಿಸಿದ ನ್ಯಾಯಾಲಯಗಳಲ್ಲಿ ಅಗತ್ಯ ಅರ್ಜಿಗಳನ್ನು ಸಲ್ಲಿಸುವಂತೆ ಪ್ರಾಸಿಕ್ಯೂಷನ್ ಇಲಾಖೆಗೆ ಸೂಚಿಸಿದೆ. ಸೆಪ್ಟೆಂಬರ್ 19, 2022 ರಂದು ಕ್ಲಿಯರೆನ್ಸ್ಗಾಗಿ ರಾಜ್ಯ ಕ್ಯಾಬಿನೆಟ್ಗೆ ಸಲ್ಲಿಸಿದ ದಾಖಲೆಗಳ ಪ್ರಕಾರ ಹಿಂತೆಗೆದುಕೊಳ್ಳಲು ಯೋಗ್ಯವಾದ ಪ್ರಕರಣವಲ್ಲ ಎಂದು ಘೋಷಿಸುವ ಈ 34 ಪ್ರಕರಣಗಳಲ್ಲಿ ಪ್ರತಿಯೊಂದನ್ನು ಹಿಂಪಡೆಯುವುದನ್ನು ರಾಜ್ಯ ಪೊಲೀಸ್, ಪ್ರಾಸಿಕ್ಯೂಷನ್ ಇಲಾಖೆ ಮತ್ತು ಕಾನೂನು ಇಲಾಖೆ ವಿರೋಧಿಸಿದೆ ಎಂದು ವರದಿಯು ತಿಳಿಸಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಪ್ರಕರಣಗಳಲ್ಲಿ ಕೇವಲ ಬಲಪಂಥೀಯ ಕಾರ್ಯಕರ್ತರಲ್ಲ, ರೈತರ ಪ್ರತಿಭಟನೆಗಳಲ್ಲಿ, ಭಾಷಾ ಪ್ರತಿಭಟನೆಗಳಲ್ಲಿ ಜನರು ಭಾಗಿಯಾಗಿದ್ದಾರೆ. ಈ ಪ್ರಕರಣಗಳಲ್ಲಿ ಹೆಚ್ಚಿನವು ಅಮಾಯಕರ ವಿರುದ್ಧ ಮತ್ತು ಅನಗತ್ಯವಾಗಿ ದಾಖಲಾಗಿವೆ ಎಂದು ತಿಳಿಸಿದ್ದಾರೆ.
ಏತನ್ಮಧ್ಯೆ 2020 ರ ಅಕ್ಟೋಬರ್ ಮತ್ತು ಡಿಸೆಂಬರ್ ನಡುವೆ ಕರ್ನಾಟಕದಲ್ಲಿ 'ಗೋ ಸಂರಕ್ಷಣೆ' ಸಂದರ್ಭದಲ್ಲಿ ನಡೆದ ಕೋಮು ಹಿಂಸಾಚಾರ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದ 21 ಪ್ರಕರಣಗಳನ್ನು ವಿವಿಧ ವಿಚಾರಣಾ ನ್ಯಾಯಾಲಯಗಳು ಕೈಬಿಡಲಾಗಿದೆ. ಈ ಕ್ರಮದಿಂದ ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು 206 ಹಿಂದೂ ಗುಂಪುಗಳ ಸದಸ್ಯರು ಮತ್ತು 106 ಮುಸ್ಲಿಂ ನಾಯಕರಿಗೆ ಲಾಭದಾಯಕವೆಂದು ಸಾಬೀತಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications