"ರಾಜ್ಯ ಸರ್ಕಾರ ನಟ ಕಿಚ್ಚ ಸುದೀಪ್ ಟಾರ್ಗೆಟ್ ಮಾಡಿದೆ"
ಬೆಂಗಳೂರು, ಅಕ್ಟೋಬರ್ 09: ಬಿಗ್ ಬಾಸ್ ಕಾರ್ಯಕ್ರಮದ ಮನೆಗೆ ಬೀಗ ಹಾಕಿದೆ. ಇದೇನು ಫ್ಯಾಕ್ಟರಿಯೇ? ಮಾಲಿನ್ಯ ನಿಯಂತ್ರಣ ಮಂಡಳಿಗೂ ಇದಕ್ಕೂ ಏನು ಸಂಬಂಧ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಇಲ್ಲಿ ಅನಾರೋಗ್ಯಕರ ಹೊಗೆ ಸೂಸುವ ಕೆಲಸ ನಡೆದಿದೆಯೇ? ಅಂಥ ಫ್ಯಾಕ್ಟರಿಗಳನ್ನು ಇವರು ಮುಚ್ಚಿಲ್ಲ, ಅಲ್ಲಿ ಮಾತ್ರ ಹೊಂದಾಣಿಕೆ. ಇಲ್ಲೇನಿದೆ? ಇದು ಒಂದು ಮನೆಯ ಚಟುವಟಿಕೆ. ಇನ್ನು ಮುಂದೆ ಮನೆ ಮನೆಗೂ ಮಾಲಿನ್ಯ ನಿಯಂತ್ರಣ ಮಂಡಳಿ ಸರ್ಟಿಫಿಕೇಟ್ ಬೇಕೇ ಎಂದು ಕೇಳಿದರು.
ಈ ಮೂಲಕ ರಾಜ್ಯ ಸರ್ಕಾರವೂ ನಟ ಕಿಚ್ಚ ಸುದೀಪ್ ಅವರನ್ನು ಟಾರ್ಗೆಟ್ ಮಾಡಿದೆ. ರಾಜಣ್ಣ, ನಾಗೇಂದ್ರ ಅವರನ್ನು ಟಾರ್ಗೆಟ್ ಮಾಡಿ ಆಗಿದೆ. ಈಗ ಸುದೀಪ್ ಅವರನ್ನು ಟಾರ್ಗೆಟ್ ಮಾಡಿದ್ದಾರೆ ಎಂದರೆ ಯಾರನ್ನು ಗುರಿ ಮಾಡಿದ್ದಾರೆಂದು ತಿಳಿದುಕೊಳ್ಳಿ ಎಂದು ತಿಳಿಸಿದರು. ಇದು ಜನಾಂಗೀಯ ಟಾರ್ಗೆಟ್ ಆಗುತ್ತದೆ. ಎಚ್ಚರದಿಂದ ಇರುವುದು ಒಳ್ಳೆಯದು, ಜನ ಇದನ್ನು ಸಹಿಸುವುದಿಲ್ಲ. ನಟ್ ಬೋಲ್ಟ್ ನೀವು ಯಾರಿಗೆ ಟೈಟ್ ಮಾಡಲು ಹೊರಟಿದ್ದೀರೋ ಅವರೆಲ್ಲ ಸೇರಿ ಸರಕಾರದ ನಟ್ ಮತ್ತು ಬೋಲ್ಟ್ ಟೈಟ್ ಮಾಡುವ ಕಾಲ ಹತ್ತಿರ ಬಂದಿದೆ ಎಂದು ತಿಳಿಸಿದರು.

ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಔಷಧಿಗಳ ಕೊರತೆ ಎದ್ದು ಕಾಣದಂತೆ ರಾಜ್ಯ ಸರಕಾರ ನೋಡಿಕೊಳ್ಳಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಸುಮಾರು 75 ರಷ್ಟು ಔಷಧಗಳು ಇಲ್ಲಿ ಸಿಗುತ್ತವೆ. ಉಳಿದವನ್ನು ಸರಕಾರ ಒದಗಿಸಬೇಕಿದೆ. ಬಡವರಿಗೆ ಔಷಧಿ ಅಂಗಡಿಗಳಲ್ಲಿ ಹೋಗಿ ಕೊಳ್ಳುವ ಶಕ್ತಿ ಇರುವುದಿಲ್ಲ, ಇದನ್ನು ಸರಕಾರ ಸೂಕ್ಷ್ಮವಾಗಿ ಗಮನಿಸಬೇಕು ಎಂದು ಒತ್ತಾಯಿಸಿದರು.
ವೈದ್ಯರ ಕೆಲವು ಕೊರತೆಗಳೂ ಎದ್ದು ಕಾಣುತ್ತವೆ ಎಂದು ತಿಳಿಸಿದ ಅವರು, ಅವರನ್ನು ಕೇಳಿದ್ದೇನೆ. ಕೆಲವು ಭಾಗಗಳಲ್ಲಿ ಹಿರಿಯ ವೈದ್ಯರು ರೋಗಿಗಳನ್ನು ಸರಿಯಾಗಿ ನೋಡುವುದಿಲ್ಲ ಎಂಬ ದೂರುಗಳಿತ್ತು. ನಮ್ಮ ಮುತುವರ್ಜಿಯಲ್ಲೇ ಎಲ್ಲವೂ ನಡೆಯುತ್ತದೆ. ಎಂಬಿಬಿಎಸ್ ತರಬೇತಿಗೆ ಬಂದವರಿಗೆ ಪಾಠ ಹೇಳುವಾಗ ಜೊತೆಯಲ್ಲಿ ಇಟ್ಟುಕೊಳ್ಳುತ್ತೇವೆ. ನಾವೇ ಚಿಕಿತ್ಸೆ ಕೊಡುತ್ತೇವೆ ಎಂದಿದ್ದಾಗಿ ವಿವರಿಸಿದರು.
ತುಂಬ ಹಿರಿಯ ವೈದ್ಯರು ಕೆಲವೊಮ್ಮೆ ಇಲ್ಲಿಂದ ಬೇರೆ ಬೇರೆ ಆಸ್ಪತ್ರೆಗೆ ಹೊರಟು ಹೋಗುತ್ತಾರೆ. ಇದನ್ನು ಸರಕಾರ ತಡೆಯಬೇಕಿದೆ. ಇಲ್ಲಿ ಬರುವ ಅನಾರೋಗ್ಯಪೀಡಿತರನ್ನು ಕಾಪಾಡುವುದು ಹಿರಿಯ ವೈದ್ಯರ ಕರ್ತವ್ಯ. ಅವರನ್ನು ಹೊರಗಡೆ ಹೋಗಲು ಬಿಡಬಾರದು ಎಂದು ತಿಳಿಸಿದರು. ವೈದ್ಯರ ಕೊರತೆ ಆಗದಂತೆ ಸರಕಾರ ನೋಡಿಕೊಳ್ಳಬೇಕು. ನರ್ಸ್ ಮತ್ತಿತರ ಸಿಬ್ಬಂದಿ ಕೊರತೆ ಇದ್ದು ಅದನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಕೆಲವು ಸಂದರ್ಭಗಳಲ್ಲಿ ಸ್ವಚ್ಛತೆಯ ಕೊರತೆ ಇದೆ. ಆ ಕಡೆ ಗಮನ ಕೊಡಬೇಕು ಎಂದು ಹೇಳಿದರು. ಶುಶ್ರೂಷೆ ಕೊಡುವ ಜಾಗದಲ್ಲಿ ಸ್ವಚ್ಛತೆಯ ಕೊರತೆಯಿಂದ ರೋಗ ರುಜಿನಗಳು ಹರಡುವ ಹಾಗೆ ಆಗಬಾರದು ಎಂದು ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications