'ಜೇಮ್ಸ್' ಓಟಕ್ಕೆ ಕಡಿವಾಣ; ಬಿಜೆಪಿ v/s ಕಾಂಗ್ರೆಸ್ ವಾಕ್ಸಮರ
ಬೆಂಗಳೂರು ಮಾರ್ಚ್ 24: 'ಕಾಶ್ಮೀರ್ ಫೈಲ್ಸ್' ಸಿನಿಮಾ 'ಜೇಮ್ಸ್' ಓಟಕ್ಕೆ ಅಡ್ಡಿಯಾಗುತ್ತಿದೆ ಎಂಬ ಆರೋಪ ರಾಜ್ಯದೆಲ್ಲೆಡೆ ಅಪ್ಪು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ ಮೇಲೂ ರಾಜ್ಯದಲ್ಲಿ ಈ ಬಗ್ಗೆ ವಾಕ್ಸಮರ ಮುಂದುವರೆದಿದೆ. ಈ ಎರಡೂ ಸಿನಿಮಾಗಳ ನಡುವೆ ರಾಜಕೀಯ ಕದನ ಶುರುವಾಗಿದೆ. 'ಜೇಮ್ಸ್' ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಥಿಯೇಟರ್ಗಳಲ್ಲಿ ಪ್ರಸಾರ ಮಾಡುವಂತೆ ಬಿಜೆಪಿ ಹುನ್ನಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಹೀಗಾಗಿ ಕಾಶ್ಮೀರ್ ಫೈಲ್ಸ್ ವಿರುದ್ಧ ಜೇಮ್ಸ್ ವಾರ್ ನಡೆದಿದೆ. ಕಾಶ್ಮೀರ್ ಫೈಲ್ಸ್ ಚಿತ್ರಕ್ಕಾಗಿ ಜೇಮ್ಸ್ ಎತ್ತಂಗಡಿ ಮಾಡುತ್ತಿದ್ದಾರೆ. ಇದರಿಂದಾಗಿ ಒತ್ತಡ ಹಾಕುತ್ತಿದ್ದಾರೆ ಎಂದು ನಿರ್ಮಾಪಕ ಕಿಶೋರ್ ಆರೋಪ ಮಾಡಿದ್ದಾರೆ. ನಿರ್ಮಾಪಕ ಕಿಶೋರ್ ಗಂಭೀರ ಆರೋಪದ ಬೆನ್ನಲ್ಲೇ ಈ ಕಿಚ್ಚು ಹೆಚ್ಚಾಗಿದೆ. ಮಾತ್ರವಲ್ಲದೇ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಕೂಡ ಇದೇ ಆರೋಪವನ್ನು ಮಾಡಿದ್ದಾರೆ.
ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಕೊನೆ ಸಿನಿಮಾ ಸುಮಾರು ನಾಲ್ಕು ಸಾವಿರ ಸ್ಕ್ರೀನ್ಗಳಲ್ಲಿ 'ಜೇಮ್ಸ್' ಸಿನಿಮಾ ತೆರೆ ಕಂಡಿತ್ತು. ಭಾರಿ ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ಹಲವಾರು ಥಿಯೇಟರ್ಗಳಲ್ಲಿ ಕೆಲವರಿಗೆ ಸಿನಿಮಾ ನೋಡಲು ಸಾಧ್ಯವಾಗದಷ್ಟು ಸಿನಿಮಾ ಓಡುತ್ತಿದೆ. ಹೌಸ್ ಫುಲ್ ಆಗಿದೆ. ಆದರೀಗ 'ಕಾಶ್ಮೀರ್ ಫೈಲ್ಸ್' ಸಿನಿಮಾಕ್ಕಾಗಿ ಅಪ್ಪು ಸಿನಿಮಾ 'ಜೇಮ್ಸ್' ಅನ್ನು ಥಿಯೇಟರ್ಗಳಲ್ಲಿ ಕಡೆಗಣಿಸಲಾಗುತ್ತಿದೆ. ಹೀಗಾಗಿ ಕೆಲ ಸಿನಿಮಾ ಮಂದಿರಗಳಲ್ಲಿ ಜೇಮ್ಸ್ ಚಿತ್ರವನ್ನು ತೆಗೆಯಲಾಗಿದೆ, 'ಕಾಶ್ಮೀರ್ ಫೈಲ್ಸ್' ಪ್ರಸಾರ ಮಾಡಲು ಒತ್ತಡ ಹೆಚ್ಚಾಗುತ್ತಿದೆ ಎನ್ನುವ ಗಂಭೀರ ಆರೋಪ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.
ಕೇವಲ'ಕಾಶ್ಮೀರ್ ಫೈಲ್ಸ್' ಸಿನಿಮಾ ಮಾತ್ರವಲ್ಲದೆ ಥ್ರಿಬಲ್ ಆರ್ ಸಿನಿಮಾ ಕೂಡ ಮಾರ್ಚ್ 25 ರಂದು ಸಿನಿಮಾ ರಿಲೀಸ್ ಆಗಲಿದ್ದು, ಕನ್ನಡ ಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಲಿದೆ. ಈ ಸಿನಿಮಾ ಕೂಡ 'ಜೇಮ್ಸ್' ಸಿನಿಮಾಕ್ಕೆ ಅಡ್ಡಿಯಾಗೋ ಆತಂಕ ಹೆಚ್ಚಾಗಿದೆ.

