ಸದ್ಯದಲ್ಲೇ ಮನೆಯ ಬಾಗಿಲಿಗೆ ಅನ್ನಭಾಗ್ಯದ ಅಕ್ಕಿ: ಈ ಯೋಜನೆಗೆ ಯಾರ್ಯಾರು ಅರ್ಹರು..?
ಬೆಂಗಳೂರು, ಅಕ್ಟೋಬರ್ 17: ರಾಜ್ಯದಲ್ಲಿ ಯಾರೋಬ್ಬರೂ ಹಸಿವಿನಿಂದ ಇರಬಾರದು ಎಂದು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಂದು ಜನರಿಗೆ ಅನುಕೂಲಕರವಾದ ವ್ಯವಸ್ಥೆಗೆ ಮುಂದಾಗಿದ್ದಾರೆ.
ಅನ್ನಭಾಗ್ಯದ ಉಚಿತ ಅಕ್ಕಿ ಜೊತೆಗೆ ಶೀಘ್ರದಲ್ಲಿಯೇ ಅನ್ನಭಾಗ್ಯ ಡೋರ್ ಡೆಲಿವರಿ ಸರ್ವಿಸ್ ಸಿಗಲಿದ್ದು ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರದಿಂದ ಹೊಸ ಉಡುಗೊರೆ ದೊರೆಯಲಿದೆ. ಹಾಗಿದ್ದರೆ ಅನ್ನಭಾಗ್ಯದ ಅಕ್ಕಿಯನ್ನು ಸರ್ಕಾರ ನೇರವಾಗಿ ಮನೆಬಾಗಿಲಿಗೆ ತಲುಪಿಸುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ಓದಿ.

5 ಕೆಜಿ ಅಕ್ಕಿ ಬದಲು ದುಡ್ಡು ಹಾಕುವ ಅನ್ನಭಾಗ್ಯ ಹಣದ ಯೋಜನೆ ಈ ತಿಂಗಳು ಮುಂದುವರೆಯುವ ಸಾಧ್ಯತೆ ಇದೆ. ಇದರ ಮಧ್ಯೆ ಆಹಾರ ಇಲಾಖೆ ಮಗದೊಂದು ಸಿಹಿಸುದ್ದಿ ಕೊಟ್ಟಿದೆ. ಶೀಘ್ರದಲ್ಲಿಯೇ ಅನ್ನಭಾಗ್ಯದ ಡೋರ್ ಡೆಲಿವರಿ ಸರ್ವಿಸ್ ಆರಂಭವಾಗಲಿದೆ.
ಹಾಗಂತ ಎಲ್ಲರಿಗೂ ಈ ಸೇವೆ ಲಭ್ಯ ಇರುವುದಿಲ್ಲ. ಬದಲಾಗಿ 60 ವರ್ಷ ಮೇಲ್ಪಟ್ಟ ಬಿಪಿಎಲ್ ಪಡಿತರ ಚೀಟಿ ಇರುವವರಿಗೆ ಹಾಗೂ ಅವ ಮನೆಯಲ್ಲಿ ಒಬ್ಬರೇ ಇದ್ದರೆ ಅಂದರೆ ಪಡಿತರ ಚೀಟಿ ಪ್ರಕಾರ ಒಬ್ಬರೇ ಸದಸ್ಯರಾಗಿದ್ದರೆ, ಅವರ ಮನೆಬಾಗಿಲಿಗೆ ಅನ್ನಭಾಗ್ಯದ ಅಕ್ಕಿ ಹಾಗೂ ನ್ಯಾಯಬೆಲೆ ಅಂಗಡಿಯಲ್ಲಿ ಸಿಗುವ ಇತರ ಸೌಲಭ್ಯವನ್ನು ತಲುಪಿಸುವ ಕೆಲಸವನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ.
ರಾಜ್ಯಾದ್ಯಂತ ಕೆಲವೇ ದಿನದಲ್ಲಿ ಈ ಯೋಜನೆಗೆ ಚಾಲನೆ ಸಿಗಲಿದೆ. ಸದ್ಯ ಕರ್ನಾಟಕದಲ್ಲಿ ಒಟ್ಟು 10 ಸಾವಿರ ರೇಷನ್ ಕಾರ್ಡ್ನಲ್ಲಿ 60 ವರ್ಷ ಮೇಲ್ಪಟ್ಟ ಏಕಸದಸ್ಯರಿರುವ ಪಡಿತರ ಚೀಟಿ ಹೊಂದಿರುವವರು ಇದ್ದಾರೆ. ಈ ತಿಂಗಳಲ್ಲಿಯೇ ಈ ಯೋಜನೆ ಜಾರಿಗೆ ಆಹಾರ ಇಲಾಖೆ ಪ್ರಯತ್ನ ಪಡುತ್ತಿದೆ. ನಿಜವಾಗಿಯೂ ಇದು ಉತ್ತಮ ಜನಸ್ನೇಹಿ ಯೋಜನೆಯಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಯಾವುದೇ ವಿಳಂಬವಾಗದೇ ಈ ಯೋಜನೆ ಜಾರಿಯಾದರೆ ವಯಸ್ಸಾದ ವೃದ್ಧರಿಗೆ ಬಹಳಷ್ಟು ಸಹಾಯವಾಗಲಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications