'ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌'

ರಾಮನಗರ, ಫೆಬ್ರವರಿ 04: ರಾಜ್ಯ ಕಾಂಗ್ರೆಸ್‌ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದ್ದು, ಕೈ ನಾಯಕರ ಬಹಿರಂಗ ಹೇಳಿಕೆಗೆ ಬ್ರೇಕ್‌ ಹಾಕುವಂತೆ ಕಾಂಗ್ರೆಸ್‌ ಹೈಕಮಾಂಡ್‌ ಖಡಕ್‌ ಸೂಚನೆ ನೀಡಿದೆ. ಕಾಂಗ್ರೆಸ್‌ ವರಿಷ್ಠರ ಹೇಳಿಕೆಗೂ ಕ್ಯಾರೆ ಎನ್ನದೆ ಮತ್ತೆ ಕಾಂಗ್ರೆಸ್‌ ಶಾಸಕರು ಬಹಿರಂಗವಾಗಿ ಮುಖ್ಯಮಂತ್ರಿವಾಗಿ ಹೇಳಿಕೆ ನೀಡುತ್ತಿದ್ದಾರೆ.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿಕೆ ಸದ್ಯ ಕೈ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಕೃತಜ್ಞತಾ ಸಮಾವೇಶದಲ್ಲಿ ಡಿಕೆಶಿ ಮುಂದಿನ ಸಿಎಂ ಎಂಬ ಹೇಳಿಕೆ ಬಗ್ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಹೇಳಿರೋದು ಚನ್ನಪಟ್ಟಣದ ಗೆಲುವಿನ ಬಗ್ಗೆ. ಚನ್ನಪಟ್ಟಣದಲ್ಲಿ ಜನ ನಮ್ಮ ಗೌರವ ಉಳಿಸಿದ್ದಾರೆ. ಅವರು ಕೊಟ್ಟಿರೋ ಶಕ್ತಿ ಡಿಕೆಶಿಗೆ ಮುಂದೆ ಅಧಿಕಾರದ ಚುಕ್ಕಾಣಿ ಹಿಡಿಯಲು ಶಕ್ತಿ ತುಂಬುತ್ತೆ ಅಂತ, ನಾನು ನಾಳೆಗೆ ಡಿಕೆಶಿ ಸಿಎಂ ಆಗ್ತಾರೆ ಅಂದಿದ್ದೀನಾ.?, ನಾವೇನು ಯಾರ ಬೆಂಬಲಿಗರೂ ಅಲ್ಲ, ಹೈಕಮಾಂಡ್ ಬೆಂಬಲಿಗರು ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

The Next Chief Minister Is DCM DK Shivakumar Says MLA Balakrishna

ಅವರವರ ನಾಯಕರು ಸಿಎಂ ಆಗಬೇಕು ಅನ್ನೋದು ಕಾರ್ಯಕರ್ತರ ಆಸೆ. ಪರಮೇಶ್ವರ್, ಎಂ.ಬಿ.ಪಾಟೀಲ್, ಸತೀಶ್‌ ಜಾರಕಿಹೋಳಿ ಅಭಿಮಾನಿಗಳಿಗೆ ಆಸೆ ಇದೆ. ಹಾಗೆಯೇ ಡಿಕೆ ಶಿವಕುಮಾರ್ ಅಭಿಮಾನಿಗಳಿಗೂ ಅವರು ಸಿಎಂ ಆಗಬೇಕು ಅನ್ನುವ ಆಸೆ ಇದೆ. ನಮ್ಮ ನಾಯಕರು ಮುಖ್ಯಮಂತ್ರಿ ಆಗಬೇಕು ಅಂತ ಕೇಳೋದ್ರಲ್ಲಿ ತಪ್ಪೇನಿದೆ. ಜನ ಮಾಜಿ ಸಿಎಂ ಪುತ್ರನ ಎದುರು ಒಬ್ಬ ಯೋಗೇಶ್ವರ್ ಗೆಲ್ಲಿಸಿದ್ದಾರೆ, ಇದರಿಂದ ಪಕ್ಷಕ್ಕೆ ಹಾಗೂ ನಮಗೆ ಗೌರವ ಸಿಕ್ಕಿದೆ. ಇದಕ್ಕೆ ಶ್ರಮ ಹಾಕಿದ ಡಿ ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಸಿಗುತ್ತೆ ಎಂದು ಹೇಳಿದರು.

