Get Updates
Get notified of breaking news, exclusive insights, and must-see stories!

ನೆಲಮಂಗಲ ಬಸ್ ಬೆಂಕಿಯಲ್ಲಿ ಗಾಯಗೊಂಡಿದ್ದ ಮಮತಾ ಸಾವು

ನಿಧನರಾಗುವ ಮುನ್ನ ತಮ್ಮ ಪರಿತ್ಯಕ್ತ ಪತಿಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮಮತಾ. ಸೋಮವಾರ ತಡರಾತ್ರಿ ನಡೆದಿದ್ದ

ಬೆಂಗಳೂರು, ಫೆಬ್ರವರಿ 24: ನೆಲಮಂಗಲದಲ್ಲಿ ಇತ್ತೀಚೆಗೆ ಸಂಭವಿಸಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಕೆಂಗೇರಿಯ ನಿವಾಸಿ ಮಮತಾ ಅವರು ಶುಕ್ರವಾರ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

ಸೋಮವಾರ (ಫೆ. 20) ತಡರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಬೆಂಗಳೂರಿನ ಪೀಣ್ಯದ ಮಹಿಳೆಯೊಬ್ಬರು ಭಾಗ್ಯಮ್ಮ ಎಂಬುವರು ನಿಧನರಾಗಿದ್ದರಲ್ಲದೆ, 10 ಜನರು ಗಾಯಗೊಂಡಿದ್ದರು. ಅವರಲ್ಲಿ ಮಮತಾ ಕೂಡ ಒಬ್ಬರು. ಆದರೆ, ಅವರ ಸ್ಥಿತಿ ಗಂಭೀರವಾಗಿತ್ತು.[ನೆಲಮಂಗಲ:ಕೆಎಸ್ ಆರ್ ಟಿಸಿ ಬಸ್ ಗೆ ಬೆಂಕಿ,1 ಸಾವು,10 ಜನರಿಗೆ ಗಾಯ]

The Lady severely injured in Nelamangala Bus fire incident died

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಮತಾ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿದೇ ಅವರು ಶುಕ್ರವಾರ ಅಸುನೀಗಿದ್ದಾರೆ.[ನೆಲಮಂಗಲ ಬಸ್ ಅಗ್ನಿ ದುರಂತಕ್ಕೆ ಪೂಜಾ ಸಾಮಗ್ರಿಯೇ ಕಾರಣ]

ಆರು ತಿಂಗಳ ಹಿಂದೆ ಪತಿಯಿಂದ ಪರಿತ್ಯಕ್ತರಾಗಿದ್ದ ಮಮತಾ ತಮ್ಮ ಮಗನೊಟ್ಟಿಗೆ ಜೀವನ ಸಾಗಿಸುತ್ತಿದ್ದರು. ಆದರೆ, ಬಸ್ ದುರಂತದಲ್ಲಾದ ಸುಟ್ಟ ಗಾಯಗಳಿಂದ ಅವರು ನಿಧನರಾಗಿದ್ದಾರೆ. ಆದರೆ, ಸಾಯುವುದಕ್ಕೂ ಮುನ್ನ ಕೆಲವೇ ನಿಮಿಷಗಳ ಹಿಂದೆ ತಮ್ಮ ಪತಿ ಸುರೇಶ್ ಅವರೊಂದಿಗೆ ಮೊಬೈಲ್ ನಲ್ಲಿ ಮಾತನಾಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+