DCM Dk Shivakumar: ಐಟಿ ದಾಳಿಯಲ್ಲಿ ಸಿಕ್ಕಿರೋದು ಹಣ ಯಾರದ್ದು ಗೊತ್ತಾ?: ಡಿ.ಕೆ. ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಅಕ್ಟೋಬರ್ 17: ಕಳೆದ ಮೂರು ದಿನಗಳಿಂದ ನಡೆದ ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ದಾಖಲೆಗಳು ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ, ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು ಎಂದು ತಿಳಿಸಿದರು.
ಕಾಂಗ್ರೆಸ್ ಹೈಕಮಾಂಡ್ ನಡುಗುತ್ತಿದೆ ಎಂಬ ಆರ್. ಅಶೋಕ್ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಡುಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಅಲ್ಲ, ಬಿಜೆಪಿ ಹೈಕಮಾಂಡ್. ಈ ಭ್ರಷ್ಟಾಚಾರಕ್ಕೆಲ್ಲ ಅಡಿಪಾಯವೇ ಆರ್.ಅಶೋಕ್, ನಕಲಿ ಸ್ವಾಮಿ, ಲೂಟಿ ರವಿ, ನವರಂಗಿ ನಾರಾಯಣ, ಬ್ಲಾಕ್ ಮೇಲರ್ ಗಳು. ಈ ಅಕ್ರಮಗಳ ಹಿಂದೆ ಇವರ ಹೆಸರಿದೆ. ಅವರು ಯಾರಿಂದ ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಈ ವಿಚಾರವಾಗಿ ತನಿಖೆ ಆಗಲಿ. ಅದನ್ನೇ ನಾವು, ನಮ್ಮ ನಾಯಕರು ಹೇಳುತ್ತಿದ್ದೇವೆ. ಅವರ ಕಾಲದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ಇದಕ್ಕೆ ಅಡಿಪಾಯ.

ಆದಾಯ ತೆರಿಗೆ ಅಧಿಕಾರಿಗಳು ತಮ್ಮ ದಾಳಿ ಮುಗಿಸಿ ಅಧಿಕೃತ ಹೇಳಿಕೆ ಪ್ರಕಟಿಸಲಿ ಎಂದು ನಾವು ಇಷ್ಟು ದಿನ ಮಾತನಾಡಿರಲಿಲ್ಲ. ನಿನ್ನೆ ಐಟಿ ಅಧಿಕಾರಿಗಳು ಹೇಳಿಕೆ ಪ್ರಕಟಿಸಿದ್ದಾರೆ. ಐಟಿ, ಇಡಿ ಎಲ್ಲಾ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಈಗ ಎಲ್ಲಾ ದಾಖಲೆಗಳು ಅವರ ಬಳಿಯೇ ಇವೆ. ಅವುಗಳನ್ನು ಬಿಚ್ಚಿಡಲಿ ಎಂದು ಸವಾಲೆಸೆದರು.
ಬಿಜೆಪಿಯು ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಬಿಡುಗಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, "ಬಿಜೆಪಿಯ ಭ್ರಷ್ಟಾಚಾರ ಹಿಮಾಲಯ ಪರ್ವತದಷ್ಟಿದೆ. ಸಿಎಂ ಹುದ್ದೆಗೆ 2500 ಕೋಟಿ ಕಲೆಕ್ಷನ್ ಮಾಡಲಾಗಿತ್ತು. ಮುಖ್ಯಮಂತ್ರಿ ಕಚೇರಿಯಲ್ಲೇ ಎಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಬಿಜೆಪಿಯ ಶಾಸಕರು, ಮಾಜಿ ಮಂತ್ರಿಗಳೇ ಹೇಳಿದ್ದಾರೆ. ಈಗ ಮಾತಾಡುತ್ತಿರುವವರು ಅದನ್ನು ಒಮ್ಮೆ ನೋಡಲಿ ಎಂದು ಕುಟುಕಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications