BPL Card: ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : ಹೊಸ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ
ಬೆಂಗಳೂರು, ನವೆಂಬರ್ 20: ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದರು. ಇದೀಗ ರಾಜ್ಯದ ಬಡಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾಗಾಂಧಿ ಅಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕ ಆಯೋಜಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ರಾಜ್ಯದ ಯಾವ ಬಡ ಕುಟುಂಬದವರು ಅನ್ನಭಾಗ್ಯ ಯೋಜನೆಯಿಂದ ವಂಚಿತವಾಗಬಾರದು. ಇದಕ್ಕಾಗಿ ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕೆಲವು ಅನರ್ಹರು ಸೌಲಭ್ಯ ಪಡೆದುಕೊಂಡರೂ ಚಿಂತೆ ಇಲ್ಲ. ಅರ್ಹರು ಅನ್ನಭಾಗ್ಯ ಯೋಜನೆಯಿಂದ ವಂಚಿತರಾಗಬಾರದು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಸರ್ಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತಿದೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ. ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು ಎಂದರು.
ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಸಾಮಾಜಿಕ ನ್ಯಾಯ , ಜಾತ್ಯಾತೀತ ತತ್ವ, ಸಂವಿಧಾನ, ಪ್ರಜಾಪ್ರಭುತ್ವಗಳಲ್ಲಿ ಅಪಾರವಾದ ನಂಬಿಕೆ ಇಟ್ಟು ಅದರಂತೆ ನಡೆಯುವ ಪಕ್ಷ ಎಂದರು.
ಈಗ ಅಧಿಕಾರದಲ್ಲಿರುವ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿರುವ ಪಕ್ಷ. ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ವಿವರಿಸಿದರು.
ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇಕಾಂಗ್ರೆಸ್ ಪಕ್ಷ.
ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದು ಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಅಧಿಕಾರವನ್ನು ಮಹಿಳೆಯರಿಗೆ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದ ಇತಿಹಾಸವನ್ನು ನೆನಪಿಸಿ ಬಿಜೆಪಿ ಹೇಗೆ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ ಎನ್ನುವುದನ್ನು ವಿವರಿಸಿ, ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು ಎಂದು ಪ್ರಶ್ನಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications