Get Updates
Get notified of breaking news, exclusive insights, and must-see stories!

ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಮುಂದಾದ ಸರ್ಕಾರ

ಬೆಂಗಳೂರು, ಸೆಪ್ಟಂಬರ್ 07: ಒಂದು ಕಾಲದಲ್ಲಿ ಕೈಗಾರಿಕಾ ರಂಗದ ಪ್ರತಿಷ್ಠೆಯ ಸಂಕೇತವಾಗಿದ್ದು ಈಗ ಬೀಗಮುದ್ರೆ ಕಂಡಿರುವ ಭದ್ರಾವತಿಯ ಮೈಸೂರು ಪೇಪರ್ ಮಿಲ್ಸ್ (MPM) ಕಾರ್ಖಾನೆಗೆ ಮರುಜೀವ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಕೈಗಾರಿಕೆ ಇಲಾಖೆ ವ್ಯಾಪ್ತಿಯಲ್ಲಿ ಮಹತ್ವದ ಸಭೆ ಗುರುವಾರ ನಡೆಯಿತು.

ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ನೇತೃತ್ವದಲ್ಲಿ ಸಭೆ ನಡೆದಿದ್ದು, ಕಾರ್ಖಾನೆ ಸ್ಥಗಿತ ಮತ್ತು ಹಾಲಿ ಸ್ಥಿತಿಗತಿಗಳ ಕುರಿತು ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ ಮತ್ತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿದರು.

mysore-paper-mills-of-bhadravati

ಭದ್ರಾವತಿ ಮೈಸೂರು ಪೇಪರ್ ಮಿಲ್ಸ್ (ಕಾಗದ ಕಾರ್ಖಾನೆ) ಉಳಿಸಿಕೊಂಡಿರುವ ಸಾಲದ ಮೊತ್ತ, ವಿದ್ಯುತ್ ಬಿಲ್ ಮತ್ತು ಮುಂದಿನ ಹಾದಿ ಏನಾಗಿರಬೇಕು? ಎಂಬ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧ್ಯಕ್ಷತೆಯಲ್ಲಿ ಸಭೆ‌ ನಡೆಸಲು‌ ಸಚಿವರು‌ ಸೂಚಿಸಿದರು. ಈ ಸಭೆಗೆ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸಭೆಯಲ್ಲಿರುವಂತೆ ಅವರು ತಿಳಿಸಿದರು.

ಕಾರ್ಖಾನೆ ಹಾಲಿ ಪರಿಸ್ಥಿತಿ ಹೇಗಿದೆ?

ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ದಿವಾನರಾಗಿದ್ದ ಸರ್ ಎಂ ವಿಶ್ವೇಶ್ವರಯ್ಯನವರ ಕನಸಿನ ಕೂಸು ಈ ಮೈಸೂರು ಪೇಪರ್ ಮಿಲ್ಸ್. 1,482 ಕೋಟಿ ರೂಪಾಯಿ ನಷ್ಟದ ಸುಳಿಯಲ್ಲಿದೆ. ಜೊತೆಗೆ 229 ಕೋಟಿ ರೂ.ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ 2010 ರಿಂದ ಈತನಕ 850 ಕೋಟಿ ರೂ. ಸಾಲದ ರೂಪದಲ್ಲಿ ಕೊಡಲಾಗಿದೆ ಎಂದು ಹೇಳಿದರು.

mysore-paper-mills-of-bhadravati

ಈ ಮಧ್ಯೆ ಎಂಪಿಎಂ ಖಾಸಗೀಕರಣಕ್ಕೆ ಯತ್ನ ನಡೆದಿತ್ತು. ಸಂಸ್ಥೆ ಮೇಲೆ ಇರುವ ಆರ್ಥಿಕ‌ ಹೊರೆಯನ್ನು ನಿಭಾಯಿಸಲು ಹಣಕಾಸು ಇಲಾಖೆಯ ಸಹಕಾರ ಬೇಕಾಗುತ್ತದೆ. ಹೀಗಾಗಿ ಅಧಿಕಾರಿಗಳ ಸಭೆ ನಂತರ ಖಾಸಗೀಕರಣದ ರೂಪುರೇಷೆ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಾರ್ಖಾನೆ ವ್ಯಾಪ್ತಿಯಲ್ಲಿ ಅಕೇಶಿಯಾ, ನೀಲಗಿರಿ, ಬಿದಿರು

ಎಂಪಿಎಂ ವ್ಯಾಪ್ತಿಯಲ್ಲಿ ಸುಮಾರು 23 ಸಾವಿರ ಹೆಕ್ಟೇರ್ ಅರಣ್ಯ ಮತ್ತು ಅರಣ್ಯೇತರ ಭೂಮಿ ಇದ್ದು ಇಲ್ಲಿ ಸದ್ಯಕ್ಕೆ ಅಕೇಶಿಯಾ, ನೀಲಗಿರಿ ಮತ್ತು ಬಿದಿರನ್ನು ಬೆಳೆಯಲಾಗುತ್ತಿದೆ. ಒಂದು ವೇಳೆ ಕಾರ್ಖಾನೆಯನ್ನು ಗುತ್ತಿಗೆ ‌ನೀಡಿದರೂ, ಕಾರ್ಖಾನೆ ಜಾಗದಲ್ಲಿ‌, ನಿಷೇಧಿಸಿರುವ ನೀಲಿಗಿರಿ ಬೆಳೆಯಲು ಅವಕಾಶ‌ ನೀಡಬಹುದೇ ಎಂಬುದನ್ನೂ ಕೂಲಂಕುಶವಾಗಿ ಪರಿಶೀಲಿಸಬೇಕು ಎಂದು ಸಚಿವರು ವಿವರಿಸಿದರು.

ಇದಲ್ಲದೆ ಕಾಗದ ಕಾರ್ಖಾನೆ ಕೆಲವು ಉದ್ಯೋಗಿಗಳಿಗೆ ಸರ್ಕಾರದ ವಿವಿಧ ಸಂಸ್ಥೆ/ನಿಗಮಗಳಲ್ಲಿ ನೌಕರಿ ಕೊಡಿಸುವ ಕೆಲಸವೂ ಆಗುತ್ತಿದೆ. ಕೆಲವರಿಗೆ ಸ್ವಯಂ ನಿವೃತ್ತಿ ನೀಡಲಾಗಿದೆ. ಜತೆಗೆ ತಾತ್ಕಾಲಿಕ ಆಧಾರದಲ್ಲಿ ಕೆಲಸ ಮಾಡುತ್ತಿರುವ 250 ಫಾರೆಸ್ಟ್ ವಾಚರ್ ಗಳ ವೇತನ ಏರಿಕೆಗೂ ಒಂದು ಪರಿಹಾರ ರೂಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ‌ ಕಾರ್ಯದರ್ಶಿ ಸೆಲ್ವಕುಮಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಎಂಪಿಎಂ ವ್ಯವಸ್ಥಾಪಕ ನಿರ್ದೇಶಕ ಸೆಲ್ವಮಣಿ, ಎಪಿಸಿಸಿಎಫ್ ವನಶ್ರೀ ವಿಪಿನ್ ಸಿಂಗ್, ಚೀಫ್ ಆಪರೇಟಿಂಗ್ ಆಫೀಸರ್ ರವೀಂದ್ರನಾಥ್ ಮುಂತಾದವರು ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+