ರಾಜ್ಯಕ್ಕೆ ಅನುದಾನ ತರುವ ಕುರಿತು ಯಾವೊಬ್ಬ ಮಂತ್ರಿಯೂ ನನ್ನ ಸಂಪರ್ಕ ಮಾಡಿಲ್ಲ ಎಂಬ ಎಚ್‌ ಡಿ ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಿ, ಈ ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ರಲ್ಲ. ಆಗ ಬೇರೆ ಪಕ್ಷದ ಸಂಸದರು, ಸಚಿವರ ಜೊತೆ ಚರ್ಚೆ ಮಾಡಿದ್ರಾ.? ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಚಿತ್ರಣ ಗೊತ್ತಿಲ್ವಾ.? ಅವರು ಕೇಳಲಿಲ್ಲ ಅಂದ್ರೆ ನೀವು ತರಲ್ವಾ.?, ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಇಲ್ಲ. ರಾಜ್ಯಕ್ಕೆ ಬಜೆಟ್‌ನಲ್ಲಿ ಯಾವುದೇ ಕೊಡುಗೆ ಇಲ್ಲ. ನಾವು ಕಾಲು ಹಿಡಿದುಕೊಂಡು ಕೇಳಬೇಕಾ.?, ನಿಮ್ಮತ್ರ ದಯಾಭಿಕ್ಷೆ ಕೇಳಬೇಕಾ.?, ಜನ ನಿಮ್ಮನ್ನ ಕೇಳಲಿ ಅಂತ ಗೆಲ್ಲಿಸಿದ್ದಾರಾ.?, ನಿಮ್ಮ ಕೆಲಸ ಏನು, ನಿಮ್ಮ ಡ್ಯೂಟಿ ನೀವು ಮಾಡಿ. ಅದನ್ನ ಬಿಟ್ಟು ಅವರು ಕೇಳಲಿಲ್ಲ, ಇವರು ಕೇಳಲಿಲ್ಲ ಅಂತ ಕಥೆ ಹೇಳಬೇಡಿ. ಕೇಂದ್ರದಲ್ಲಿ ನಿಮ್ಮದು ಏನು ನಡೆಯಲ್ವಾ.?, ಮೋದಿಯವರ ಮುಂದೆ ನಿಮ್ಮ ಬೇಳೆಕಾಳು ಬೇಯಲ್ವಾ.? ಎಂದು ಪ್ರಶ್ನಿಸಿದ್ದಾರೆ.

ನಾವು ಕುಮಾರಸ್ವಾಮಿ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ವಿ. ಆದರೆ, ಇವರು ಕೂಡಾ ಇತರ ಮಂತ್ರಿಗಳ ರೀತಿ ಆಗೋದ್ರು. ಇವರಿಗೆ ಕೇಂದ್ರದಲ್ಲಿ ಗೌರವ ಇಲ್ಲ ಅಂತ ಅರ್ಥ ಆಯ್ತು.!, ಮೋದಿ, ಅಮಿಶ್ ಶಾ ಹತ್ರ ಇವರಿಗೆ ಗೌರವ ಇಲ್ಲ, ಅಷ್ಟಕಷ್ಟೇ ಅಂತ ಗೊತ್ತಾಯ್ತು. ಇವರು ಕರ್ನಾಟಕದವರೇ ಅಲ್ವಾ, ಇಲ್ಲಿನ ಸಮಸ್ಯೆ ಗೊತ್ತಿಲ್ವಾ.?, ಸಮಸ್ಯೆ ಬಗೆಹರಿಸಿ ಅವರೇ ಕ್ರೆಡಿಟ್ ತೆಗೆದುಕೊಳ್ಳಲಿ ಎಂದು ಕಾಂಗ್ರೆಸ್‌ ಶಾಸಕ ಬಾಲಕೃಷ್ಣ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+