ಅಪ್ಪು ಅಭಿನಯದ ಕಡೆಯ ಸಿನಿಮಾ 'ಜೇಮ್ಸ್'. ಹೀಗಾಗಿ ಈ ಚಿತ್ರ ಸಾಕಷ್ಟು ಜನ ಮನ್ನಣೆ ಪಡೆದುಕೊಂಡಿದೆ. ಆದರೆ ಈ ಸಿನಿಮಾ ಬದಲಿಗೆ ಥಿಯೇಟರ್ ನಲ್ಲಿ ಬೇರೆ ಸಿನಿಮಾ ಮುಂದುವರೆಸುವ ಹುನ್ನಾರದ ಆರೋಪವನ್ನು ವಿತರಕ ಕೆವಿ ಚಂದ್ರಶೇಖರ್ ತಳ್ಳಿ ಹಾಕಿದ್ದಾರೆ. ಸಿನಿಮಾವನ್ನು ಥಿಯೇಟರ್ಗಳಲ್ಲಿ ಉಳಿಸಿಕೊಳ್ಳುವುದು ನಿರ್ಮಾಪಕರಿಗೆ ಬಿಟ್ಟ ವಿಚಾರ ಎಂದು ಅವರು ಹೇಳಿಕೊಂಡಿದ್ದಾರೆ. ಒಂದೆಡೆ ನಾಳೆ ಆರಂಭಗೊಳ್ಳುತ್ತಿರುವ ಥ್ರಿಬಲ್ ಆರ್ ಸಿನಿಮಾ ಜೇಮ್ಸ್ಗೆ ಅಡ್ಡಿಯಾಗುತ್ತಾ ಅನ್ನೋ ಆತಂಕವಿದ್ದರೆ, ಇತ್ತ ಜೇಮ್ಸ್ ತೆರವುಗೊಳಿಸಿದರೆ ನಾವು ಪ್ರತಿಭಟನೆ ಮಾಡುತ್ತೇವೆ ಎಂದು ಅಪ್ಪು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ.
ಈ ವಿಚಾರವಾಗಿ ಮೊದಲು ಬಾಂಬ್ ಹಾಕಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು. 'ಕಾಶ್ಮೀರ್ ಫೈಲ್ಸ್' ಸಿನಿಮಾಕ್ಕಾಗಿ ಬಿಜೆಪಿ ಜೇಮ್ಸ್ ಸಿನಿಮಾವನ್ನು ಥಿಯೇಟರ್ನಿಂದ ತೆಗೆದು ಹಾಕುವಂತೆ ವಿತರಕರಿಗೆ ಒತ್ತಡ ಹೇರುತ್ತಿದೆ. ಇದಕ್ಕಾಗಿ ಎಂಎಲ್ಎ, ಸಚಿವರು ಥಿಯೇಟರ್ ಖಾಲಿ ಮಾಡ್ಸಿ ಎನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಆದರೆ ಇದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, 'ಅನವಶ್ಯಕವಾಗಿ ಸಿನಿಮಾ ತೆಗೆಯಲ್ಲ. ಅದನ್ನು ಥಿಯೇಟರ್ಗಳಲ್ಲಿ ಉಳಿಸಿಕೊಳ್ಳಲು ಸಂಬಂಧಪಟ್ಟ ವಿತರಕರು, ನಿರ್ಮಾಪಕರಿಗೆ ಹಕ್ಕಿದೆ. ಈ ಬಗ್ಗೆ ನಾನು ಶಿವರಾಜಕುಮಾರ್ ಜೊತೆ ಮಾಡಿದ್ದೇನೆ. ಕಾಂಗ್ರೆಸ್ ಸಿನಿಮಾ ವಿಚಾರವಾಗಿ ರಾಜಕೀಯ ಮಾಡುತ್ತಿದೆ ಅಂದರೆ ಅವರು ಯಾವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಜನ ಯೋಚಿಸಬೇಕು' ಎಂದರು.
Recommended Video
ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಒಂದನ್ನು ಎಚ್ ವಿಶ್ವನಾಥ್ 'ಕಾಶ್ಮೀರ್ ಫೈಲ್ಸ್ ಸಿನಿಮಾ ಹಾಕಲಿ ಬೇಡ ಅನ್ನೋದಿಲ್ಲ. ಒಂದು ಸಿನಿಮಾವನ್ನು ತೆಗೆದು ಇನ್ನೊಂದು ಸಿನಿಮಾ ಹಾಕಿದ್ರೆ ಜನ ರೊಚ್ಚಿಗೇಳುತ್ತಾರೆ' ಎಂದಿದ್ದಾರೆ.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
ಕೇರಳ ಸ್ಟೋರಿ: ಸಿನಿಮಾ ಶೂಟಿಂಗ್ ನಡುವೆಯೇ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನ ಮದುವೆಯಾದ ಮೋನಾಲಿಸಾ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ











Click it and Unblock the Notifications